ಹಿಜಾಬ್ ವಿವಾದದ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಮಾಜಿ ಸಿಎಂ !

ಹಿಜಾಬ್ ವಿವಾದದ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಮಾಜಿ ಸಿಎಂ ಹಾಗೂ ಕಾಂಗ್ರೆಸ್ ಹಿರಿಯ ನಾಯಕ ಸಿದ್ದರಾಮಯ್ಯ ಬಿಜೆಪಿ ನಾಯಕರನ್ನು ಹಾಗೂ ಕರ್ನಾಟಕ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.ಸರ್ಕಾರದ ಹಾಗೂ ಸಚಿವರ ಹೇಳಿಕೆಗಳ ತುಣುಕುಗಳನ್ನ ಹಂಚಿಕೊಂಡು ನಿಮಗೆ ವಿವಾದ ಸೃಷ್ಟಿಸಿರುವವರ ಬಗ್ಗೆ ತಿಳಿದಿದ್ದರೆ ಕಾಲಹರಣ ಬಿಟ್ಟು ಕ್ರಮ ಕೈಗೊಳ್ಳಿ ಎಂದಿದ್ದಾರೆ‌.ತಿಂಗಳ ಹಿಂದೆಯೇ ಹುಟ್ಟಿಕೊಂಡಿದ್ದ ಹಿಜಾಬ್-ಕೇಸರಿ ಶಾಲು ವಿವಾದ ಹೊತ್ತಿ ಉರಿಯತೊಡಗಿದ ನಂತರ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅವರಿಗೆ ಇದರ ಹಿಂದೆ ಎಸ್.ಡಿ.ಪಿ.ಐ. – ಸಿ.ಎಫ್.ಐ. ಇರಬಹುದೆಂಬ ಶಂಕೆ ಮೂಡಿದೆಯಂತೆ. ಇಲ್ಲಿಯವರೆಗೆ ಗೃಹಸಚಿವರು, ಪೊಲೀಸರು, ಇಂಟಲಿಜೆನ್ಸ್ ಏನು ಮಾಡ್ತಿದ್ದರು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.ಹಿಜಾಬ್-ಕೇಸರಿ ಶಾಲು ವಿವಾದದ ಹಿಂದೆ ಕಾಂಗ್ರೆಸ್ ಇದೆ ಎಂಬ ಬಿಜೆಪಿ ನಾಯಕರ ಆರೋಪದ ಹಿನ್ನೆಯಲ್ಲಿ ಸರಣಿ ಟ್ವಿಟ್ ಮೂಲಕ ಪ್ರತ್ಯುತ್ತರ ನೀಡಿರುವ ಸಿದ್ದರಾಮಯ್ಯ ಅವರು, ಗೃಹಸಚಿವ ಜ್ಞಾನೇಂದ್ರ ಆರಗ, ಸಚಿವ ಕೆ.ಎಸ್.ಈಶ್ವರಪ್ಪ ಸೇರಿದಂತೆ ಬಿಜೆಪಿ ನಾಯಕರು ಹಿಜಾಬ್-ಕೇಸರಿ ಶಾಲು ವಿವಾದದ ಹಿಂದೆ ಕಾಂಗ್ರೆಸ್ ಇದೆ ಎನ್ನುತ್ತಿದ್ದಾರೆ. ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರಿಗೆ ಸಿ ಎಫ್ ಐ ಮೇಲೆ ಶಂಕೆಯಂತೆ. ಮೊದಲು ಇವರೆಲ್ಲರೂ ಕೂಡಿ ಒಂದು ತೀರ್ಮಾನಕ್ಕೆ ಬರುವುದು ಒಳ್ಳೆಯದು ಎಂದು ಹೇಳಿದ್ದಾರೆ.ಎಸ್ಡಿಪಿಐಯೋ, ಸಿಎಫ್‌ಐಯೋ ವಿದ್ಯಾರ್ಥಿಗಳ ನಡುವೆ ಕೋಮುಸಂಘರ್ಷ ಹುಟ್ಟು ಹಾಕುತ್ತಿರುವವರು ಯಾರೇ ಇರಲಿ, ಅಂತಹವರನ್ನು ಗುರುತಿಸಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಿ. ಇನ್ನೂ ಶಂಕೆ-ಅನುಮಾನ ಎಂದು ಕಾಲಹರಣ ಯಾಕೆ ಮಾಡುತ್ತೀರಿ? ಆರೋಪಿಗಳ ಜೊತೆ ಏನಾದರೂ ಒಳಒಪ್ಪಂದ ನಡೆದಿದೆಯೇ? ಎಂದು ಮುಖ್ಯಮಂತ್ರಿಯನ್ನು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.ಹಿಜಾಬ್ ಧಾರಣೆಯ ಸರಿ-ತಪ್ಪು ಬಗ್ಗೆ ನ್ಯಾಯಾಲಯ ನಿರ್ಧರಿಸಲಿ, ಅಲ್ಲಿಯವರೆಗೆ ಕಾಯೋಣ. ಆದರೆ ವಿದ್ಯಾರ್ಥಿನಿಯರ ಮೇಲೆ ಹಲ್ಲೆಗೆ ಪ್ರಯತ್ನ, ಶಾಲೆಗೆ ಕಲ್ಲೆಸೆತ, ರಾಷ್ಟ್ರಧ್ವಜ ಸ್ತಂಭದಲ್ಲಿ ಕೇಸರಿ ಬಾವುಟ ಅಪರಾಧ ಹೌದಾದರೆ ಮೊದಲು ಈ ಪುಂಡ ವಿದ್ಯಾರ್ಥಿಗಳ ಮೇಲೆ ಕ್ರಮಕೈಗೊಳ್ಳಿ ಎಂದಿದ್ದಾರೆ.ಹಿಜಾಬ್-ಕೇಸರಿ ಶಾಲು ವಿವಾದದ ಹಿಂದೆ ಯಾರಿದ್ದಾರೆಂದು ರಾಜ್ಯ ಸರಕಾರ ತನಿಖೆ ನಡೆಸಿ ಪತ್ತೆಹಚ್ಚಿ ಜನರಿಗೆ ತಿಳಿಸಲಿ. ವಿವಾದದ ಮುಂದೆ ಯಾರಿದ್ದಾರೆ ಎನ್ನುವುದನ್ನು ರಾಜ್ಯ, ದೇಶ, ವಿದೇಶದ ಜನತೆ ಲೈವ್ ವಿಡಿಯೋಗಳಲ್ಲಿ ನೋಡುತ್ತಿದ್ದಾರೆ. ಅವರ ವಿರುದ್ಧ ಕ್ರಮ ಯಾವಾಗ? ಎಂದು ಮುಖ್ಯಮಂತ್ರಿಯನ್ನು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

BOLLYWOOD:ಮಾಧುರಿ ದೀಕ್ಷಿತ್ ದಿ ಫೇಮ್ ಗೇಮ್ನಲ್ಲಿ ಗ್ಲಾಮರ್ ಮತ್ತು ಸ್ಟಾರ್ಡಮ್ನ ಡಾರ್ಕ್ ಸೈಡ್ ಅನ್ನು ಅನಾವರಣ;

Wed Feb 9 , 2022
ಮಾಧುರಿ ದೀಕ್ಷಿತ್ ನೆಟ್‌ಫ್ಲಿಕ್ಸ್‌ನ ದಿ ಫೇಮ್ ಗೇಮ್‌ನೊಂದಿಗೆ ಡಿಜಿಟಲ್‌ಗೆ ಪಾದಾರ್ಪಣೆ ಮಾಡಲು ಸಿದ್ಧರಾಗಿದ್ದಾರೆ. ಮುಂಬರುವ ಸರಣಿಯ ಟ್ರೇಲರ್ ಫೆಬ್ರವರಿ 10 ರಂದು ಬಿಡುಗಡೆಯಾಗಲಿದೆ. ಕರಣ್ ಜೋಹರ್ ನಿರ್ಮಿಸಿದ, ಮಾಧುರಿ ಜಾಗತಿಕ ಸೂಪರ್‌ಸ್ಟಾರ್ ಅನಾಮಿಕಾ ಆನಂದ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ, ಅವರು ಇದ್ದಕ್ಕಿದ್ದಂತೆ ಕಣ್ಮರೆಯಾಗುತ್ತಾರೆ. ಫೇಮ್ ಗೇಮ್ ಅನ್ನು ಮೊದಲು ಫೈಂಡಿಂಗ್ ಅನಾಮಿಕಾ ಎಂದು ಹೆಸರಿಸಲಾಗಿತ್ತು. ಇದು ಫೆಬ್ರವರಿ 25 ರಂದು OTT ಪ್ಲಾಟ್‌ಫಾರ್ಮ್‌ನಲ್ಲಿ ಪ್ರಥಮ ಪ್ರದರ್ಶನಗೊಳ್ಳಲಿದೆ. ಫೇಮ್ ಗೇಮ್ ಟ್ರೈಲರ್ ಫೆಬ್ರವರಿ […]

Advertisement

Wordpress Social Share Plugin powered by Ultimatelysocial