ಹಗರಿಬೊಮ್ಮನಹಳ್ಳಿ/ಹೊಸಪೇಟೆ (ವಿಜಯನಗರ): ಹಗರಿಬೊಮ್ಮನಹಳ್ಳಿಯಲ್ಲಿ ಏರ್ಪಡಿಸಿರುವ ಸಾರ್ಥಕ ನಮನ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಬಂದಿರುವ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರು ಪಟ್ಟಣದಲ್ಲಿ ಮಂಗಳವಾರ ರೋಡ್ ಷೋ ನಡೆಸಿದರು.
ಪಟ್ಟಣ ಹೊರವಲಯದ ಮಾಲವಿ ಜಲಾಶಯದಲ್ಲಿ ಪೂಜೆ ನೆರವೇರಿಸಿ ಬಾಗಿನ ಸಮರ್ಪಿಸಿದ ಸಿದ್ದರಾಮಯ್ಯನವರು, ಹಳೆ ಹಗರಿಬೊಮ್ಮನಹಳ್ಳಿಯಿಂದ ಬಸವೇಶ್ವರ ವೃತ್ತದ ಮೂಲಕ ಜಿವಿಪಿ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಏರ್ಪಡಿಸಿರುವ ಕಾರ್ಯಕ್ರಮದ ಸ್ಥಳದವರೆಗೆ ರೋಡ್ ಷೋ ನಡೆಸಿದರು.
ಸಿದ್ದರಾಮಯ್ಯನವರು ಕಣ್ತುಂಬಿಕೊಳ್ಳಲು ಬಸವೇಶ್ವರ ವೃತ್ತದಲ್ಲಿ ನೂರಾರು ಜನ ಸೇರಿದ್ದರು.
ಬಸವೇಶ್ವರ ವೃತ್ತದಲ್ಲಿ ಸಿದ್ದರಾಮಯ್ಯನವರಿಗೆ ಜೆಸಿಬಿ ಮೂಲಕ ಹೂಮಳೆಗರೆಯಲಾಯಿತು. ವಿವಿಧ ಕಡೆಗಳಿಂದ ಹೆಚ್ಚಿನ ಸಂಖ್ಯೆಯ ಲ್ಲಿ ಕಾರ್ಯಕರ್ತರು ಬಂದಿದ್ದಾರೆ.
ಶಾಸಕರಾದ ಭೀಮ ನಾಯ್ಕ, ಜೆ.ಎನ್. ಗಣೇಶ್, ಪಿ.ಟಿ. ಪರಮೇಶ್ವರ ನಾಯ್ಕ, ಪಕ್ಷದ ಗ್ರಾಮೀಣ ಘಟಕದ ಜಿಲ್ಲಾಧ್ಯಕ್ಷ ಬಿ.ವಿ. ಶಿವಯೋಗಿ, ನಗರ ಘಟಕದ ಅಧ್ಯಕ್ಷ ಮಹಮ್ಮದ್ ರಫೀಕ್, ಮುಖಂಡರಾದ ಸಂತೋಷ್ ಲಾಡ್ ಇತರರಿದ್ದರು.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.speed.newskannada