ಹಗರಿಬೊಮ್ಮನಹಳ್ಳಿಯಲ್ಲಿ ಸಿದ್ದರಾಮಯ್ಯ ರೋಡ್ ಷೋ…

ಗರಿಬೊಮ್ಮನಹಳ್ಳಿ/ಹೊಸಪೇಟೆ (ವಿಜಯನಗರ): ಹಗರಿಬೊಮ್ಮನಹಳ್ಳಿಯಲ್ಲಿ ಏರ್ಪಡಿಸಿರುವ ಸಾರ್ಥಕ ನಮನ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಬಂದಿರುವ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರು ಪಟ್ಟಣದಲ್ಲಿ ಮಂಗಳವಾರ ರೋಡ್ ಷೋ ನಡೆಸಿದರು.

ಪಟ್ಟಣ ಹೊರವಲಯದ ಮಾಲವಿ ಜಲಾಶಯದಲ್ಲಿ ಪೂಜೆ ನೆರವೇರಿಸಿ ಬಾಗಿನ ಸಮರ್ಪಿಸಿದ ಸಿದ್ದರಾಮಯ್ಯನವರು, ಹಳೆ ಹಗರಿಬೊಮ್ಮನಹಳ್ಳಿಯಿಂದ ಬಸವೇಶ್ವರ ವೃತ್ತದ ಮೂಲಕ ಜಿವಿಪಿ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಏರ್ಪಡಿಸಿರುವ ಕಾರ್ಯಕ್ರಮದ ಸ್ಥಳದವರೆಗೆ ರೋಡ್ ಷೋ ನಡೆಸಿದರು.

ಸಿದ್ದರಾಮಯ್ಯನವರು ಕಣ್ತುಂಬಿಕೊಳ್ಳಲು ಬಸವೇಶ್ವರ ವೃತ್ತದಲ್ಲಿ ನೂರಾರು ಜ‌ನ ಸೇರಿದ್ದರು.

ಬಸವೇಶ್ವರ ವೃತ್ತದಲ್ಲಿ ಸಿದ್ದರಾಮಯ್ಯನವರಿಗೆ ಜೆಸಿಬಿ ಮೂಲಕ ಹೂಮಳೆಗರೆಯಲಾಯಿತು. ವಿವಿಧ ಕಡೆಗಳಿಂದ ಹೆಚ್ಚಿನ ಸಂಖ್ಯೆಯ ಲ್ಲಿ ಕಾರ್ಯಕರ್ತರು ಬಂದಿದ್ದಾರೆ.

ಶಾಸಕರಾದ ಭೀಮ ನಾಯ್ಕ, ಜೆ.ಎನ್. ಗಣೇಶ್, ಪಿ.ಟಿ. ಪರಮೇಶ್ವರ ನಾಯ್ಕ, ಪಕ್ಷದ ಗ್ರಾಮೀಣ ಘಟಕದ ಜಿಲ್ಲಾಧ್ಯಕ್ಷ ಬಿ.ವಿ. ಶಿವಯೋಗಿ, ನಗರ ಘಟಕದ ಅಧ್ಯಕ್ಷ ಮಹಮ್ಮದ್ ರಫೀಕ್, ಮುಖಂಡರಾದ ಸಂತೋಷ್ ಲಾಡ್ ಇತರರಿದ್ದರು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

4 ದಿನಗಳ ಹಿಂದೆ ಸಂಚಾರ ಆರಂಭಿಸಿದ ʻವಂದೇ ಭಾರತ್ ಎಕ್ಸ್‌ಪ್ರೆಸ್ʼಗೆ ಬಿತ್ತು ಕಲ್ಲೇಟು, ಕಿಟಕಿ ಗಾಜಿಗೆ ಹಾನಿ.

Tue Jan 3 , 2023
ಪಶ್ಚಿಮ ಬಂಗಾಳ: ಪಶ್ಚಿಮ ಬಂಗಾಳದಲ್ಲಿ ಡಿಸೆಂಬರ್ 30 ರಂದು ಪ್ರಧಾನಿ ನರೇಂದ್ರ ಮೋದಿ ಅವರು ಚಾಲನೆ ನೀಡಿದ ವಂದೇ ಭಾರತ್ ಎಕ್ಸ್‌ಪ್ರೆಸ್‌(Vande Bharat Express) ಮೇಲೆ ಕಲ್ಲು ತೂರಾಟ ನಡೆಸಿದ ಘಟನೆ ಬೆಳಕಿಗೆ ಬಂದಿದೆ.ಈ ರೈಲು ಸಂಚಾರ ಆರಂಭಿಸಿದ ಕೇವಲ ಎರಡೇ ದಿನದಲ್ಲಿ ಇದರ ಮೇಲೆ ಅಪರಿಚಿತ ದುಷ್ಕರ್ಮಿಗಳು ಕಲ್ಲು ಎಸೆದಿದ್ದಾರೆ. ಘಟನೆಯಲ್ಲಿ ಯಾವುದೇ ಪ್ರಯಾಣಿಕರಿಗೆ ಗಾಯಗಳಾಗದಿದ್ದರೂ, ಕಲ್ಲಿನಿಂದ ಹೊಡೆದ ರಭಸಕ್ಕೆ ಕೋಚ್ ಸಂಖ್ಯೆ ಸಿ-13 ರ ಬಾಗಿಲಿನ ಗಾಜು […]

Advertisement

Wordpress Social Share Plugin powered by Ultimatelysocial