ಸಿದ್ದರಾಮಯ್ಯ ಟೀಂನ ವೈಸ್ ಕ್ಯಾಪ್ಟನ್ ಗೋರಿ ಪಾಳ್ಯದ ಬಸ್ಸು, ಜಮೀರಣ್ಣ: ಡಿಕೆ ಟೀಂನ ಉಪಾಧ್ಯಕ್ಷ ನಲಪಾಡ್, ಇಬ್ಬರಿಗೂ ಸಾಬ್ರೇ ಬೇಕು!

ಮಂಡ್ಯ: ಕಾಂಗ್ರೆಸ್‌ ಪಕ್ಷದಲ್ಲಿ ಎರಡು ಗುಂಪುಗಳಿವೆ. ಒಂದು ಗುಂಪು ಸಿದ್ದರಾಮಯ್ಯ ಪರ ಇದ್ದರೆ, ಮತ್ತೊಂದು ಗುಂಪು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಪರ ಇದೆ ಎಂದು ಮೈಸೂರು ಸಂಸದ ಪ್ರತಾಪ್‌ ಸಿಂಹ ಟೀಕಿಸಿದ್ದಾರೆ.

ಮಂಡ್ಯದಲ್ಲಿ ನಡೆದ ಬಿಜೆಪಿ ಕಾರ್ಯಕರ್ತರ ಸಮಾವೇಶ ಮತ್ತು ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಗೋರಿ ಪಾಳ್ಯದ ಬಸ್ಸು ಸಿದ್ದರಾಮಯ್ಯ ಟೀಂನ ವೈಸ್‌ ಕ್ಯಾಪ್ಟನ್‌ ಆಗಿ ಜಮೀರಣ್ಣ ಇದ್ದಾರೆ.

ಡಿ.ಕೆ.ಶಿವಕುಮಾರ್‌ ಟೀಂನ ವೈಸ್‌ ಕ್ಯಾಪ್ಟನ್‌ ಆಗಿ ನಲಪಾಡ್‌ ಕೆಲಸ ಮಾಡುತ್ತಿದ್ದಾರೆ, ಇಬ್ಬರಿಗೂ ಸಾಬ್ರೇ ಬೇಕು. ಕಾಂಗ್ರೆಸ್ನಲ್ಲಿ ಹಿಂದೂಗಳಿಗೆ ಯಾರಿದ್ದಾರೆ? ಎಂದು ಪ್ರಶ್ನಿಸಿದ್ದಾರೆ.

ಕಾಂಗ್ರೆಸ್‌ ಪಕ್ಷ ಅಧಿಕಾರಕ್ಕೆ ಬಂದರೆ ತಾಲಿಬಾನಿ ಸರ್ಕಾರ ಬರುತ್ತದೆ. ಸಿದ್ದರಾಮಯ್ಯ ಹಾಗೂ ಡಿ.ಕೆ ಶಿವಕುಮಾರ್‌ ಇಬ್ಬರಿಗೂ ಮುಸ್ಲಿಮರು ಓಟ್‌ ಬ್ಯಾಂಕ್‌ ಆಗಿದ್ದಾರೆ. ಸಿದ್ದರಾಮಯ್ಯ ಟಿಪ್ಪು ಜಯಂತಿ ಮಾಡಿ ನಮ್ಮ ಕಾರ್ಯಕರ್ತರನ್ನು ಹತ್ಯೆ ಮಾಡಿಸಿ ರಾಜ್ಯದಲ್ಲಿ ಅಶಾಂತಿ ಉಂಟು ಮಾಡಿದರು ಎಂದು ಆರೋಪಿಸಿದರು.

ಡಿ.ಕೆ. ಶಿವಕುಮಾರ್‌ ವಿರುದ್ಧ ಒಳಗಿನಿಂದಲೇ ಪಿತೂರಿ ಮಾಡಿ ತುಳಿದು ಮತ್ತೆ ಸಿಎಂ ಆಗಲು ಹೊರಟಿರುವ ಸಿದ್ದರಾಮಯ್ಯ ಅವರು ಸಿಎಂ ಆಗಿದ್ದ ವೇಳೆ ಯಧು ವಂಶದವರು ನೆನಪಾಗಲಿಲ್ಲ. ಕಾನೂನು ಪದವಿ ಕೊಟ್ಟವಿಶ್ವ ವಿದ್ಯಾನಿಲಯ, ಕೆಆರ್‌ಎಸ್‌ ಅಣೆಕಟ್ಟೆನಿರ್ಮಿಸಿದ್ದು ನಾಲ್ವಡಿ ಕೃಷ್ಣರಾಜ ಒಡೆಯರ್‌. ಆದರೆ, ಯಧುವಂಶವನ್ನು ನಿರ್ವಂಶ ಮಾಡಲು ಹೊರಟಿದ್ದ ಟಿಪ್ಪುವಿನ ಜಯಂತಿ ಆಚರಣೆಗೆ ನಾಂದಿ ಹಾಡಿದರು ಎಂದು ಕಿಡಿಕಾರಿದರು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

BIGG NEWS : `PSI' ನೇಮಕಾತಿ ಪರೀಕ್ಷೆ ಅಕ್ರಮ ಕೇಸ್ : ಮತ್ತೊಂದು ಸ್ಪೋಟಕ ಮಾಹಿತಿ ಬಹಿರಂಗ!

Mon May 16 , 2022
ಪಿಎಸ್‌ಐ ನೇಮಕ ಪರೀಕ್ಷೆ ಅಕ್ರಮದ ಆರೋಪಿಗಳ ಪೈಕಿ ಈಗಾಗಲೇ ಬಹುತೇಕರು ಕಂಬಿ ಹಿಂದಿದ್ದಾರೆ. ಪೊಲೀಸರ ತನಿಖೆಯ ದಿಕ್ಕು ತಪ್ಪಿಸಲು ಪ್ರಕರಣದ ಪ್ರಮುಖ ಆರೋಪಿಗಳಾದ ದಿವ್ಯ ಹಾಗರಗಿ ಹಾಗೂ ಮಂಜುನಾಥ್ ತಮ್ಮ ಮೊಬೈಲ್ ಗಳನ್ನು ನಾಶಪಡಿಸಿದ್ದ ಸಂಗತಿ ಈ ಹಿಂದೆ ಬಯಲಾಗಿತ್ತು.ಇದೀಗ ಈ ಪ್ರಕರಣದ ‘ಕಿಂಗ್ ಪಿನ್’ ಆರ್.ಡಿ. ಪಾಟೀಲ್ ಅಲಿಯಾಸ್ ರುದ್ರಗೌಡನ ಕುರಿತ ಸ್ವಾರಸ್ಯಕರ ಸಂಗತಿಯೊಂದು ಬಹಿರಂಗವಾಗಿದೆ. ರುದ್ರಗೌಡ ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಕಣಕ್ಕಿಳಿಯುವ ಇರಾದೆ ಹೊಂದಿದ್ದು, ಇದಕ್ಕಾಗಿ […]

Advertisement

Wordpress Social Share Plugin powered by Ultimatelysocial