ರಾಮನಗರ: ಚನ್ನಪಟ್ಟಣದ ವಂದಾರಗುಪ್ಪೆ ಬಳಿಯ ರೇಷ್ಮೆ ಇಲಾಖೆ ಆವರಣದಲ್ಲಿ ಹೈಟೆಕ್ ರೇಷ್ಮೆ ಮಾರುಕಟ್ಟೆ ನಿರ್ಮಾಣಕ್ಕೆ ಸರ್ಕಾರ ಆಡಳಿತಾತ್ಮಕ ಅನುಮೋದನೆ ನೀಡಿದೆ.ಇದರಿಂದ ರಾಮನಗರ-ಚನ್ನಪಟ್ಟಣ ಅವಳಿ ನಗರದಲ್ಲಿ ಹೈಟೆಕ್ ರೇಷ್ಮೆ ಮಾರುಕಟ್ಟೆ ನಿರ್ಮಾಣದ ಕನಸು ನನಸಾಗಲಿದೆ.ಜ.27ರ ಸಚಿವ ಸಂಪುಟ ಸಭೆಯಲ್ಲಿ ಈ ಯೋಜನೆಗೆ ಅನುಮೋದನೆ ನೀಡಲಾಗಿದ್ದು, ಇದೀಗ ಆದೇಶ ಹೊರಡಿಸಲಾಗಿದೆ.75 ಕೋಟಿ ರೂ. ವೆಚ್ಚ: ಚನ್ನಪಟ್ಟಣದ ಸರ್ಕಾರಿ ರೇಷ್ಮೆ ತರಬೇತಿ ಸಂಸ್ಥೆಯ 20 ಎಕರೆ ಜಾಗದಲ್ಲಿ 75 ಕೋಟಿ ರೂಪಾಯಿ ವೆಚ್ಚದಲ್ಲಿ ರೇಷ್ಮೆ ಮಾರುಕಟ್ಟೆ ನಿರ್ಮಾಣವಾಗಲಿದೆ. ಹೈಟೆಕ್ ರೇಷ್ಮೆ ಮಾರುಕಟ್ಟೆ ನಿರ್ಮಾಣಕ್ಕೆ ನಬಾರ್ಡ್ನಿಂದ 75 ಕೋಟಿ ರೂ. ಆರ್ಥಿಕ ನೆರವು ಈಗಾಗಲೇ ಬಿಡುಗಡೆ ಆಗಿದೆ.10 ದಿನಗಳಲ್ಲಿ ಟೆಂಡರ್: ಮಾರುಕಟ್ಟೆಗೆ ಪ್ರತಿದಿನ 40-50 ಟನ್ ರೇಷ್ಮೆಗೂಡು ಬರುತ್ತಿದೆ. ಹೈಟೆಕ್ ಮಾರುಕಟ್ಟೆ ನಿರ್ಮಾಣವಾದ ಬಳಿಕ ಇದರ ಪ್ರಮಾಣ 100-150 ಟನ್ಗೆ ಹೆಚ್ಚಳವಾಗುವ ನಿರೀಕ್ಷೆ ಇದೆ. ಹಾಗಾಗಿ, 10 ದಿನಗಳಲ್ಲಿ ಟೆಂಡರ್ ಕರೆದು, ಆದಷ್ಟು ಬೇಗ ಭೂಮಿಪೂಜೆ ನೆರವೇರಿಸಲು ಕ್ರಮ ಕೈಗೊಳ್ಳುವಂತೆ ರೇಷ್ಮೆ ಇಲಾಖೆ ಸಚಿವ ಡಾ. ನಾರಾಯಣಗೌಡ ಅಧಿಕಾರಿಗಳಿಗೆ ಸೂಚಿಸಿದ್ದಾರೆ.ಮಾರುಕಟ್ಟೆಯಲ್ಲಿ ಏನೆಲ್ಲ ಇರಲಿದೆ : ಹೈಟೆಕ್ ಮಾರುಕಟ್ಟೆಯಲ್ಲಿ ಆಧುನಿಕ ಪ್ರವೇಶದ್ವಾರ, ಗಣಕೀಕೃತ ರೇಷ್ಮೆಗೂಡು ಹರಾಜು ಸಭಾಂಗಣ, ಕೋರ್ ಕಟ್ಟಡ, ಶೌಚಗೃಹದ ಬ್ಲಾಕ್, ಅಗ್ನಿಶಾಮಕದಳದ ಕೊಠಡಿ, ವಿದ್ಯುತ್ ಕೊಠಡಿ, ಪೊಲೀಸ್ ಚೌಕಿ, ನೀರು ಶೇಖರಣಾ ತೊಟ್ಟಿ, ಒಳಚರಂಡಿ ಸಂಸ್ಕರಣಾ ಘಟಕ, ಕಾಂಪೌಂಡ್, ಸೋಲಾರ್ ವ್ಯವಸ್ಥೆ, ಸಿಸಿ ಕ್ಯಾಮರಾ, ಹವಾನಿಯಂತ್ರಣ ವ್ಯವಸ್ಥೆ, ಆಂತರಿಕ ರಸ್ತೆಗಳು, ಜನರೇಟರ್ ಮತ್ತಿತರ ಸೌಲಭ್ಯಗಳು.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.speed.newskannada