ಸಿದ್ದು&ಡಿಕೆ ಗೆ ಭರ್ಜರಿ ಸ್ವಾಗತ.

ಪ್ರಜಾ ಧ್ವನಿ ಬಸ್ ಯಾತ್ರೆ ಹಿನ್ನಲೆಯಲ್ಲಿ ಹುಬ್ಬಳ್ಳಿಗೆ ವಾಸ್ತವ್ಯಕ್ಕೆಂದು ಮಧ್ಯರಾತ್ರಿ ಬಂದ ಡಿಕೆಶಿ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯರಿಗೆ ಭರ್ಜರಿ ಸ್ವಾಗತ ಸಿಕ್ಕಿದೆ ತಡ ರಾತ್ರಿಯಲ್ಲೂ ಹುಬ್ಬಳ್ಳಿಯ ಕಾಂಗ್ರೆಸ್ ಕಾರ್ಯಕರ್ತರ ಸಂಭ್ರಮ ಮುಗಿಲು ಮುಟ್ಟಿತು ನಗರದ ಗಾಂಧಿವಾಡ ಕಾಲೊನಿಯಲ್ಲಿ ಇಬ್ಬರು ನಾಯಕರಿಗೆ ಕೈ ಮುಖಂಡರು ಅದ್ದೂರಿ ಸ್ವಾಗತ ಕೋರಿದರು. ಬ್ಲಾಕ್ ಅಧ್ಯಕ್ಷ ರಜತ್ ಉಳ್ಳಾಗಡ್ಡಿಮಠ, ಕಾರ್ಪೊರೇಟರ್ ಸುವರ್ಣ ಕಳ್ಳಕುಂಠಲ ನೇತೃತ್ವದಲ್ಲಿ ಕ್ರೇನ್ ಮೂಲಕ ಬೃಹತ್ ಹೂ ಮಾಲೆ ಹಾಕಿ,ಪಟಾಕಿ ಸಿಡಿಸಿ ಸ್ವಾಗತ ಕೋರಲಾಯಿತು.ಈ ವೇಳೆ ಅಂಬೇಡ್ಕರ್ ಪ್ರತಿಮೆಗೆ ಮಾಲೆ ಹಾಕಿ ನಮಿಸಿದ ಡಿಕೆಶಿ ಕಾರ್ಯಕರ್ತರ ಜೊತೆಗೆ ಒಂದಿಷ್ಟು ಸಮಯ ಕಾಲ ಕಳೆದರು..ಬಳಿಕ ಖಾಸಗಿ ಹೋಟೆಲ್ ನತ್ತ ತೆರಳಿದರು ಸದ್ಯ ಹುಬ್ಬಳ್ಳಿಯಲ್ಲಿರುವ ಕೈ ಮುಖಂಡರು ಬೆಳಗ್ಗೆ ಇಲ್ಲಿಂದಲೇ ಹಾವೇರಿಗೆ ಪ್ರಯಾಣ ಮಾಡಲಿದ್ದಾರೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ನ್ಯೂಜಿಲೆಂಡ್ ಪ್ರಧಾನಿ ಜಸಿಂಡಾ ಅರ್ಡೆರ್ನ್ ದಿಢೀರ್ ರಾಜೀನಾಮೆ.

Thu Jan 19 , 2023
ಬೆಂಗಳೂರು: ನ್ಯೂಜಿಲೆಂಡ್ ಪ್ರಧಾನಿ ಜಸಿಂಡಾ ಅರ್ಡೆರ್ನ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಪಕ್ಷದ ಸಭೆಯಲ್ಲಿ ಘೋಷಿಸಿದ್ದಾರೆ. ದೊಡ್ಡ ಜವಾಬ್ದಾರಿ ಇರುವ ಉನ್ನತ ಹುದ್ದೆಯನ್ನು ನಿರ್ವಹಿಸಲು ನನಗೆ ಸಾಧ್ಯವಾಗುತ್ತಿಲ್ಲ. ಹೀಗಾಗಿ, ಪ್ರಧಾನಿ ಸ್ಥಾನ ತ್ಯಜಿಸಲು ಇದು ಸೂಕ್ತ ಸಮಯ ಎಂದು ಹೇಳಿದ್ದಾರೆ. ಪ್ರಧಾನಿ ಹುದ್ದೆಯಲ್ಲಿ ಮುಂದುವರಿಯುತ್ತಿಲ್ಲ ಎಂದು ಜಸಿಂಡಾ ಅವರು ದಿಢೀರ್ ನಿರ್ಧಾರ ಪ್ರಕಟಿಸಿದ್ದು, ಪಕ್ಷದಲ್ಲಿ ಅಚ್ಚರಿಗೆ ಕಾರಣವಾಗಿದೆ. ಇದೊಂದು ದೊಡ್ಡ ಮತ್ತು ಅತ್ಯಂತ ಹೆಚ್ಚಿನ ಜವಾಬ್ದಾರಿಯುವ ಹುದ್ದೆಯಾಗಿದೆ. ಅದನ್ನು […]

Advertisement

Wordpress Social Share Plugin powered by Ultimatelysocial