ಮದುವೆ ದಿಬ್ಬಣದ ವಾಹನ , ಕಾರಿ ನಡುವೆ ಭೀಕರ ಅಪಘಾತ: ಕಾಂಗ್ರೆಸ್‌ ಮುಖಂಡನ ದುರ್ಮರಣ

ಸಿದ್ದಾಪುರ : ಮದುವೆ ದಿಬ್ಬಣದ ಜನರನ್ನು ಕೊಂಡೊಯ್ಯುತ್ತಿದ್ದ ಮಾರುತಿ ಇಕೊ ಮತ್ತು ಎದುರುಗಡೆಯಿಂದ ಬಂದ ಕಾರು ಢಿಕ್ಕಿಯಾಗಿ ಓರ್ವ ಸ್ಥಳದಲ್ಲಿಯೇ ಮೃತಪಟ್ಟು 8ಕ್ಕೂ  ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಸಿದ್ಧಾಪುರ ತಾಲ್ಲೂಕಿನ ಶಿರೂರು ಬಳಿ ನಡೆದಿದೆ.

ಸಿದ್ದಾಪುರ ತಾಲೂಕಿನ ನಿಲ್ಕುಂದ ಪಂಚಾಯತ್ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಘಟಕ ಅಧ್ಯಕ್ಷರಾಗಿದ್ದ ಮಂಜುನಾಥ ಬಿ ಗೌಡ ಕಬ್ಬಿನ್ಮನೆ ಮೃತಪಟ್ಟ ದುರ್ದೈವಿ. ಮದುವೆ ಮುಗಿಸಿ ದಿಬ್ಬಣದ ಜನರನ್ನು ಇಕೋ ವಾಹನದಲ್ಲಿ ಕರೆದುಕೊಂಡು ತೆರಳುವಾಗ ಎದುರಿನಿಂದ ಬಂದ ಕಾರಿಗೆ ಢಿಕ್ಕಿಯಾಗಿದ್ದು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

ಎರಡೂ ವಾಹನದಲ್ಲಿ 8 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದು, ಕೆಲವರು ಗಂಭೀರಗೊಂಡಿದ್ದಾರೆ. ಎಲ್ಲರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದು, ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಶೀಘ್ರವೇ ವಾರ್ಡ್‌ ಪುನರ್‌ ವಿಂಗಡಣೆ ವರದಿ ಕೊಡಿ;

Mon May 23 , 2022
ಬೆಂಗಳೂರು ಮೇ 23: ಸುಪ್ರೀಂಕೋರ್ಟ್ ಆದೇಶದ ಬೆನ್ನಲ್ಲೇ ಬಿಬಿಎಂಪಿ ವಾರ್ಡ್‌ಗಳ ಪುನರ್‌ ವಿಂಗಡಣೆ ಸಮಿತಿಯ ವರದಿಯನ್ನು ಶೀಘ್ರವೇ ಸರಕಾರಕ್ಕೆ ಸಲ್ಲಿಸುವಂತೆ ನಗರಾಭಿವೃದ್ಧಿ ಇಲಾಖೆಯು ಬಿಬಿಎಂಪಿಗೆ ಸೂಚಿಸಿದೆ. ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ) ಮುಖ್ಯ ಆಯುಕ್ತರ ನೇತೃತ್ವದಲ್ಲಿ ರಚನೆಯಾಗಿರುವ ಪುನರ್‌ ವಿಂಗಡಣೆ ಸಮಿತಿಯು, 2021 ರ ಜನವರಿಯಲ್ಲಿ ಜಾರಿಯಾಗಿರುವ ನೂತನ ಬಿಬಿಎಂಪಿ ಕಾಯಿದೆಯ ಪ್ರಕಾರ ಈಗಿರುವ ವಾರ್ಡ್ ಗಳ ಸಂಖ್ಯೆಯನ್ನು 198ರಿಂದ 243ಕ್ಕೆ ಹೆಚ್ಚಿಸುವಂತೆ ಶಿಫಾರಸು ಮಾಡಿದೆ. ಈ ಕಾರ್ಯಕ್ಕೆ ಸಮಿತಿಯು […]

Advertisement

Wordpress Social Share Plugin powered by Ultimatelysocial