ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಟೀಕೆಯ ವಿರುದ್ಧ ಕಾಂಗ್ರೆಸ್‌ ಕಿಡಿಕಾರಿದೆ.

ಬೆಂಗಳೂರು: ‘ಸಿದ್ದರಾಮಯ್ಯ ಅವರದ್ದು ಹಗರಣಗಳನ್ನು ಮುಚ್ಚಿ ಹಾಕುವ ಸರ್ಕಾರವಾಗಿತ್ತು’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಟೀಕೆಯ ವಿರುದ್ಧ ಕಾಂಗ್ರೆಸ್‌ ಕಿಡಿಕಾರಿದೆ. ಆ ಸಂದರ್ಭದಲ್ಲಿ ನಿಮ್ಮ ಪಕ್ಷದವರು ಬಿಲದಲ್ಲಿ ಗೆಣಸು ಕೆರೆಯುತ್ತಿದ್ರಾ?

ಅಥವಾ ಸದನದಲ್ಲಿ ಬ್ಲೂ ಫಿಲ್ಮ್‌ ನೋಡುತಿದ್ರಾ? ಎಂದು ತೀಕ್ಷ್ಣವಾಗಿ ಪ್ರತಿಕ್ರಿಯಿಸಿದೆ.

ಮಾನ್ಯ ಮುಖ್ಯಮಂತ್ರಿಗಳೇ, ನಿಮ್ಮ ಸರ್ಕಾರದ ಅಕ್ರಮಗಳು, ಅವಾಂತರಗಳು ಬಯಲಾದಾಗ ಕಾಂಗ್ರೆಸ್‌ ಮೇಲೆ ಅಪಾದಿಸುವ ಖಯಾಲಿ ಬೆಳೆಸಿಕೊಂಡಿದ್ದೀರಿ. ಈಗ ಅನಗತ್ಯವಾಗಿ ನಮ್ಮ ವಿರುದ್ಧ ಆರೋಪಿಸುತ್ತಿದ್ದೀರಿ ಎಂದು ಕಾಂಗ್ರೆಸ್‌ ಟ್ವೀಟ್‌ ಮೂಲಕ ಆಕ್ರೋಶ ವ್ಯಕ್ತಪಡಿಸಿದೆ.

‘ಪಿಎಸ್‌ಐ ನೇಮಕಾತಿ ಹಗರಣದಲ್ಲಿ ಮುಖ್ಯಮಂತ್ರಿ ಸುಳ್ಳು ಮಾಹಿತಿ ಕೊಟ್ಟಿದ್ದಾರೆ’ ಎಂಬ ಸಿದ್ದರಾಮಯ್ಯ ಆರೋಪಕ್ಕೆ ಬೊಮ್ಮಾಯಿ ಅವರು ಮೇಲಿನಂತೆ ಪ್ರತಿಕ್ರಿಯಿಸಿದ್ದರು. ‘ತಮ್ಮ ತಪ್ಪುಗಳನ್ನು ಮುಚ್ಚಿಕೊಳ್ಳಲು ಸಿದ್ದರಾಮಯ್ಯ ಏನೇನೋ ಮಾತನಾಡುತ್ತಿದ್ದಾರೆ’ ಎಂದು ಕುಟುಕಿದ್ದರು.

ಶಿಕ್ಷಣ ಸಚಿವರಾದ ಬಿ.ಸಿ. ನಾಗೇಶ್‌ ಅವರು ಆರ್‌ಎಸ್‌ಎಸ್‌ನ ಶೋಷಣೆ ಸಿದ್ಧಾಂತದ ವಕ್ತಾರರಂತೆ ವರ್ತಿಸುತ್ತಿದ್ದಾರೆ ಎಂದೂ ಕಾಂಗ್ರೆಸ್‌ ಆರೋಪಿಸಿದೆ. ಸರ್ಕಾರಿ ಶಾಲೆಯಲ್ಲಿ ಕಲಿಯುವ ಬಹುತೇಕ ತಳ ಸಮುದಾಯದ ಮಕ್ಕಳನ್ನು ಶಿಕ್ಷಣ ವಂಚಿತರಾಗಿಸಲು ನಾಗಪುರದ ಕೇಂದ್ರ ಕಚೇರಿಯಿಂದ ಸುಪಾರಿ ಪಡೆದಿದ್ದಾರೆ. ಅವರ ಹುನ್ನಾರದಿಂದಲೇ ರಾಜ್ಯದ 10 ಲಕ್ಷ ಮಕ್ಕಳು ಶಿಕ್ಷಣದಿಂದ ದೂರ ಉಳಿಯುವಂತಾಗಿದೆ ಎಂದು ದೂರಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://plಇay.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಅನ್ನದಾತರೇ, ಅಪ್ಪಿತಪ್ಪಿಯೂ ಸರ್ಕಾರದ ಈ 'ಐದು ಯೋಜನೆ'ಗಳನ್ನ ಮಿಸ್‌ ಮಾಡ್ಕೊಳ್ಬೇಡಿ,

Thu Jul 7 , 2022
ನವದೆಹಲಿ : ನಮ್ಮ ದೇಶದ ಪ್ರತಿಯೊಂದು ವಿಭಾಗಕ್ಕೂ ವಿವಿಧ ಯೋಜನೆಗಳನ್ನ ಜಾರಿಗೆ ತರಲಾಗುತ್ತಿದೆ, ಅದರ ಉದ್ದೇಶವು ನಿರ್ಗತಿಕರು ಮತ್ತು ಬಡ ವರ್ಗಗಳಿಗೆ ಸಹಾಯ ಮಾಡುವುದೇ ಆಗಿದೆ. ಇದು ಆರೋಗ್ಯ, ಉದ್ಯೋಗ, ವಿಮೆ, ಪಡಿತರ ಮುಂತಾದ ಅನೇಕ ಯೋಜನೆಗಳನ್ನ ಒಳಗೊಂಡಿದೆ. ಅಂತೆಯೇ, ದೇಶದ ರೈತರಿಗೆ ಅನೇಕ ಪ್ರಯೋಜನಕಾರಿ ಯೋಜನೆಗಳನ್ನ ಜಾರಿಗೆ ತರಲಾಗುತ್ತಿದೆ. ಈ ಯೋಜನೆಯಡಿ, ರೈತರಿಗೆ ವಿವಿಧ ರೀತಿಯ ಆರ್ಥಿಕ ಮತ್ತು ಇತರ ಪ್ರಯೋಜನಗಳನ್ನ ನೀಡಲಾಗುತ್ತದೆ. ಅದೇ ಸಮಯದಲ್ಲಿ, ರೈತರು ಸಹ […]

Advertisement

Wordpress Social Share Plugin powered by Ultimatelysocial