ಅಗಸ್ಟ್ 03 ರಂದು ನಡೆಯಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರ ಸಿದ್ದರಾಮೋತ್ಸವ ಅಮೃತ ಮೊಹೋತ್ಸವ ಕಾರ್ಯಕ್ರಮಕ್ಕೆ ಅಥಣಿ ಮತಕ್ಷೇತ್ರದ ಕಾಂಗ್ರೆಸ್ ಕಾರ್ಯಕರ್ತರು, ಸಿದ್ದರಾಮಯ್ಯ ಅವರ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಕಾಂಗ್ರೆಸ್ ಮಾಜಿ ಶಾಸಕರು ಮತ್ತು ಸಿದ್ದರಾಮಯ್ಯ ಮಹೊತ್ಸವ ಸಮೀತಿಯ ಸದಸ್ಯರಾದ ಶಹಜಹಾಂನ ಡೊಂಗರಗಾಂವ ಮನವಿ ಮಾಡಿದ್ದಾರೆ
ಅವರು ತಮ್ಮ ಅಥಣಿಯ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಕರ್ನಾಟಕ ಕಂಡ ಅಪರೂಪದ ನಾಯಕರಾದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹುಟ್ಟು ಹಬ್ಬದ ನಿಮಿತ್ಯ ದಾವಣಗೆರೆಯಲ್ಲಿ ನಡೆಯಲಿರುವ ಸಿದ್ದರಾಮಯ್ಯ ಅಮೃತಮೊಹೋತ್ಸವ ಕಾರ್ಯಕ್ರಮದಲ್ಲಿ ಸಹಸ್ರಾರು ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮ ಯಶಸ್ವಿಗೊಳಿಸಲು ಮನವಿ ಮಾಡಿದ್ದಾರೆ ಇನ್ನೂ ಶಸ್ತ್ರಚಿಕಿತ್ಸೆಗೆ ಒಳಗಾದ ಕಾರಣ ಕಾರ್ಯಕರ್ತರ ಸಭೆ ಕರೆಯಲು ಸಾದ್ಯವಾಗದ ಕಾರಣ ಮಾದ್ಯಮದ ಮೂಲಕ ಎಲ್ಲರಲ್ಲೂ ವಿನಂತಿ ಮಾಡುತ್ತಿರುವುದಾಗಿ ತಿಳಿಸಿದರು.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ: