ಖಾಸಗಿ ಬಸ್ ಅಪಘಾತದಲ್ಲಿ 7 ಮಂದಿ ಮರಣ; ತನಿಖೆಗೆ ಸಚಿವ ಶ್ರೀರಾಮುಲು ಆದೇಶ

ಬೆಂಗಳೂರು,ಜೂ.3- ಕಲಬುರಗಿ ಬಳಿಯ ಕಮಲಾಪುರದಲ್ಲಿ ಸಂಭವಿಸಿರುವ ಖಾಸಗಿ ಬಸ್ ದುರಂತದ ಬಗ್ಗೆ ತನಿಖೆ ನಡೆಯುತ್ತಿದೆ ಎಂದು ಸಾರಿಗೆ ಸಚಿವ ಬಿ.ಶ್ರೀರಾಮುಲು ತಿಳಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಘಟನಾ ಸ್ಥಳಕ್ಕೆ ಸಾರಿಗೆ ಇಲಾಖೆಯ ಅಧಿಕಾರಿಗಳು ತೆರಳಿದ್ದು, ಪರಿಶೀಲನಾ ಕಾರ್ಯ ಕೈಗೊಂಡಿದ್ದಾರೆ. ತನಿಖಾ ವರದಿ ಬಂದ ನಂತರ ದುರಂತದ ಬಗ್ಗೆ ಮಾಹಿತಿ ಸಿಗಲಿದೆ ಎಂದರು.

ಖಾಸಗಿ ಬಸ್ ದುರಂತದಲ್ಲಿ 7 ಜನರು ಮರಣ ಹೊಂದಿರುವ ಮಾಹಿತಿ ಇದೆ. ಖಾಸಗಿ ಬಸ್‍ನಲ್ಲಿ 35 ಪ್ರಯಾಣಿಕರು ಪ್ರಯಾಣ ಮಾಡುತ್ತಿದ್ದರು. ಗಾಯಗೊಂಡವರು ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಹೇಳಿದರು.

ಪರಿಹಾರ ನೀಡುವ ಕುರಿತಂತೆ ಮುಖ್ಯಮಂತ್ರಿಗಳ ಜೊತೆ ಸಮಾಲೋಚನೆ ನಡೆಸಲಾಗುವುದು. ಖಾಸಗಿ ಬಸ್ ದುರಂತವಾಗಿರುವುದರಿಂದ ಪರಿಹಾರದ ಬಗ್ಗೆ ಮುಖ್ಯಮಂತ್ರಿಯೊಂದಿಗೆ ಮಾತುಕತೆ ನಡೆಸುವುದಾಗಿ ತಿಳಿಸಿದರು.

ಅಪಾಯಕಾರಿ ರಸ್ತೆ ಇರುವ ಕಡೆಗಳಲ್ಲಿ ರಸ್ತೆ ಸುರಕ್ಷತಾ ಅನುದಾನ ಬಳಸಿ ಸರಿಪಡಿಸುವ ಕೆಲಸವಾಗುತ್ತಿದೆ. ಇನ್ನಷ್ಟು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕಿದೆ. ನಿಯಮ ಉಲ್ಲಂಘನೆ ಮಾಡುವ ಖಾಸಗಿ ಬಸ್‍ಗಳ ವಿರುದ್ಧ ಕ್ರಮ ಜರುಗಿಸಲಾಗುತ್ತಿದೆ ಎಂದು ಅವರು ಹೇಳಿದರು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://plಇay.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ರಾಜ್ಯಸಭಾ ಚುನಾವಣೆ; ಸಿದ್ದು-ಡಿಕೆಶಿ ತಿರುಮಂತ್ರ; ಜೆಡಿಎಸ್ ಗೆ ತೀವ್ರ ಹಿನ್ನಡೆ!

Fri Jun 3 , 2022
  ಬೆಂಗಳೂರು: ರಾಜ್ಯಸಭಾ ಚುನಾವಣೆಯ ಕಣದಿಂದ ಎರಡನೇ ಅಭ್ಯರ್ಥಿಯನ್ನು ವಾಪಾಸ್ ಪಡೆಯುವುದು ಬೇಡ ಎಂದು ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಬಣ ಹೈಕಮಾಂಡ್ ಗೆ ಸ್ಪಷ್ಟಪಡಿಸಿದ್ದು, ಜೆಡಿಎಸ್ ಗೆ ತೀವ್ರ ಹಿನ್ನಡೆಯಾಗಿದೆ. ದೇವನಹಳ್ಳಿ ಸಮೀಪ ನವ ಸಂಕಲ್ಪ ಸಭೆಯ ವೇಳೆ ಸಿದ್ದರಾಮಯ್ಯ ಹಾಗೂ ಶಿವಕುಮಾರ್ ಈ ಸಂಬಂಧ ಇಪ್ಪತ್ತು ನಿಮಿಷಗಳ ಕಾಲ ಚರ್ಚೆ ನಡೆಸಿ ನಿರ್ಧಾರಕ್ಕೆ ಬಂದಿದ್ದಾರೆ. ಅನಂತರ ರಾಜ್ಯ ಉಸ್ತುವಾರಿ ಸುರ್ಜೇವಾಲಾ ಅವರನ್ನು ಭೇಟಿ ಮಾಡಿ ಕಾಂಗ್ರೆಸ್‌ ಎರಡನೇ ಅಭ್ಯರ್ಥಿ […]

Advertisement

Wordpress Social Share Plugin powered by Ultimatelysocial