ಬೆಂಗಳೂರು: ಕೆರೂರಿನಲ್ಲಿ ನಾನು ತೆರಳುತ್ತಿದ್ದ ಕಾರಿನ ಮೇಲೆ ಹಣ ಎಸೆದಿದ್ದ ಮಹಿಳೆಗೆ ತನ್ನ ತಪ್ಪಿನ ಅರಿವಾಗಿದೆ. ನನ್ನ ಬಳಿ ಕ್ಷಮೆ ಕೇಳುವ ಅಗತ್ಯ ಇರಲಿಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಈ ಸಂಬಂಧ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ಕೆರೂರಿನಲ್ಲಿ ನಾನು ತೆರಳುತ್ತಿದ್ದ ಕಾರಿನ ಮೇಲೆ ಹಣ ಎಸೆದಿದ್ದ ಸೋದರಿಗೆ ತನ್ನ ತಪ್ಪಿನ ಅರಿವಾಗಿದೆ.
ತಮ್ಮ ಕುಟುಂಬದ ಮೇಲಿನ ಹಲ್ಲೆಯಿಂದ ನೊಂದ ಅವರ ಭಾವುಕ ಪ್ರತಿಕ್ರಿಯೆಯನ್ನು ನಾನು ಅರ್ಥಮಾಡಿಕೊಳ್ಳಬಲ್ಲೆ. ಎಲ್ಲರೂ ಒಂದಾಗಿ ಬಾಳಬೇಕೆಂದು ಮನವಿ ಮಾಡಿ ನನಗೆ ಶುಭ ಹಾರೈಸಿದ ಸೋದರಿಗೆ ಧನ್ಯವಾದಗಳು ಎಂದು ಬರೆದುಕೊಂಡಿದ್ದಾರೆ.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ: