ಪ್ರತಿಭಾನ್ವಿತ ತಂಡದ ‘ಶುಭಮಂಗಳ’ ಟೀಸರ್ ರಿಲೀಸ್…

ಚಿತ್ರಬ್ರಹ್ಮ ಪುಟ್ಟಣ್ಣ ಕಣಗಲ್ ನಿರ್ದೇಶನದ ಶುಭಮಂಗಳ ಸಿನಿಮಾ ಯಾರಿಗೆ ತಾನೆ ಗೊತ್ತಿಲ್ಲ. ಈ ಎವರ್ ಗ್ರೀನ್ ಸಿನಿಮಾವನ್ನು ಯಾರಾದ್ರೂ ಮರೆಯುದುಂಟೇ. .? ಇದೇ ಟೈಟಲ್ ಇಟ್ಟುಕೊಂಡು ಸ್ಯಾಂಡಲ್ ವುಡ್ ನಲ್ಲಿ ಹೊಸ ಸಿನಿಮಾ ಸೆಟ್ಟೇರಿರೋದು ಹಳೆ ವಿಷ್ಯ. ಇದೀಗ ಶುಭಮಂಗಳ ಸಿನಿಮಾ ಅಂಗಳದಿಂದ ಸಖತ್ ಮಜವಾಗಿರುವ ಟೀಸರ್ ತುಣುಕು ಬಿಡುಗಡೆಯಾಗಿದ್ದು, ಸಿನಿಮಾ ಮೇಲಿನ ನಿರೀಕ್ಷೆಯನ್ನು ಹೆಚ್ಚಿಸಿದೆ.ಈ ಹಿಂದೆ ಸಿಲ್ಕ್ ಬೋರ್ಡ್, ಮಹಾ ಸಂಪರ್ಕ ಸೇರಿದಂತೆ 20ಕ್ಕೂ ಹೆಚ್ಚು ಕಿರುಚಿತ್ರಗಳ ನಿರ್ಮಾತೃ ಸಂತೋಷ್ ಗೋಪಾಲ್ ನಿರ್ದೇಶನದಲ್ಲಿ ತಯಾರಾಗಿರುವ ಶುಭಮಂಗಳ ಸಿನಿಮಾದಲ್ಲಿ ಒಂದು ಮದುವೆ ಮನೆಯಲ್ಲಿ ನಡೆಯುವ ಕಾಮಿಡಿ, ಲವ್, ಸೆಂಟಿಮೆಂಟ್ ಎಳೆಯನ್ನು ಇಟ್ಕೊಂಡು ಸಿನಿಮಾ ಮಾಡಿದ್ದಾರೆ. ಪ್ರತಿಯೊಬ್ಬರಿಗೂ ಕನೆಕ್ಟ್ ಆಗುವ ಸಿನಿಮಾ ಇದಾಗಿದ್ದು, ಸಿದ್ಧಾರ್ಥ್‌ ಮಾಧ್ಯಮಿಕ, ಮೇಘನಾ ಗಾಂವ್ಕರ್‌, ಹಿತಾ ಚಂದ್ರಶೇಖರ್‌, ರಾಕೇಶ್ ಮಯ್ಯ, ಅದಿತಿ ರಾಮ್, ದೀಪ್ತಿ ನಾಗೇಂದ್ರ, ಅರುಣ್ ಬಲಾಜಿ ಸೇರಿದಂತೆ ದೊಡ್ಡ ತಾರಾಬಳಗವೇ ಸಿನಿಮಾದಲ್ಲಿದೆ.ಈಗಾಗಲೇ ಶೂಟಿಂಗ್ ಕಂಪ್ಲೀಟ್ ಮಾಡಿ ರಿಲೀಸ್ ಹೊಸ್ತಿಲಿನಲ್ಲಿರುವ ಶುಭಮಂಗಳ ಸಿನಿಮಾದಲ್ಲಿ ಐದು ವೆರೈಟಿ ಹಾಡುಗಳಿದ್ದು, ಜೂಡಾ ಸ್ಯಾಂಡಿ ಮ್ಯೂಸಿಕ್ ಇಂಪು, ರಾಕೇಶ್ ಬಿ ರಾಜ್ ಕ್ಯಾಮೆರಾ ತಂಪು ಸಿನಿಮಾಕ್ಕಿದೆ. ಶುಭಮಂಗಳ ಸಿನಿಮಾಗೆ ಆಕ್ಷನ್ ಕಟ್ ಹೇಳುವುದರ ಜೊತೆಗೆ ನಿರ್ದೇಶಕ ಸಂತೋಷ್ ಸಂಕಲನದ ಜವಾಬ್ದಾರಿ ಹೊತ್ತುಕೊಂಡಿದ್ದಾರೆ. ತಮ್ಮದೇ ಅವ್ಯಕ್ತ ಬ್ಯಾನರ್ ನಡಿ ಸ್ನೇಹಿತರು ಹಾಗೂ ಕುಟುಂಬಸ್ಥರ ಜೊತೆಗೂಡಿ ಸಿನಿಮಾ ಕೂಡ ನಿರ್ಮಾಣ ಮಾಡಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ರಮ್ಯಾ ಟವೆಲ್ ಹಾಕಲು ಬಂದಿದ್ದಾರೆ: ನಲಪಾಡ್ ಕಿಡಿ!

Fri May 13 , 2022
ನಟಿ ರಮ್ಯಾ ನಿನ್ನೆ ಕರ್ನಾಟಕ ಕಾಂಗ್ರೆಸ್ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿರುದ್ಧ ಸರಣಿ ಟ್ವೀಟ್‌ಗೆ ಡಿ.ಕೆ.ಶಿವಕುಮಾರ್ ಬೆಂಬಲಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಡಿ.ಕೆ.ಶಿವಕುಮಾರ್ ಆಪ್ತ ಬಳಗದ ಮೊಹಮ್ಮದ್ ನಲಪಾಡ್ ಈ ಬಗ್ಗೆ ಮಾತನಾಡಿ ರಮ್ಯಾ ವಿರುದ್ಧ ಕಿಡಿ ಕಾರಿದ್ದಾರೆ. ಡಿಸಿಎಂ‌ ಅಶ್ವಥ್ ನಾರಾಯಣ್ ಅವರನ್ನು ಮಾಜಿ ಸಚಿವ ಎಂ ಬಿ ಪಾಟೀಲ್ ಭೇಟಿಯಾದ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿಕೆ ಖಂಡಿಸಿ ನಟಿ ರಮ್ಯಾ ಟ್ವೀಟ್ ಮಾಡಿದ್ದರು. ಆ […]

Advertisement

Wordpress Social Share Plugin powered by Ultimatelysocial