ಕೊಪ್ಪಳ: ಮಾಜಿ ಸಿಎಂ ಸಿದ್ದರಾಮಯ್ಯ ಪ್ರಯಾಣಿಸಿದ್ದ ವಿಶೇಷ ವಿಮಾನದ ಲ್ಯಾಂಡಿಂಗ್ಗೆ ಅನುಮತಿ ನಿರಾಕರಿಸಲಾಗಿದೆ. ಯಲಬುರ್ಗಾದಲ್ಲಿ ಕಾರ್ಯಕ್ರಮ ಇದ್ದ ಕಾರಣ ಸಿದ್ದರಾಮಯ್ಯ ಬೆಂಗಳೂರಿನಿಂದ ಕೊಪ್ಪಳದ ಗಿಣಗೇರ ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಆಗಲು ಕೋರಿದ್ದರು.
ಆದರೆ ವಿಶೇಷ ವಿಮಾನದ ಲ್ಯಾಂಡಿಂಗ್ಗೆ ಅನುಮತಿ ನಿರಾಕರಿಸಲಾಗಿದೆ.
ಯಲಬುರ್ಗಾದಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ಅನಾವರಣ ಕಾರ್ಯಕ್ರಮವಿದೆ. ಇದರ ಜೊತೆಗೆ ನಗರದ ಕಾಂಗ್ರೆಸ್ ಕಚೇರಿಯಲ್ಲಿ ವೀರನಗೌಡ ಪಾಟೀಲ್ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಆಗುತ್ತಿದ್ದಾರೆ. 2018ರ ಚುನಾವಣೆಯಲ್ಲಿ ವೀರನಗೌಡ ಪಾಟೀಲ್ ಜೆಡಿಎಸ್ನಿಂದ ಸ್ಪರ್ಧಿಸಿದ್ದರು. ಈ ಮೂಲಕ ಯಲಬುರ್ಗಾ ಕಾಂಗ್ರೆಸ್ ಅಭ್ಯರ್ಥಿ ಬಸವರಾಜ ರಾಯರಡ್ಡಿ ಸೋಲಿಗೆ ವೀರನಗೌಡ ಪಾಟೀಲ್ ಕಾರಣರಾಗಿದ್ದರು. ಪಕ್ಷ ಸೇರ್ಪಡೆ ಹಾಗೂ ರಾಯಣ್ಣ ಪ್ರತಿಮೆ ಅನಾವರಣ ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯ ಭಾಗವಹಿಸುತ್ತಿದ್ದಾರೆ.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.speed.newskannada