ಸಿದ್ದರಾಮಯ್ಯ ಬೇಕಾದರೆ ಗೋ ಮಾಂಸ ತಿನ್ನಲಿ, ಆದರೆ ವಕೀಲಿಕೆ ಮಾಡಬೇಡಿ:

 

ಬೆಂಗಳೂರು: ದಲಿತರು, ಹಿಂದುಳಿದವರು, ಹಿಂದೂಗಳು, ಕ್ರೈಸ್ತರೂ ಗೋಮಾಂಸ ತಿನ್ನುತ್ತಾರೆ. ಹಾಗಾಗಿ ಗೋ ಮಾಂಸ ನಿಷೇಧ ಮಾಡಬಾರದೆಂದು ಸಿದ್ದರಾಮಯ್ಯ ಹೇಳಿದ್ದಾರೆ. ಬೇಕಾದರೆ ಅವರು ಗೋಮಾಂಸ ತಿನ್ನಲಿ. ಆದರೆ ವಕೀಲಿಕೆ ಮಾಡುವುದು ಬೇಡ ಎಂದು ಬಿಜೆಪಿ ರಾಜ್ಯ ವಕ್ತಾರ ಛಲವಾದಿ ನಾರಾಯಣಸ್ವಾಮಿ ಹೇಳಿದರು.

ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸರ್ಕಾರ ನಿರ್ಧಾರ ತೆಗೆದುಕೊಂಡಾಗ ಅದಕ್ಕೆ ಬೆಂಬಲ ನೀಡಬೇಕು. ಆದರೆ ಅದನ್ನು ವಿರೋಧಿಸುವುದು ಬೇಡ ಎಂದರು.

ಸಿದ್ದರಾಮಯ್ಯ ದೇವಸ್ಥಾನಕ್ಕೆ‌ ಹೋಗುವಾಗ ಮಾಂಸ ತಿಂದು ಹೋಗಿದ್ದರು. ಅದನ್ನೂ ಸಮರ್ಥನೆ ಮಾಡಿಕೊಂಡಿದ್ದರು. ಅವರಿಗೆ ಬಿಜೆಪಿ, ಆರ್ ಎಸ್‌ಎಸ್ ಬಗ್ಗೆ ಮಾತನಾಡುವ ಚಟ. ಅವರು ಬೇರೆ ಬೇರೆ ಸಂದರ್ಭದಲ್ಲಿ ಮಾತನಾಡುವಾಗ ದಲಿತರನ್ನು, ಹಿಂದುಳಿದವರನ್ನು ಎತ್ತಿ ಕಟ್ಟುತ್ತಾರೆ. ದೇಶ ದೊಡ್ಡದು, ದೇಶ ಕಟ್ಟುವ ಕೆಲಸ ಮಾಡಬೇಕೇ ಹೊರತು ವಿಷ ಬೀಜ ಬಿತ್ತುವ ಕೆಲಸ ಮಾಡಬಾರದು ಎಂದು ಛಲವಾದಿ ನಾರಾಯಣಸ್ವಾಮಿ ಹೇಳಿದರು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಭಾರತದ ಪ್ರಮುಖ ನಗರಗಳಲ್ಲಿ ಚಿನ್ನ-ಬೆಳ್ಳಿ ದರ ಎಷ್ಟಿದೆ?

Mon May 23 , 2022
  ನವದೆಹಲಿ, ಮೇ 23: ಭಾರತದಲ್ಲಿ ಚಿನ್ನ-ಬೆಳ್ಳಿ ಬೆಲೆಯಲ್ಲಿನ ಏರಿಳಿತ ಮುಂದುವರಿದಿದೆ. ದೇಶದಲ್ಲಿ ಭಾನುವಾರ ಸ್ಥಿರತೆ ಕಾಯ್ದುಗೊಂಡಿದ್ದ ಚಿನ್ನದ ಬೆಲೆಯು ಸೋಮವಾರ 100 ರೂಪಾಯಿ ಏರಿಕೆಯಾಗಿದೆ. ದೇಶದಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆಯು 47,150 ರೂಪಾಯಿ ಆಗಿದೆ. ಇದೇ ಸಂದರ್ಭದಲ್ಲಿ 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆಯ 51,430 ರೂಪಾಯಿ ಆಗಿದೆ. ಬೆಳ್ಳಿ ದರದಲ್ಲೂ 400 ರೂಪಾಯಿ ಏರಿಕೆಯಾಗಿದ್ದು, ಒಂದು ಕೆಜಿ ಬೆಳ್ಳಿಗೆ 61,800 ರೂಪಾಯಿ […]

Advertisement

Wordpress Social Share Plugin powered by Ultimatelysocial