ಸಿದ್ದರಾಮಯ್ಯ- ರಮೇಶ ಜಾರಕಿಹೊಳಿ ರಹಸ್ಯ ಸಭೆ

ರಾಜ್ಯ ರಾಜಕಾರಣವು ಹೊಸದೊಂದು ಸಂಚಲನಕ್ಕೆ ಅಣಿಯಾಗುತ್ತಿದೆ ಎಂಬ ಮಾತುಗಳು ಓಡಾಡುತ್ತಿವೆ. ಬೆಳಗಾವಿಯ ಪ್ರಭಾವಿ ರಾಜಕಾರಣಿ ರಮೇಶ ಜಾರಕಿಹೊಳಿ ತಮ್ಮ ಗುರು ಸಿದ್ದರಾಮಯ್ಯನವರನ್ನು ರಹಸ್ಯವಾಗಿ ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ ಎಂಬ ವರದಿಗಳು ಹರಿದಾಡುತ್ತಿವೆ.ಆದರೆ, ಅವರಿಬ್ಬರ ನಡುವೆ ನಡೆದ ಮಾತುಕತೆಗಳೇನು ಎಂಬುದು ಇನ್ನೂ ಸ್ಪಷ್ಟವಾಗಿಲ್ಲ.ಮೂಲದ ಪ್ರಕಾರ, ರಮೇಶ ಜಾರಕಿಹೊಳಿ ಅವರು ಬಿಜೆಪಿಯ ನಾಯಕರೊಂದಿಗೆ ಮುನಿಸಿಕೊಂಡಿದ್ದಾರೆ. ಚುನಾವಣೆಗೆ ನಾಲ್ಕೈದು ತಿಂಗಳು ಬಾಕಿ ಇರುವಾಗ ತಮಗೆ ಸಚಿವ ಸ್ಥಾನ ನೀಡಬೇಕೆಂದು ಒತ್ತಡ ಹೇರಿದ್ದರು. ಈ ವಿಚಾರವನ್ನು ಹೈಕಮಾಂಡ್‌ವರೆಗೆ ತೆಗೆದುಕೊಂಡು ಹೋದ ಸಿಎಂ ಬೊಮ್ಮಾಯಿ ಅವರಿಗೆ ಸಿಹಿಸುದ್ದಿ ಸಿಕ್ಕಿರಲಿಲ್ಲ. ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು ಸಚಿವ ಸ್ಥಾನದ ಬೇಡಿಕೆಯನ್ನು ಒಪ್ಪಿರಲಿಲ್ಲ. ಇದು ರಮೇಶ ಜಾರಕಿಹೊಳಿ ಅವರ ಮುನಿಸಿಗೆ ಕಾರಣವಾಗಿದೆ ಎಂದು ತಿಳಿದುಬಂದಿದೆ.ರಮೇಶ ಜಾರಕಿಹೊಳಿ ಅವರು ಮಾಜಿ ಸಿಎಂ ಸಿದ್ದರಾಮಯ್ಯನವರನ್ನು ಇದೇ ಕಾರಣಕ್ಕೆ ಭೇಟಿ ಆಗಿರಬಹುದು ಎಂದು ಹೇಳಲಾಗುತ್ತಿದೆ. ರಮೇಶ ಜಾರಕಿಹೊಳಿ ಸಿದ್ದರಾಮಯ್ಯನವರ ಶಿಷ್ಯರೆಂಬುದು ಎಲ್ಲರಿಗೂ ತಿಳಿದಿರುವ ವಿಚಾರ. ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸಲು ಮರಳಿ ಕಾಂಗ್ರೆಸ್‌ಗೆ ಸೇರುವ ಬಯಕೆಯನ್ನು ರಮೇಶ ಜಾರಕಿಹೊಳಿ ಹೊಂದಿರಬಹುದು. ಈ ಕಾರಣಕ್ಕೆ ಸಿದ್ದರಾಮಯ್ಯನವರನ್ನು ಭೇಟಿಯಾಗಿ ರಮೇಶ ಜಾರಕಿಹೊಳಿ ರಹಸ್ಯ ಮಾತುಕತೆ ನಡೆಸಿರಬಹುದು.ರಮೇಶ ಜಾರಕಿಹೊಳಿ ಅವರ ಸಚಿವ ಸ್ಥಾನ ಹೋಗಲು ಡಿ.ಕೆ.ಶಿವಕುಮಾರ್‌ ಕಾರಣವೆಂದು ಆರೋಪಿಸಲಾಗಿತ್ತು. ಲಕ್ಷ್ಮಿ ಹೆಬ್ಬಾಳ್ಕರ್‌ ಹಾಗೂ ಡಿಕೆಶಿ ವಿರುದ್ಧ ರಮೇಶ ಜಾರಕಿಹೊಳಿ ಹರಿಹಾಯುತ್ತಲೇ ಬಂದಿದ್ದಾರೆ. ಇದೇ ಕಾರಣಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಅವರನ್ನು ಜಾರಕಿಹೊಳಿ ಭೇಟಿ ಮಾಡಿಲ್ಲ. ತಮ್ಮ ಗುರುವಿನ ಮೂಲಕವೇ ಪಕ್ಷಕ್ಕೆ ಮರಳಿದರೆ, ಒಳಿತಾಗಬಹುದು ಎಂಬ ನಿಲುವನ್ನು ರಮೇಶ ಜಾರಕಿಹೊಳಿ ತಳೆದಿರಬಹುದು.ಚುನಾವಣೆಗೆ ನಾಲ್ಕೈದು ತಿಂಗಳು ಬಾಕಿ ಇರುವಾಗಲೇ, ಡಿ.ಕೆ.ಶಿವಕುಮಾರ್ ಭರ್ಜರಿ ತಯಾರಿ ನಡೆಸಿದ್ದಾರೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಬೆಂಗಳೂರು ಬಸ್‌ ಪ್ರಯಾಣಿಕರಿಗೆ ಬಿಗ್‌ ಶಾಕ್‌

Thu Jan 5 , 2023
ಸಿಲಿಕಾನ್‌ ಸಿಟಿ ಬಸ್‌ ಪ್ರಯಾಣಿಕರಿಗೆ ಮಹಾನಗರ ಸಾರಿಗೆ ಸಂಸ್ಥೆ ಬಿಗ್‌ ಶಾಕ್‌ ನೀಡಿದ್ದು, ಇದೀಗ ಬಿಎಂಟಿಸಿ ವಜ್ರ ಬಸ್ ದರ ಗಗನಕ್ಕೇರಲಿದೆ ಎಂದು ಹೊಸ ಆದೇಶ ಹೊರಡಿಸಿದ್ದಾರೆ.ಮಹಾನಗರ ಸಾರಿಗೆ ಸಂಸ್ಥೆ ಆರ್ಥಿಕ ಹಿತ ದೃಷ್ಟಿಯಿಂದ ಜನವರಿ 1 ರಿಂದ ಹವಾ ನಿಯಂತ್ರಿತ ಬಸ್‌ನ ದೈನಂದಿನ, ಮಾಸಿಕ ಪಾಸ್‌ಗಳ ದರವನ್ನು ಹೆಚ್ಚಳ ಮಾಡಲಾಗುತ್ತಿದೆ. ಈ ನಿಟ್ಟಿನಲ್ಲಿ ಜನವರಿ 5 ರಿಂದ ದೂರದ ಪ್ರಯಾಣ ದರ ಕೂಡ ಹೆಚ್ಚಳವಾಗುವ ಸಾಧ್ಯತೆಯಿದೆ ಜನಸಮಾನ್ಯರ ಬೇಬಿಗೆ […]

Advertisement

Wordpress Social Share Plugin powered by Ultimatelysocial