ಬೆಂಗಳೂರು, ಜೂ.4- ದಲಿತ ನಾಯಕ ಖರ್ಗೆ ಅವರ ಮೇಲುಗೈ ಆಗುತ್ತದೆ ಎಂಬ ಭಯದಿಂದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೊಂದಾಣಿಕೆ ನಾಟಕ ಮಾಡುತ್ತಿದ್ದಾರೆ ಎಂದು ಬಿಜೆಪಿ ವ್ಯಂಗ್ಯವಾಡಿದೆ.
ಈ ಕುರಿತು ಸರಣಿ ಟ್ವೀಟ್ ಮಾಡಿರುವ ಬಿಜೆಪಿ, ದಲಿತ ನಾಯಕನೋರ್ವ ಸಿಎಂ ಆಗುತ್ತಾರೆ ಎಂಬ ಭಯ ನಿಮ್ಮಲ್ಲಿ. ಒಗ್ಗಟ್ಟಿನ ಮಂತ್ರ ಜಪಿಸುವಂತೆ ಮಾಡಿತೇ ಎಂದು ಪ್ರಶ್ನೆ ಮಾಡಿದ್ದಾರೆ.
ಮುಂದೆ ನೀವು ಸಿಎಂ ಆಗಲು ಸಹಕರಿಸುತ್ತೇವೆ ಎಂಬ ಖರ್ಗೆ ಅವರಿಗೆ ಜೆಡಿಎಸ್ ಹೇಳಿದ್ದು ಸಿದ್ದರಾಮಯ್ಯ ಮತ್ತು ಡಿ.ಕೆ.ಶಿ ಅವರಿಗೆ ಬರಸಿಡಿಲು ಬಡಿದಂತಾಗಿದೆ ಎಂದಿದೆ. 2013ರಲ್ಲಿ ದಲಿತ ನಾಯಕ ಮುಖ್ಯಮಂತ್ರಿಯಾಗುವುದನ್ನು ತಪ್ಪಿಸಿದ ಕಾಂಗ್ರೆಸ್, 2023ರಲ್ಲೂ ಅದೇ ತಂತ್ರ ಅನುಸರಿಸುತ್ತದೆ. ದಲಿತ ನಾಯಕ ಎಂದರೆ ಯಾಕಿಷ್ಟು ಅಸಹನೆ ಎಂದು ಪ್ರಶ್ನೆ ಮಾಡಿದೆ.
ನಮ್ಮದು ದಲಿತರ ಪಕ್ಷ ಎನ್ನುವ ಕಾಂಗ್ರೆಸ್ ವಾಸ್ತವದಲ್ಲಿ ದಲಿತ ಸಮುದಾಯವನ್ನು ಮೇಲೇರಲು ಬಿಡಲೇ ಇಲ್ಲ. ಸಿಎಂ ಆಗಲಿದ್ದ ಪರಮೇಶ್ವರ್ ಅವರನ್ನು ಸೋಲಿಸಿ ದರು. ನಂತರ ಡಿಸಿಎಂ ಸ್ಥಾನದಿಂದಲೂ ಕಿತ್ತೆಸೆದರು. ಈಗ ಅವರ ದೃಷ್ಟಿ ಖರ್ಗೆ ಮೇಲೆ.
ದಲಿತರನ್ನು ಮುಖ್ಯಮಂತ್ರಿ ಮಾಡುವುದಿಲ್ಲ ಎಂದು ದಲಿತ ವಿರೋಧಿ ಕಾಂಗ್ರೆಸ್ ಪಣ ತೊಟ್ಟಿದೆಯೇ ಎಂದು ಬಿಜೆಪಿ ವಾಗ್ದಾಳಿ ಮಾಡಿದೆ.
ಅಖಂಡ ಶ್ರೀನಿವಾಸಮೂರ್ತಿ ಮನೆ ಮೇಲೆ ಮತಾಂಧರು ದಾಳಿ ನಡೆಸಿದಾಗ ಕೈ ನಾಯಕರು ಕೈ ಕಟ್ಟಿ ಕುಳಿತಿದ್ದರು. ಮತಾಂಧರನ್ನು ಓಲೈಸಲು ದಲಿತರ ಮೇಲಿನ ದಾಳಿ ಯನ್ನು ಕಾಂಗ್ರೆಸ್ ಸಮರ್ಥಿಸಿ ಕೊಳ್ಳುತ್ತದೆ ಎಂದು ಬಿಜೆಪಿ ಗಂಭೀರ ಆರೋಪ ಮಾಡಿದೆ.
ಸಿದ್ದರಾಮಯ್ಯ- 2013ರಲ್ಲಿ ಪರಮೇಶ್ವರ್ ಸೋಲಿಗೆ ಕಾರಣ. ಸಿದ್ದರಾಮಯ್ಯ v/s ಡಿಕೆಶಿ. 2023 ಖರ್ಗೆ ಕಟ್ಟಿ ಹಾಕಲು ಪಣ. ಒಬ್ಬ ದಲಿತ ನಾಯಕನನ್ನು ಹಿಮ್ಮೆಟ್ಟಿಸಲು ಎಷ್ಟೊಂದು ಉತ್ಸುಹಕ ಎಂದು ಬಿಜೆಪಿ ಟೀಕಾ ಪ್ರಹಾರ ನಡೆಸಿದೆ.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://plಇay.google.com/store/apps/details?id=com.speed.newskannada