ನಟಿ ಕಿಯಾರ ತಮ್ಮ ವೈಯಕ್ತಿಕ ವಿಚಾರಕ್ಕೆ ಸುದ್ದಿ ಆಗಿದ್ದಾರೆ.

 

ನಟಿ ಕಿಯಾರಾ ಅಡ್ವಾಣಿ ಸದ್ಯ ಅಭಿನಯದ ‘ಭೂಲ್ ಭುಲಯ್ಯ 2’ ಸಿನಿಮಾದ ಸಕ್ಸಸ್ ಖುಷಿಯಲ್ಲಿ ಇದ್ದಾರೆ. ಸಿನಿಮಾ ಉತ್ತಮ ಪ್ರದರ್ಶನ ಕಾಣುತ್ತಿದೆ. ಇದರ ಜೊತೆಗೆ ನಟಿ ಕಿಯಾರ ತಮ್ಮ ವೈಯಕ್ತಿಕ ವಿಚಾರಕ್ಕೆ ಸುದ್ದಿ ಆಗಿದ್ದಾರೆ. ಇತ್ತೀಚೆಗೆ ಸಿದ್ಧಾರ್ಥ್ ಮಲ್ಹೋತ್ರ ಜೊತೆಗೆ ಕಾಣಿಸಿಕೊಂಡಿದ್ದು, ಈಗ ಈ ಜೋಡಿಯ ಬಗ್ಗೆ ಹೊಸ ಸುದ್ದಿ ಬಂದಿದೆ.

ನಟ ಸಿದ್ಧಾರ್ಥ್ ಮಲ್ಹೋತ್ರಾ ಮತ್ತು ಕಿಯಾರಾ ನಡುವೆ ಲವ್ವಿ-ಡವ್ವಿ ಇದೆ ಎನ್ನುವ ವಿಚಾರ ಹಲವು ದಿನಗಳಿಂದ ಬಾಲಿವುಡ್‌ನಲ್ಲಿ ಹರಿದಾಡುತ್ತಾ ಇದೆ. ಆದರೆ ಮಧ್ಯದಲ್ಲಿ ಕಿರಿಕ್ ಆಗಿತ್ತಂತೆ. ಈಗ ಈ ಜೋಡಿ ಜೊತೆಯಾಗಿ ಕಾಣಿಸಿಕೊಂಡಿದೆ ಎನ್ನುವ ಸುದ್ದಿಗಳು ಹರಿಡುತ್ತಿವೆ.

ಆದರೆ ಇದೇ ಬೆನ್ನಲ್ಲೇ ನಟಿ ಕಿಯಾರ ಅಡ್ವಾಣಿ ಮತ್ತು ಸಿದ್ಧಾರ್ಥ್ ಮಲ್ಹೋತ್ರ ಬಗ್ಗೆ ಹೇಳಿಕೆ ಒಂದನ್ನು ಕೊಟ್ಟು ಗಮನ ಸೆಳೆದಿದ್ದಾರೆ, ಬಾಲಿವುಡ್‌ನ ವಿವಾದಾತ್ಮಕ ನಟ, ನಿರ್ದೇಶಕ, ವಿಮರ್ಶಕ ಕಮಾಲ್ ಆರ್ ಖಾನ್.

ಕಿಯಾರಾ ವಿಚಾರಕ್ಕೆ ಬಂದ ಕಮಾಲ್ ಆರ್ ಖಾನ್!
ಈಗ ಕಿಯಾರಾ ಮತ್ತು ಸಿದ್ಧಾರ್ಥ್ ಬಗ್ಗೆ ಮಾತನಾಡು ಕಾರಣ ಬಾಲಿವುಡ್‌ನಲ್ಲಿ ವಿವಾದಾತ್ಮಕ ವ್ಯಕ್ತಿ ಅಂತಲೇ ಕರೆಸಿಕೊಳ್ಳುವ ಕಮಾಲ್ ಆರ್ ಖಾನ್. ಹೌದು ಕಮಾಲ್ ಖಾನ್ ಸದಾ ವಿವಾದಗಳಿಂದ ಸುದ್ದಿ ಆಗುತ್ತಾರೆ. ಬೇರೆ ನಟ, ನಟಿಯರ ಬಗ್ಗೆ ಮಾತನಾಡಿ ಕಾಲೆಳೆಯುವ ಕೆಲಸ ಮಾಡುತ್ತಾರೆ. ಅಂತೆಯೇ ಈಗ ಕಮಾಲ್ ಆರ್ ಖಾನ್ ಈಗ ಕಿಯಾರಾ ತನ್ನ ಬಗ್ಗೆ ಮಾಡಿದ್ದ ಟ್ವೀಟ್ ಡಿಲೀಟ್ ಮಾಡಲು ಕಾರಣ ಸಿದ್ಧಾರ್ಥ್ ಮಲ್ಹೋತ್ರ ಎಂದಿದ್ದಾರೆ.

ಟ್ವೀಟ್ ಡಿಲಿಟ್ ಮಾಡಿದ ಕಿಯಾರಾ!

ಇಷ್ಟಕ್ಕೆಲ್ಲಾ ಕಾರಣ ಆಗಿರುವುದು ನಟಿ ಕಿಯಾರಾ ಟ್ವೀಟ್ ಡಿಲೀಟ್ ಮಾಡಿರುವುದು. ಕಮಾಲ್ ಖಾನ್ ತಮ್ಮ ಜೀವನ ಚರಿತ್ರೆಯ ಪುಸ್ತಕವನ್ನು ಬಿಡುಗಡೆಗೊಳಿಸಿದ್ದಾರೆ. ಅಮಿತಾಬ್ ಬಚ್ಚನ್ ಈ ಪುಸ್ತಕವನ್ನು ಬಿಡುಗಡೆ ಮಾಡಿದ್ದಾರೆ. ಹಾಗಾಗಿ ಕಮಾಲ್ ಖಾನ್‌ಗೆ ಶುಭಕೋರಿ ಕಿಯಾರಾ ಟ್ವೀಟ್ ಮಾಡಿದ್ದರು. ಆದರೆ 10 ನಿಮಿಷದಲ್ಲಿ ಈ ಟ್ವೀಟ್ ಡಿಲೀಟ್ ಮಾಡಿದ್ದಾರೆ.

ಸಿದ್ಧಾರ್ಥ್ ಬೈತಾರೆ ಎಂದರೇ ಕಿಯಾರಾ?

ನಟಿ ಕಿಯಾರಾ ಅಡ್ವಾನಿ ಈ ಟ್ವೀಟ್ ಡಿಲೀಟ್ ಮಾಡಲು ಕಾರಣ ಸಿದ್ಧಾರ್ಥ್ ಮಲ್ಹೋತ್ರಾ ಎಂದು ಕಮಾಲ್ ಆರ್ ಖಾನ್ ಟ್ವೀಟ್ ಮೂಲಕ ಹೇಳಿದ್ದಾರೆ. “ಈ ಟ್ವೀಟನ್ನು 10 ನಿಮಿಷದ ನಂತರ ಕಿಯಾರಾ ಡಿಲೀಟ್ ಮಾಡಿದ್ದಾರೆ. ಇದಕ್ಕೆ ಕಾರಣ ಏನು ಎಂದು ನಾನು ಕೇಳಿದೆ. ಇದರಿಂದ ಸಿದ್‌ಗೆ ಕೋಪ ಬಂದಿದೆ. ಇದನ್ನು ಡಿಲೀಟ್ ಮಾಡಲು ಸಿದ್ಧಾರ್ಥ್ ಮಲ್ಹೋತ್ರಾ ಹೇಳಿದ್ದಾರೆ. ಎಂದ ಕಿಯಾರಾ ಹೇಳಿದ್ದಾರೆ.” ಈ ಮೂಲಕ ಕಿಯಾರಾಗೆ ಸಿದ್ಧಾರ್ಥ್ ಮಲ್ಹೋತ್ರಾ ಬೈಯುತ್ತಾರೆ ಎಂದಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಆಮಿರ್ ಖಾನ್ 'ಲಾಲ್‌ ಸಿಂಗ್ ಚಡ್ಡ' ಸಿನಿಮಾ 'ಕೆಜಿಎಫ್ 2' ದಾಖಲೆ ಉಡೀಸ್ ಮಾಡುತ್ತಾ?

Tue May 31 , 2022
‘ಕೆಜಿಎಫ್ 2’ ಬಾಕ್ಸಾಫೀಸ್‌ನಲ್ಲಿ ಇನ್ನೂ ತನ್ನ ಆಟವನ್ನು ಮುಗಿಸಿಲ್ಲ. ಪ್ರೇಕ್ಷಕರನ್ನು ಇನ್ನೂ ಚಿತ್ರಮಂದಿರದೆಡೆಗೆ ಸೆಳೆಯುತ್ತಲೇ ಇದೆ. ‘ಕೆಜಿಎಫ್ 2’ ಭಾರತೀಯ ಚಿತ್ರರಂಗದ ಇತಿಹಾಸದಲ್ಲಿಯೇ ಅತೀ ಹೆಚ್ಚು ಸಕ್ಸಸ್ ಕಂಡ ಸಿನಿಮಾಗಳಲ್ಲೊಂದು. ಈ ಸಿನಿಮಾ ಬಿಡುಗಡೆಯಾದಲ್ಲಿಂದ ಭಾರತದ ಯಾವುದೇ ಭಾಷೆಯ ಚಿತ್ರವೂ ಈ ದಾಖಲೆಯನ್ನು ಮುರಿದು ಮುನ್ನುಗ್ಗಲು ಸಾಧ್ಯವಾಗಿಲ್ಲ. ‘ಕೆಜಿಎಫ್ 2’ ದಾಖಲೆಯನ್ನು ಮುರಿಯೋಕೆ ಮತ್ತೊಂದು ರಾಜಮೌಳಿ ಸಿನಿಮಾ ಬರಬೇಕು. ಪ್ರಶಾಂತ್ ನೀಲ್ ನಿರ್ದೇಶನದ ಸಿನಿಮಾ ರಿಲೀಸ್ ಆಗಬೇಕು. ಇಲ್ಲಾ ಯಶ್ […]

Advertisement

Wordpress Social Share Plugin powered by Ultimatelysocial