ಸಿದ್ದರಾಮಯ್ಯರನ್ನು ಅಫ್ಗಾನಿಸ್ತಾನಕ್ಕೆ ಕಳುಹಿಸಬೇಕು :ವಿ.ಶ್ರೀನಿವಾಸ ಪ್ರಸಾದ್

ತಾಲಿಬಾನ್ಆಡಳಿತವನ್ನು ಪರಿಶೀಲಿಸಲು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರನ್ನು ಅಫ್ಗಾನಿಸ್ತಾನಕ್ಕೆ ಕಳುಹಿಸಿಕೊಡಲು ಕೇಂದ್ರ ಸರ್ಕಾರಕ್ಕೆ ಮನವಿ ಮಾಡುತ್ತೇನೆ ಎಂದು ಸಂಸದ ವಿ.ಶ್ರೀನಿವಾಸ ಪ್ರಸಾದ್ಹೇಳಿದರು.ನಗರದಲ್ಲಿ ನಡೆದ ವೆಂಕಟರಾಮು ಅಭಿನಂದನಾ ಸಮಾರಂಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಂದಗಿ, ಹಾನಗಲ್ ಉಪಚುನಾವಣೆ ಸಂಬಂಧ ವಿರೋಧ ಪಕ್ಷದವರು ಬಹಳ ಉದ್ವೇಗದಿಂದ, ವಿವೇಚನೆ ಕಳೆದುಕೊಂಡು ಮಾತನಾಡುತ್ತಿದ್ದಾರೆಸಿದ್ದರಾಮಯ್ಯ ತಾಳ್ಮೆ ಕಳೆದುಕೊಂಡಿದ್ದಾರೆ. ಅವರು ರಾಷ್ಟ್ರಮಟ್ಟದ ರಾಜಕೀಯವನ್ನು ಅರ್ಥ ಮಾಡಿಕೊಂಡು ಮಾತನಾಡುತ್ತಿಲ್ಲ. ಅವರ ಭಾಷಣ ಕೇಳಿದ್ದೀರಾ? ಯಾರಾದರೂ ಸಹಿಸುತ್ತಾರೆಯೇ? ಅದಕ್ಕೆ ಆಡಳಿತ ಪಕ್ಷದವರು ಪ್ರತಿಕ್ರಿಯೆ ನೀಡುವುದು ತಪ್ಪೇ ಎಂದು ಪ್ರಶ್ನಿಸಿದರು.

ವಿರೋಧ ಪಕ್ಷದ ನಾಯಕ ತನ್ನ ಜವಾಬ್ದಾರಿ ಅರಿತು ಸರ್ಕಾರದ ವೈಫಲ್ಯಗಳನ್ನು ಎತ್ತಿ ತೋರಿಸಬೇಕು. ಅದನ್ನು ಬಿಟ್ಟು ದೇಶದ ಪ್ರಧಾನಿ ಬಗ್ಗೆ ಮಾತನಾಡುತ್ತಿದ್ದಾರೆ. ಕೇಂದ್ರ, ರಾಜ್ಯ ಸರ್ಕಾರವನ್ನು ತಾಲಿಬಾನ್ಗೆ ಹೋಲಿಸುತ್ತಿದ್ದಾರೆ. ರಾಷ್ಟ್ರ ಮಟ್ಟದ ಯಾವ ನಾಯಕನೂ ಹೀಗೆ ಮಾತನಾಡುತ್ತಿಲ್ಲ. ಇದು ನನ್ನ ಮನಸ್ಸಿಗೆ ನೋವಾಗಿದೆ ಸಿಂದಗಿ, ಹಾನಗಲ್ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆಎಂದು ವಿಶ್ವಾಸ ವ್ಯಕ್ತಪಡಿಸಿದರು.

ತಾಜಾ ಸುದ್ಧಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ :

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ಬಂದಿದ್ದ ರಾಯಚೂರಿನ ದಂಪತಿ ಬಾಳಲ್ಲಿ ದುರಂತ: ಕಾರಿನಲ್ಲೇ ನವವಿವಾಹಿತೆ ಜಲಸಮಾಧಿ!

Sat Oct 23 , 2021
ಆಂಧ್ರ: ಸಾವು ಯಾವಾಗ? ಹೇಗೆ ಬರುತ್ತೆ ಎಂದು ಊಹಿಸಲೂ ಸಾಧ್ಯವಿಲ್ಲ ಎಂಬುದಕ್ಕೇ ಈ ಘಟನನೆಯೇ ಸಾಕ್ಷಿ. ನೂರಾರು ಕನಸಿನ ಬುತ್ತಿಯೊಂದಿಗೆ ಕಳೆದ ತಿಂಗಳು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದ ಯುವತಿಯೊಬ್ಬಳು, ತಿರುಪತಿ ತಿಮ್ಮಪ್ಪನ ದರ್ಶನಕ್ಕೆಂದು ಹೋಗುವಾಗ ದುರಂತ ಅಂತ್ಯ ಕಂಡಿದ್ದಾಳೆ. ಗಂಡ ಮತ್ತು ಕುಟುಂಬಸ್ಥರ ಕಣ್ಣೆದುರಲ್ಲೇ ಜಲಸಮಾಧಿಯಾಗಿದ್ದಾಳೆ. ಕರ್ನಾಟಕದ ರಾಯಚೂರು ಮೂಲದ ನವ ದಂಪತಿ ಸೇರಿ 7 ಮಂದಿ ಕಾರಿನಲ್ಲಿ ತಿರುಪತಿಯ ಶ್ರೀ ವೆಂಕಟೇಶ್ವರ ಸ್ವಾಮಿ ದರ್ಶನ ಪಡೆಯಲೆಂದು ಶುಕ್ರವಾರ ಬಂದಿದ್ದರು. ಶುಕ್ರವಾರ ರಾತ್ರಿ […]

Advertisement

Wordpress Social Share Plugin powered by Ultimatelysocial