ಬೆಂಗಳೂರು: ನಗರದಲ್ಲಿ ಸುರಿದಂತ ಭಾರೀ ಮಳೆಯಿಂದ ಉಂಟಾದಂತ ಅವಾಂತರಕ್ಕೆ ಜನರು ತತ್ತರಿಸಿ ಹೋಗಿದ್ದಾರೆ. ಜನರ ಕಷ್ಟ, ಸಮಸ್ಯೆ ಪರಿಹರಿಸೋ ನಿಟ್ಟಿನಲ್ಲಿ, ಸಿಎಂ ಬಸವರಾಜ ಬೊಮ್ಮಾಯಿಯವರು ( CM Basavaraj Bommai ) ನಗರ ಪ್ರದಕ್ಷಿಣೆ ನಡೆಸುತ್ತಿದ್ದಾರೆ.
ಇತ್ತ ಸಿಎಂ ನಗರ ಪ್ರದಕ್ಷಿಣೆ ಬೆನ್ನಲ್ಲೇ ವಿಪಕ್ಷ ನಾಯಕ ಸಿದ್ಧರಾಮಯ್ಯ ಕೂಡ ಸಿಟಿ ರೌಂಡ್ಸ್ ಗೆ ಮುಂದಾಗಿದ್ದಾರೆ.
ಹೌದು.. ಮಾಜಿ ಸಿಎಂ ಸಿದ್ಧರಾಮಯ್ಯ ಅವರು, ಇಂದು ಬೆಂಗಳೂರಿನ ನೆರೆ, ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿಯನ್ನು ನೀಡಲಿದ್ದಾರೆ. ಇಂದು ಮಧ್ಯಾಹ್ನ 3 ಗಂಟೆಯಿಂದ ನಗರ ಪ್ರದಕ್ಷಿಣೆಯನ್ನು ಆರಂಭಿಸಲಿದ್ದಾರೆ. ಬೆಂಗಳೂರಿನಲ್ಲಿ ಮಳೆಯಿಂದ ಸಂಕಷ್ಟಕ್ಕೆ ಒಳಗಾಗಿರುವಂತ ಜನರನ್ನು ಭೇಟಿ ಮಾಡಲಿದ್ದಾರೆ.
ಇನ್ನು ಮಳೆಯಿಂದ ಮನೆಗೆ ನೀರು ನುಗ್ಗಿ ಅವಾಂತರಗೊಂಡಿರುವಂತ ಪ್ರದೇಶಗಳಿಗೆ ಭೇಟಿ ನೀಡಲಿರುವಂತ ಅವರು, ಜನರ ಸಮಸ್ಯೆಗಳನ್ನು ಆಲಿಸಿ, ಸಮಸ್ಯೆ ಪರಿಹಾರದ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲು ಸೂಚನೆ ನೀಡಲಿದ್ದಾರೆ.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://plಇay.google.com/store/apps/details?id=com.speed.newskannada