ಶ್ರೀಗಳ ಅಪೇಕ್ಷೆಯಂತೆಯೇ ಜ್ಞಾನಯೋಗಾಶ್ರಮದಲ್ಲಿ ಸಂಜೆ 5ಕ್ಕೆ ಸಕಲ ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ

 

ಜ್ಞಾನಯೋಗಾಶ್ರಮದ ಪರಮಪೂಜ್ಯ ಶ್ರೀ ಸಿದ್ದೇಶ್ವರ ಸ್ವಾಮೀಜಿಗಳು ಲಿಂಗೈಕ್ಯರಾಗಿದ್ದಾರೆ. ಇಂದು ಸಂಜೆ 5 ಗಂಟೆಗೆ ಸಿದ್ದೇಶ್ವರ ಸ್ವಾಮೀಜಿ ಅಂತ್ಯಕ್ರಿಯೆ ನಡೆಯಲಿದೆ.ಜ್ಞಾನಯೋಗಾಶ್ರಮದ ಆವರಣದಲ್ಲಿ ಸ್ವಾಮೀಜಿಗಳ ಅಂತ್ಯಸಂಸ್ಕಾರ ನಡೆಯಲಿದೆ.ಸಕಲ ಸರ್ಕಾರಿ ಗೌರವದೊಂದಿಗೆ ಶ್ರೀಗಳ ಅಂತ್ಯಕ್ರಿಯೆ ನಡೆಯಲಿದ್ದು, ಸ್ವಾಮೀಜಿ ಅಪೇಕ್ಷೆಯಂತೆಯೇ ಅಂತ್ಯಕ್ರಿಯೆ ನಡೆಯಲಿದೆ.ಸದ್ಯ ಸೈನಿಕ ಶಾಲೆಯಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಮಧ್ಯಾಹ್ನ 3 ಗಂಟೆವರೆಗೆ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ. ಮುಂಜಾನೆಯಿಂದಲೇ ಸಾವಿರಾರು ಭಕ್ತರು ಆಗಮಿಸಿ ಅಂತಿಮ ದರ್ಶನ ಪಡೆದು ಪುನೀತರಾಗುತ್ತಿದ್ದಾರೆ.ಬೆಳಗ್ಗೆ 6 ಗಂಟೆಯಿಂದ ಮಧ್ಯಾಹ್ನ 3 ಗಂಟೆಯವರೆಗೆ ಮುಖ್ಯದ್ವಾರದ ಮೂಲಕ ಆಗಮಿಸಿ 2ನೇ ಗೇಟ್‌ನಲ್ಲಿ ನಿರ್ಗಮನಕ್ಕೆ ಅವಕಾಶ ಮಾಡಿಕೊಡಲಾಗಿದೆ. ಗಣ್ಯರು, ಸಾರ್ವಜನಿಕರ ಅಂತಿಮ ದರ್ಶನಕ್ಕೆ ಪ್ರತ್ಯೇಕ ವ್ಯವಸ್ಥೆ ಮಾಡಲಾಗಿದೆ. ಮಹಿಳೆಯರು, ಮಕ್ಕಳು ಸೇರಿದಂತೆ ಸಾಗರೋಪಾದಿಯಲ್ಲಿ ಬೆಳಂಬೆಳಗ್ಗೆ ಭಕ್ತರ ದಂಡು ಹರಿದು ಬರುತ್ತಿದೆ. ನಸುಕಿನ ಜಾವವೇ ಅಂತಿಮ ದರ್ಶನಕ್ಕೆ ಭಕ್ತಾದಿಗಳು ಹಾಕಿದ ಕಾರಿಡಾರ್ ಸಂಪೂರ್ಣ ಭರ್ತಿಯಾಗಿದೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ಯಡಿಯೂರಪ್ಪಗೆ ಅಧಿಕಾರ ನೀಡದ್ದಕ್ಕೆ ನನ್ನನ್ನು ಕ್ಷಮಿಸಿ

Tue Jan 3 , 2023
ವಿಧಾನಸಭಾ ಚುನಾವಣೆಗೆ ಸಿದ್ಧತೆ ಆರಂಭಿಸಿರುವ ಜೆಡಿಎಸ್ ನಾಯಕ ಹೆಚ್.ಡಿ.ಕುಮಾರಸ್ವಾಮಿಯವರು ಲಿಂಗಾಯತ ನಾಯಕ ಬಿ.ಎಸ್.ಯಡಿಯೂರಪ್ಪ ಅವರಿಗೆ ಬಿಜೆಪಿ ಹಿರಿಯ ನಾಯಕರಿಂದ ಆಗಿರುವ ಅನ್ಯಾಯವನ್ನು ಎತ್ತಿ ಹಿಡಿದು ವೀರಶೈವರನ್ನು ಓಲೈಸಲು ಯತ್ನ ನಡೆಸಿದ್ದಾರೆ, ಮೈಸೂರು: ವಿಧಾನಸಭಾ ಚುನಾವಣೆಗೆ ಸಿದ್ಧತೆ ಆರಂಭಿಸಿರುವ ಜೆಡಿಎಸ್ ನಾಯಕ ಹೆಚ್.ಡಿ.ಕುಮಾರಸ್ವಾಮಿಯವರು ಲಿಂಗಾಯತ ನಾಯಕ ಬಿ.ಎಸ್.ಯಡಿಯೂರಪ್ಪ ಅವರಿಗೆ ಬಿಜೆಪಿ ಹಿರಿಯ ನಾಯಕರಿಂದ ಆಗಿರುವ ಅನ್ಯಾಯವನ್ನು ಎತ್ತಿ ಹಿಡಿದು ವೀರಶೈವರನ್ನು ಓಲೈಸಲು ಯತ್ನ ನಡೆಸಿದ್ದಾರೆ, ಮೈಸೂರಿನಲ್ಲಿ ವೀರಶೈವ ಮುಖಂಡರನ್ನು ಭೇಟಿ ಮಾಡಿದ […]

Advertisement

Wordpress Social Share Plugin powered by Ultimatelysocial