ಆಕ್ಷನ್ ಮೂಡ್​ನಲ್ಲಿ ‘ಸೀತಾ ಲಕ್ಷ್ಮಿ’,

ಕಿರುತೆರೆಯಲ್ಲಿ ಸೀರಿಯಲ್ ಮೂಲಕ ಬಣ್ಣದ ಲೋಕಕ್ಕೆ ಕಾಲಿಟ್ಟ ಮೃಣಾಲ್ ಠಾಕೂರ್ ಅವರು ಮರಾಠಿ ಚಿತ್ರ ‘ವಿಟ್ಟಿ ದಂಡು’ ಮೂಲಕ ಬೆಳ್ಳಿತೆರೆಗೆ ಪದಾರ್ಪಣೆ ಮಾಡಿದರು.

ಆ ನಂತರ ಮರಾಠಿ ಹಾಗೂ ಹಿಂದಿ ಚಿತ್ರಗಳಲ್ಲಿ ನಟಿಸಿ ಫೇಮಸ್ ಆಗಿದ್ದಾರೆ. (ಇನ್ಸ್ಟಾಗ್ರಾಮ್/ಫೋಟೋ/ಮೃಣಾಲ್ ಠಾಕೂರ್)

ಸೀತಾರಾಮಂ ಸಿನಿಮಾ ಬಳಿಲ ಮೃಣಾಲ್ ಸದ್ಯ ಸೆಲ್ಫಿ ಎಂಬ ಹಿಂದಿ ಸಿನಿಮಾ ಶೂಟಿಂಗ್​ನಲ್ಲಿ ಬ್ಯುಸಿ ಆಗಿದ್ದಾರೆ. ಈ ಚಿತ್ರದಲ್ಲಿ ಅಕ್ಷಯ್ ಕುಮಾರ್ ಜೊತೆ ಮೃಣಾಲ್ ಕಾಣಿಸಿಕೊಳ್ತಿದ್ದಾರೆ. ಈ ಚಿತ್ರ ಮಲಯಾಳಂನ ಡ್ರೈವಿಂಗ್ ಲೈಸೆನ್ಸ್ ಸಿನಿಮಾ ರಿಮೇಕ್ ಆಗಿದೆ. ಶೂಟಿಂಗ್ ಕೂಡ ಕಂಪ್ಲೀಟ್ ಆಗಿದ್ದು, ಈ ಚಿತ್ರವು 24 ಫೆಬ್ರವರಿ 2023 ರಂದು ಚಿತ್ರಮಂದಿರಗಳಲ್ಲಿ ರಿಲೀಸ್ ಆಗಲಿದೆ.

ಹನು ರಾಘವಪುಡಿ ನಿರ್ದೇಶನದ ‘ಸೀತಾ ರಾಮಂ ಸಿನಿಮಾದಲ್ಲಿ ದುಲ್ಕರ್ ಸಲ್ಮಾನ್ ನಾಯಕನಾಗಿ ಮತ್ತು ಮೃಣಾಲ್ ಠಾಕೂರ್ ನಾಯಕಿಯಾಗಿ ನಟಿಸಿದ್ದರು. ಮತ್ತೊಂದು ಪ್ರಮುಖ ಪಾತ್ರದಲ್ಲಿ ರಶ್ಮಿಕಾ ಮಂದಣ್ಣ ನಟಿಸಿದ್ದರು. ಈ ಸಿನಿಮಾದ ಯಶಸ್ಸಿನಿಂದ ಮೃಣಾಲ್ ಠಾಕೂರ್ ಗೆ ಹಲವು ಅವಕಾಶಗಳು ಬರುತ್ತಿವೆ.

ಹಿರಿಯ ನಾಯಕ ನಾಗಾರ್ಜುನ ಜೊತೆ ಮೃಣಾಲ್ ಠಾಕೂರ್ ನಾಯಕಿಯಾಗಿ ನಟಿಸಲಿದ್ದಾರಂತೆ. ನಿರ್ದೇಶಕ-ನಿರ್ಮಾಪಕರು ನಾಯಕಿ ಪಾತ್ರಕ್ಕೆ ಮೃಣಾಲ್ ಅವರನ್ನು ಆಯ್ಕೆ ಮಾಡಿದ್ದಾರಂತೆ. ಈ ಬಗ್ಗೆ ಅಧಿಕೃತ ಘೋಷಣೆ ಇನ್ನಷ್ಟೇ ಹೊರಬೀಳಬೇಕಿದೆ. ಸೀತಾರಾಮಂ ಚಿತ್ರದ ಯಶಸ್ಸಿನ ನಂತರ ಮೃಣಾಲ್ ಠಾಕೂರ್ ಸಂಭಾವನೆ ಕೂಡ ದುಪ್ಪಟ್ಟಾಗಿದೆ ಎಂಬ ವರದಿಗಳು ಹರಿದಾಡ್ತಿದೆ.

ಮರಾಠಿ ಬ್ಯೂಟಿ ಮೃಣಾಲ್ ಠಾಕೂರ್ ಸೀತಾ ರಾಮಂ ಚಿತ್ರದ ಮೂಲಕ ಅಪಾರ ಅಭಿಮಾನಿ ಬಳಗ ಹೊಂದಿದ್ದಾರೆ. ಆ ಚಿತ್ರದಲ್ಲಿ ಮೃಣಾಲ್, ಸೀತಾ ಮಹಾಲಕ್ಷ್ಮಿಯಾಗಿ ಮತ್ತು ಮತ್ತೊಂದೆಡೆ ರಾಜಕುಮಾರಿ ನೂರ್ ಜಹಾನ್ ಆಗಿ ಸಖತ್ ಆಗಿ ಅಭಿನಯಿಸಿದ್ರು.

ಮೃಣಾಲ್ ಇತ್ತೀಚೆಗೆ ಸಂದರ್ಶನವೊಂದರಲ್ಲಿ ಮಾತಾಡಿದ್ದು, ಪ್ರೀತಿ ಹಾಗೂ ಮದುವೆ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ಸಮಾಜದ ಪ್ರತಿಯೊಬ್ಬ ಮಹಿಳೆಯನ್ನು ಇಂತಹ ಪ್ರಶ್ನೆ ಕಾಡುತ್ತಿರುತ್ತದೆ. ಜನರು ಕೂಡ ನಟಿಯರ ಮದುವೆ, ಪ್ರೀತಿ ಮತ್ತು ಮಕ್ಕಳ ಬಗ್ಗೆ ತಿಳಿದುಕೊಳ್ಳಲು ಬಯಸುತ್ತಾರೆ ಎಂದಿದ್ರು.

ನನ್ನನ್ನು ಚೆನ್ನಾಗಿ ಅರ್ಥಮಾಡಿಕೊಂಡ ವ್ಯಕ್ತಿಯನ್ನೇ ನಾನು ಮದುವೆಯಾಗುತ್ತೇನೆ. ನಾನು ಚಿತ್ರರಂಗದಲ್ಲಿದ್ದೇನೆ. ಅನೇಕ ಸವಾಲುಗಳು ಮತ್ತು ತೊಂದರೆಗಳು ಎದುರಾಗುತ್ತವೆ. ಮೇಲಾಗಿ ಈ ಸಂದರ್ಭದಲ್ಲಿ ಮಕ್ಕಳ ಬಗ್ಗೆ ಮಾತನಾಡುತ್ತಾ…ನಿಜ ಹೇಳಬೇಕೆಂದರೆ… ನನಗೆ ಮದುವೆಗೂ ಮುನ್ನವೇ ಮಕ್ಕಳಾಗಬೇಕು ಎಂದಿದ್ದಾರೆ. ಅಷ್ಟೇ ಅಲ್ಲದೇ ಪ್ರೀತಿಯ ಬಗ್ಗೆ ನನಗೆ ಒಳ್ಳೆಯ ಅಭಿಪ್ರಾಯವಿಲ್ಲ ಎಂದು ಏಕೆ ಹೇಳುತ್ತೀರಿ?

ದೊಡ್ಡ ಸ್ಟಾರ್ ಹೀರೋಗಳು ಕೂಡ ಈಕೆಯ ಜೊತೆ ಸಿನಿಮಾ ನಿರ್ಮಾಣಕ್ಕೆ ರೆಡಿಯಾಗುತ್ತಿದ್ದಾರೆ ಎಂಬ ಸುದ್ದಿ ಕೂಡ ಹರಿದಾಡ್ತಿದೆ. ಸದ್ಯ ನಾನಿ ಅವರ 30ನೇ ಚಿತ್ರದಲ್ಲಿ ಮೃಣಾಲ್ ಠಾಕೂರ್ ನಾಯಕಿಯಾಗಿ ನಟಿಸುತ್ತಿದ್ದಾರೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಗ್ಯಾರಂಟಿ ಯೋಜನೆ ಕಾಂಗ್ರೆಸ್ ಪಕ್ಷದ ಸರ್ಕಾರದಲ್ಲಿ ಜಾರಿ ಡಿಕೆಶಿ.

Tue Feb 21 , 2023
ಮೈಸೂರು,ಫೆ.20-ಬೆಲೆ ಏರಿಕೆಯಿಂದ ಸಂಕಷ್ಟದಲ್ಲಿರುವ ಜನರಿಗೆ ನೆರವಾಗುವ ಉದ್ದೇಶದಿಂದ ಕಾಂಗ್ರೆಸ್ ಪಕ್ಷ ಎರಡು ಗ್ಯಾರಂಟಿ ಯೋಜನೆ ಘೋಷಿಸಿದ್ದು ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುತ್ತಿದ್ದಂತೆ ಜಾರಿ ಮಾಡುತ್ತೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹೇಳಿದ್ದಾರೆ.ಗೃಹಜ್ಯೋತಿ ಯೋಜನೆ ಮೂಲಕ 200 ಯುನಿಟ್ ವಿದ್ಯುತ್ ಉಚಿತ, ಗೃಹಲಕ್ಷ್ಮಿ ಯೋಜನೆ ಮೂಲಕ ಪ್ರತಿ ಮನೆ ಯಜಮಾನಿಗೆ ಪ್ರತಿ ತಿಂಗಳು 2000 ರೂ. ಕೊಡ್ತೇವೆ. ವರ್ಷಕ್ಕೆ ಒಟ್ಟು 42 ಸಾವಿರದಂತೆ 5 ವರ್ಷಕ್ಕೆ 2 ಲಕ್ಷ […]

Advertisement

Wordpress Social Share Plugin powered by Ultimatelysocial