ಬೆಂಗಳೂರು: ಎಂಇಎಸ್ ವಿಚಾರದಲ್ಲಿ ಸರ್ಕಾರ ಕಠಿಣ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ಪದೆ ಪದೆ ಇಂತಹ ಘಟನೆಗಳು ಆಗುತ್ತಲೇ ಇರುತ್ತವೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರ ಇರುವುದು ಇಂತಹವರನ್ನು ಬಲಿ ಹಾಕಲು.
ಪುಂಡಾಟಿಕೆ ಮಾಡಿದರೆ ಬಲಿ ಹಾಕಬೇಕು. ಸರ್ಕಾರ ಮೃದುವಾಗಿದ್ದರೆ ಈ ತರಹ್ ಘಟನೆಗಳು ನಡೆಯುತ್ತದೆ ಎಂದರು.
ಎರಡನೇ ರಾಜ್ಯಸಭಾ ಅಭ್ಯರ್ಥಿ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಿದ್ದರಾಮಯ್ಯ, ಈ ಬಗ್ಗೆ ಚರ್ಚೆಯಾಗಿಲ್ಲ ಎಂದರು.
ಬೆಳಗಾವಿ ಜಿಲ್ಲೆಯಲ್ಲಿ ಮದುವೆ ಮೆರವಣಿಗೆಯಲ್ಲಿ ಕನ್ನಡ ಹಾಡು ಹಾಕಿದ್ದಕ್ಕೆ ಎಂಇಎಸ್ ಸಂಘಟನೆಯ ಕೆಲವು ಪುಂಡರು ವಧು ವರ ಮತ್ತು ಇತರರ ಮೇಲೆ ಹಲ್ಲೆ ನಡೆಸಿದ್ದರು.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://plಇay.google.com/store/apps/details?id=com.speed.newskannada