ಕ್ರಿಕೆಟ್​ನಿಂದ ದೂರವಾದ ನಂತರ ಸಿನಿಮಾಗಳಲ್ಲಿ ಬ್ಯುಸಿಯಾಗಿರುವ ಶ್ರೀಶಾಂತ್​!

 

ಚೆನ್ನೈ: ಬಹುನಿರೀಕ್ಷಿತ ತಮಿಳು ಸಿನಿಮಾದಲ್ಲಿ ಕ್ರಿಕಟರ್​ ಶ್ರೀಶಾಂತ್​ ಮತ್ತೆ ಬಣ್ಣ ಹಚ್ಚಿದ್ದಾರೆ. ಕ್ರಿಕೆಟ್​ನಿಂದ ದೂರವಾದ ನಂತರ ಸಿನಿಮಾಗಳಲ್ಲಿ ಬ್ಯುಸಿಯಾಗಿರುವ ಶ್ರೀಶಾಂತ್​ ಈ ಬಾರಿ, ನಯನತಾರ ಮತ್ತು ಸಮಂತಾ ಜೊತೆ ಕಾಣಿಸಿಕೊಳ್ತಿದ್ದಾರೆ.ನಟನೆ ಬಗ್ಗೆ ಅವರಿಗೆ ತುಂಬ ಉತ್ಸಾಹ ಇದೆ. ಈ ಮೊದಲೇ ಅನೇಕ ಜಾಹೀರಾತುಗಳಲ್ಲಿ ನಟಿಸಿದ್ದ ಅವರು ಈಗ ಸಿನಿಮಾಗಳಲ್ಲಿ ಬಣ್ಣ ಹಚ್ಚುತ್ತಿದ್ದಾರೆ. ಅವರಿಗೆ ಸ್ಟಾರ್​ ನಟ-ನಟಿಯರ ಜೊತೆಗೆ ಅಭಿನಯಿಸುವ ಅವಕಾಶ ಸಿಗುತ್ತಿರುವುದು ವಿಶೇಷ. ತಮಿಳಿನ ಖ್ಯಾತ ನಿರ್ದೇಶಕ ವಿಘ್ನೇಶ್​ ಶಿವನ್​ ಆಯಕ್ಷನ್​-ಕಟ್​ ಹೇಳುತ್ತಿರುವ ‘ಕಾತು ವಾಕುಲ ರೆಂಡು ಕಾದಲ್​’ ಸಿನಿಮಾದಲ್ಲಿ ಸಮಂತಾ, ನಯನತಾರಾ ಮತ್ತು ವಿಜಯ್​ ಸೇತುಪತಿ ಪ್ರಮುಖ ಪಾತ್ರಗಳನ್ನು ನಿಭಾಯಿಸುತ್ತಿದ್ದಾರೆ. ಅದೇ ಸಿನಿಮಾದಲ್ಲಿ ಶ್ರೀಶಾಂತ್​ ಕೂಡ ಬಣ್ಣ ಹಚ್ಚಿದ್ದಾರೆ. ಅವರ ಪಾತ್ರ ಹೇಗಿರಲಿದೆ ಎಂಬ ಕೌತುಕ ಅನೇಕರಿಗೆ ಇತ್ತು. ಅದಕ್ಕೂ ಈಗ ಉತ್ತರ ಸಿಕ್ಕಿದೆ. ಇತ್ತೀಚೆಗೆ ಶ್ರೀಶಾಂತ್​ ಅವರು ಹುಟ್ಟುಹಬ್ಬ ಫೆಬ್ರವರಿ 7ರಂದು ಆಚರಿಸಿಕೊಂಡರು. ಆ ಸಲುವಾಗಿ ‘ಕಾದು ವಾಕುಲ ರೆಂಡು ಕಾದಲ್​’ ಚಿತ್ರತಂಡದಿಂದ ಹೊಸ ಪೋಸ್ಟರ್​ ಬಿಡುಗಡೆ ಮಾಡಲಾಯಿತು. ಆ ಪೋಸ್ಟರ್​ನಲ್ಲಿ ಶ್ರೀಶಾಂತ್​ ಅವರ ಪಾತ್ರದ ಬಗ್ಗೆ ಮಾಹಿತಿ ನೀಡಲಾಗಿದೆ. ಮೊಹಮ್ಮದ್​ ಮೊಬಿ ಎಂಬ ಪಾತ್ರದಲ್ಲಿ ಶ್ರೀಶಾಂತ್​ ಕಾಣಿಸಿಕೊಳ್ಳಲಿದ್ದಾರೆ. ಅವರ ಸಿನಿಮಾ ಜರ್ನಿಗೆ ಅನೇಕರು ಶುಭ ಕೋರಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ನಾಳೆ ಬಿಡುಗಡೆಯಾಗಲಿದೆ 'ಜೇಮ್ಸ್' ಟೀಸರ್

Thu Feb 10 , 2022
ಪುನೀತ್ ರಾಜ್ ಕುಮಾರ್ ನಟನೆಯ ‘ಜೇಮ್ಸ್‌’ ಚಿತ್ರದ ಟೀಸರ್ ನಾಳೆ ಬಿಡುಗಡೆಯಾಗಲಿದ್ದು, ಪುನೀತ್ ರಾಜ್ ಕುಮಾರ್ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ.ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಭಿನಯದ ಕೊನೆಯ ಸಿನಿಮಾ ಇದಾಗಿದ್ದು, ನಾಳೆ ಬೆಳಿಗ್ಗೆ 11-11ಕ್ಕೆ ಈ ಟೀಸರ್ ರಿಲೀಸ್ ಆಗಲಿದೆ.ಚೇತನ್ ಕುಮಾರ್ ನಿರ್ದೇಶನದ ಈ ಚಿತ್ರವನ್ನು ಕಿಶೋರ್ ನಿರ್ಮಾಣ ಮಾಡಿದ್ದಾರೆ. ಕನ್ನಡ, ತೆಲುಗು, ತಮಿಳು, ಹಿಂದಿ, ಹಾಗೂ ಮಲಯಾಳಂ ಸೇರಿದಂತೆ 5 ಭಾಷೆಗಳಲ್ಲಿ ತೆರೆಕಾಣಲಿದೆ. ಪುನೀತ್ ರಾಜ್ ಕುಮಾರ್ […]

Advertisement

Wordpress Social Share Plugin powered by Ultimatelysocial