ಹಿಟ್ಲರ್ ಆಸ್ಥಾನದಲ್ಲಿ ಸುಳ್ಳು ಹೇಳುವುದನ್ನೇ ಕಾಯಕ ಮಾಡಿಕೊಂಡಿದ್ದ ಗೊಬೆಲ್ನಂತೆಯೇ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಸುಳ್ಳು ಹೇಳುತ್ತಿದ್ದಾರೆ’ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ಟೀಕಿಸಿದ್ದಾರೆ.ಸರಣಿ ಟ್ವೀಟ್ ಮಾಡಿರುವ ಅವರು, ‘ಜೆಡಿಎಸ್ ಜಟ್ಟಿಗಳನ್ನು ಸೃಷ್ಟಿಸುವ ಪಕ್ಷ. ಜಟ್ಟಿಗಳನ್ನು ಎಗರಿಸಿಕೊಂಡು ಹೋಗುವ ‘ಬ್ರೋಕರಪ್ಪ’ನ ಕುತಂತ್ರಕ್ಕೆ ಹೆದರುವ ಪ್ರಶ್ನೆಯೇ ಇಲ್ಲ. ಹಿಂದೆ ದೇವರಾಜ ಅರಸು ಅವರಿಗೆ ನರಕಯಾತನೆ ನೀಡಿದ್ದ ಕಾಂಗ್ರೆಸ್, ಈಗ ‘ಅಭಿನವ ಅರಸು’ ಎಂಬ ಪುಂಗಿ ಬಿಡುವ ‘ಸುಳ್ಳು ಸಿದ್ದಪ್ಪ’ನಿಗೆ ಶರಣಾಗಿದೆ’ ಎಂದು ಹೇಳಿದರು.ಜೆಡಿಎಸ್ ಮುಳುಗುವ ಪಕ್ಷವಾ? ತೇಲುವ ಪಕ್ಷವಾ? ಎಂಬುದನ್ನು 2023ರ ವಿಧಾನಸಭೆ ಚುನಾವಣೆಯಲ್ಲಿ ಜನರೇ ತೋರಿಸುತ್ತಾರೆ. ಅಲ್ಲಿಯವರೆಗೆ ಸಿದ್ಧಸೂತ್ರಧಾರನ ‘ಆಪರೇಷನ್ ಹಸ್ತವೆಂಬ ಅಸಹ್ಯ’ ನಡೆಯಲಿ. ಜೆಡಿಎಸ್ ಜಗ್ಗುವುದಿಲ್ಲ ಎಂದು ಹೇಳಿದ್ದಾರೆ.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.speed.newskannada