ನಾನು ರಾಜ್ಯ ರಾಜಕಾರಣಕ್ಕೆ ಮರಳುತ್ತಿಲ್ಲ: ಶೋಭಾ ಕರಂದ್ಲಾಜೆ ಸ್ಪಷ್ಟನೆ…

 

ಮೈಸೂರು: ನಾನು ರಾಜ್ಯ ರಾಜಕಾರಣಕ್ಕೆ ಮರಳುತ್ತೇನೆ ಎಂಬ ಊಹಾಪೋಹದ ಸುದ್ದಿಗಳಿಗೂ ನಮಗೂ ಸಂಬಂಧವಿಲ್ಲ. ನಾನು ಕೇಂದ್ರ ಸಚಿವೆಯಾಗಿ ದೊಡ್ಡ ಅವಕಾಶವನ್ನು ನಮ್ಮ ಪಕ್ಷ ನೀಡಿದೆ. ರಾಜ್ಯದಲ್ಲಿ ಹರಡುತ್ತಿರುವ ಸುದ್ದಿಗಳಿಗೂ ನನಗೂ ಸಂಬಂಧವಿಲ್ಲ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯರ ಗೋಮುಖ ವ್ಯಾಘ್ರತನ ಇಡೀ ರಾಜ್ಯದ ಜನರಿಗೆ ಗೊತ್ತಿದೆ. ಮೈಸೂರಿನ ಅಭಿವೃದ್ಧಿಗೆ ಅವರ ಕೊಡುಗೆ ಏನು ಎಂದು ಅವರು ಎದೆ ಮುಟ್ಟಿಕೊಂಡು ಹೇಳಲಿ. ಐದು ವರ್ಷದ ಆಡಳಿತದಲ್ಲಿ ಒಂದು ಅಭಿವೃದ್ಧಿ ನಿರ್ಧಾರಗಳನ್ನ ಕೈಗೊಳ್ಳಲಿಲ್ಲ. ಲಿಂಗಾಯತರನ್ನ ಒಡೆಯುವುದು, ಹಿಂದುಳಿದ ಜಾತಿಯನ್ನು ಒಡೆಯುವುದು ಅವರು ಮಾಡಿದ ಅಭಿವೃದ್ಧಿ ಕಾರ್ಯ. ಅಂದು ಕೆಲಸ ಮಾಡದವರು ಮುಂದೆ ಮಾಡುತ್ತೇವೆ ಎಂದು ಸುಳ್ಳು ಭರವಸೆ ನೀಡುತ್ತಿದ್ದಾರೆ ಎಂದು ಟೀಕಿಸಿದರು.

ಸಿದ್ದರಾಮಯ್ಯನವರ ಎಲ್ಲಾ ಹೇಳಿಕೆಗಳು ಗಿಮಿಕ್. ಸಿಎಂ ಸ್ಥಾನಕ್ಕಾಗಿ ಕಾಂಗ್ರೆಸ್ ನಲ್ಲಿ ಡಿಕೆ. ಶಿವಕುಮಾರ್ ಮತ್ತು ಸಿದ್ದರಾಮಯ್ಯ ನಡುವೆ ಪೈಪೋಟಿ ನಡೆಯುತ್ತಿದೆ. ಸಿದ್ದರಾಮಯ್ಯನವರಿಗೆ ಸಿಎಂ ಸ್ಥಾನ ಸಿಗುವುದು ಎಂಬುದು ಮನೆ ಮುಂದೆ ನಾಳೆ ಬಾ ಎಂಬ ಬೋರ್ಡ್ ಇದ್ದಂತೆ. ಕಾಂಗ್ರೆಸ್ ನೊಳಗಿನ ಪೈಪೋಟಿಗಿಳಿದ ಎಲ್ಲಾ ಗಿಮಿಕ್ ಗಳ ಹೇಳಿಕೆಗಳನ್ನ ಸಿದ್ದರಾಮಯ್ಯ ನೀಡುತ್ತಿದ್ದಾರೆ ಎಂದು ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಸಿಎಂ ನಗರ ಪ್ರದಕ್ಷಿಣೆ ಬೆನ್ನಲ್ಲೇ, ವಿಪಕ್ಷ ನಾಯಕ ಸಿದ್ಧರಾಮಯ್ಯ ಸಿಟಿ ರೌಂಡ್ಸ್...

Thu May 19 , 2022
ಬೆಂಗಳೂರು: ನಗರದಲ್ಲಿ ಸುರಿದಂತ ಭಾರೀ ಮಳೆಯಿಂದ ಉಂಟಾದಂತ ಅವಾಂತರಕ್ಕೆ ಜನರು ತತ್ತರಿಸಿ ಹೋಗಿದ್ದಾರೆ. ಜನರ ಕಷ್ಟ, ಸಮಸ್ಯೆ ಪರಿಹರಿಸೋ ನಿಟ್ಟಿನಲ್ಲಿ, ಸಿಎಂ ಬಸವರಾಜ ಬೊಮ್ಮಾಯಿಯವರು ( CM Basavaraj Bommai ) ನಗರ ಪ್ರದಕ್ಷಿಣೆ ನಡೆಸುತ್ತಿದ್ದಾರೆ. ಇತ್ತ ಸಿಎಂ ನಗರ ಪ್ರದಕ್ಷಿಣೆ ಬೆನ್ನಲ್ಲೇ ವಿಪಕ್ಷ ನಾಯಕ ಸಿದ್ಧರಾಮಯ್ಯ   ಕೂಡ ಸಿಟಿ ರೌಂಡ್ಸ್ ಗೆ ಮುಂದಾಗಿದ್ದಾರೆ. ಹೌದು.. ಮಾಜಿ ಸಿಎಂ ಸಿದ್ಧರಾಮಯ್ಯ ಅವರು, ಇಂದು ಬೆಂಗಳೂರಿನ  ನೆರೆ, ಪ್ರವಾಹ ಪೀಡಿತ ಪ್ರದೇಶಗಳಿಗೆ […]

Advertisement

Wordpress Social Share Plugin powered by Ultimatelysocial