ಶಿವರಾಜ್ ಕುಮಾರ್ ಅವರನ್ನ ಅಭಿಮಾನಿಗಳು ಪ್ರೀತಿಯಿಂದ ಸೆಂಚ್ಯುರಿ ಸ್ಟಾರ್, ಹ್ಯಾಟ್ರಿಕ್ ಹೀರೋ,

ಸ್ಯಾಂಡಲ್ ವುಡ್ ನ ಚಿರ ಯುವಕ ಶಿವರಾಜ್ ಕುಮಾರ್ ಅವರನ್ನ ಅಭಿಮಾನಿಗಳು ಪ್ರೀತಿಯಿಂದ ಸೆಂಚ್ಯುರಿ ಸ್ಟಾರ್, ಹ್ಯಾಟ್ರಿಕ್ ಹೀರೋ, ಕರುನಾಡ ಚಕ್ರವರ್ತಿ ಅಂತೆಲ್ಲಾ ಕರೆಯುತ್ತಾರೆ. ಸಿನಿಮಾ ರಂಗದಲ್ಲಿ ಶಿವರಾಜ್ ಕುಮಾರ್ ಎಂದೇ ಫೇಮಸ್ ಆದ ಶಿವರಾಜ್ ಕುಮಾರ್ ನಿಜವಾದ ಹೆಸರು ಬೇರೆಯದ್ದೇ ಇದೆ ಅಂತ ಸ್ವತಃ ನಟ ಶಿವರಾಜ್ ಕುಮಾರ್ ಹೇಳಿಕೊಂಡಿದ್ದಾರೆ.

ಪಾಸ್ ಪೋರ್ಟ್, ಬ್ಯಾಂಕ್ ಅಕೌಂಟ್, ಸರಕಾರಿ ದಾಖಲಾತಿಗಳಲ್ಲಿ ಶಿವರಾಜ್ ಕುಮಾರ್ ಹೆಸರು ಬೇರೆಯಾಗಿದ್ದು, ಸಿನಿಮಾ ರಂಗದಲ್ಲಿ ಮಾತ್ರ ಶಿವರಾಜ್ ಕುಮಾರ್ ಎಂದಿದೆಯಂತೆ.

ನಿನ್ನೆ ಮೈಸೂರಿನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ‘ನನ್ನ ನಿಜವಾದ ಹೆಸರು ಶಿವರಾಜ್ ಕುಮಾರ್ ಅಲ್ಲ, ಬೇರೆಯದ್ದೇ ಇದೆ’ ಎಂದು ಹೇಳುವ ಮೂಲಕ ಅಚ್ಚರಿ ಮೂಡಿಸಿದ್ದಾರೆ.

ಕಾರ್ಯಕ್ರಮದಲ್ಲಿ ಮಾತನಾಡಿದ ಶಿವಣ್ಣ, ‘ನನ್ನ ಹೆಸರು ನಾಗರಾಜು ಶಿವಪುಟ್ಟಸ್ವಾಮಿ’ ಎಂದು ಹೇಳಿದ್ದಾರೆ. ಈ ಹಿಂದೆ ಡಾ.ರಾಜ್ ಕುಮಾರ್ ಅವರು ಅದೆಷ್ಟು ಬಾರಿ ಶಿವರಾಜ್ ಕುಮಾರ್ ಕುರಿತು ಮಾತನಾಡುವಾಗ ತಮ್ಮ ತಂದೆಯ ಹೆಸರನ್ನೇ ಶಿವಣ್ಣನಿಗೆ ಇಟ್ಟಿದ್ದು ಎಂದು ಹೇಳಿದ್ದಾರೆ. ಶಿವಪುಟ್ಟಸ್ವಾಮಿ ನಿಜವಾದ ಹೆಸರು ಎಂದೂ ಹೇಳಿದ್ದಾರೆ. ಇಂದು ಬಹಿರಂಗವಾಗಿಯೇ ಶಿವರಾಜ್ ಕುಮಾರ್ ತಮ್ಮ ನಿಜವಾದ ಹೆಸರನ್ನು ಹೇಳಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://plಇay.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಶಿವಮೊಗ್ಗ ಜಿಲ್ಲೆಯಲ್ಲಿ ಮಳೆಯ ಆರ್ಭಟ ಮುಂದುವರೆದಿದೆ.

Thu Jul 7 , 2022
ಶಿವಮೊಗ್ಗ ಜಿಲ್ಲೆಯಲ್ಲಿ ಮಳೆಯ ಆರ್ಭಟ ಮುಂದುವರೆದಿದೆ. ಮಳೆಯಿಂದಾಗಿ ಜಿಲ್ಲೆಯಾದ್ಯಂತ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಮಳೆಯಿಂದಾಗಿ ಜಲಾಶಯದ ಒಳ ಹರಿವಿನ ಪ್ರಮಾಣ ಹೆಚ್ಚತೊಡಗಿದೆ. ಲಿಂಗನಮಕ್ಕಿ ಜಲಾಶಯಕ್ಕೆ 57 ಸಾವಿರ ಕ್ಯೂಸೆಕ್ಸ್ ನೀರು ಹರಿದು ಬರುತ್ತಿದ್ದು, ಯೋಜನಾ ಪ್ರದೇಶ ವ್ಯಾಪ್ತಿಯಲ್ಲಿ ವ್ಯಾಪಕವಾಗಿ ಮಳೆ ಸುರಿಯುತ್ತಿದೆ. ತುಂಗಾ ನದಿ ಪಾತ್ರದಲ್ಲೂ ಧಾರಾಕಾರ ಮಳೆ ಸುರಿಯುತ್ತಿದ್ದು, ಗಾಜನೂರಿನ ತುಂಗಾ ಅಣೆಕಟ್ಟೆಯಿಂದ 46 ಸಾವಿರ ಕ್ಯೂಸೆಕ್ಸ್ ನೀರನ್ನು ನದಿಗೆ ಬಿಡಲಾಗಿದೆ. ಇದರಿಂದಾಗಿ ತುಂಗಾ ನದಿ ಅಪಾಯ ಮಟ್ಟ […]

Advertisement

Wordpress Social Share Plugin powered by Ultimatelysocial