“ಈ ದೇಶದ ಪ್ರತಿಯೊಬ್ಬ ಪುರುಷನನ್ನು ಅತ್ಯಾಚಾರಿ ಎಂದು ಹೇಳುವುದು ಸೂಕ್ತವಲ್ಲ”

ಹೊಸದಿಲ್ಲಿ: ದೇಶದಲ್ಲಿ ಮಹಿಳೆಯರು ಹಾಗೂ ಮಕ್ಕಳ ರಕ್ಷಣೆ ಎಲ್ಲರಿಗೂ ಆದ್ಯತೆಯಾಗಿದೆ. ಆದರೆ ಪ್ರತಿ ವಿವಾಹವನ್ನು ಹಿಂಸಾತ್ಮಕವೆಂದು ಖಂಡಿಸುವುದು ಹಾಗೂ ಪ್ರತಿಯೊಬ್ಬ ಪುರುಷನನ್ನು ಅತ್ಯಾಚಾರಿ ಎಂದು ಹೇಳುವುದು ಸೂಕ್ತವಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಸ್ಮೃತಿ ಇರಾನಿ ಬುಧವಾರ ರಾಜ್ಯಸಭೆಯಲ್ಲಿ ಹೇಳಿದ್ದಾರೆ.ವೈವಾಹಿಕ ಅತ್ಯಾಚಾರದ ಕುರಿತು ಸಿಪಿಐ ನಾಯಕ ಬಿನೋಯ್ ವಿಶ್ವಂ ಅವರ ಪೂರಕ ಪ್ರಶ್ನೆಗೆ ಪ್ರತಿಕ್ರಿಯೆಯಾಗಿ ಇರಾನಿ ಪ್ರತಿಕ್ರಿಯಿಸಿದರು.ಕೌಟುಂಬಿಕ ಹಿಂಸಾಚಾರದ ವ್ಯಾಖ್ಯಾನದ ಕುರಿತು ಕೌಟುಂಬಿಕ ಹಿಂಸಾಚಾರ ಕಾಯ್ದೆಯ ಸೆಕ್ಷನ್ 3 ಮತ್ತು ಅತ್ಯಾಚಾರದ ಐಪಿಸಿಯ ಸೆಕ್ಷನ್ 375 ಅನ್ನು ಸರಕಾರ ಗಮನಿಸಿದೆಯೇ ಎಂದು ಅವರು ಕೇಳಿದರು. ‘….ನಾನು ಹೇಳುತ್ತೇನೆ. ಈ ದೇಶದ ಪ್ರತಿಯೊಂದು ಮದುವೆಯನ್ನು ಹಿಂಸಾತ್ಮಕ ಮದುವೆ ಎಂದು ಖಂಡಿಸುವುದು ಹಾಗೂ ಈ ದೇಶದ ಪ್ರತಿಯೊಬ್ಬ ಪುರುಷನನ್ನು ಅತ್ಯಾಚಾರಿ ಎಂದು ಖಂಡಿಸುವುದು ಸೂಕ್ತವಲ್ಲ’ ಎಂದು ಇರಾನಿ ಹೇಳಿದರು.ರಾಜ್ಯ ಸರಕಾರಗಳ ಸಹಯೋಗದೊಂದಿಗೆ ಈ ದೇಶದಲ್ಲಿ ಮಹಿಳೆಯರನ್ನು ರಕ್ಷಿಸುವುದು ಸರಕಾರದ ಪ್ರಯತ್ನವಾಗಿದೆ ಎಂದು ಅವರು ಹೇಳಿದರು. ಪ್ರಸ್ತುತ ಭಾರತದಾದ್ಯಂತ 30 ಕ್ಕೂ ಹೆಚ್ಚು ಸಹಾಯವಾಣಿಗಳು ಕಾರ್ಯನಿರ್ವಹಿಸುತ್ತಿವೆ. ಇದು 66 ಲಕ್ಷಕ್ಕೂ ಹೆಚ್ಚು ಮಹಿಳೆಯರಿಗೆ ಸಹಾಯ ಮಾಡಿದೆ. ಇದಲ್ಲದೆ, 703 ‘ಒನ್ ಸ್ಟಾಪ್ ಸೆಂಟರ್’ಗಳು ದೇಶದಲ್ಲಿ ಕಾರ್ಯನಿರ್ವಹಿಸುತ್ತಿವೆ ಹಾಗೂ ಇವು ಐದು ಲಕ್ಷಕ್ಕೂ ಹೆಚ್ಚು ಮಹಿಳೆಯರಿಗೆ ಸಹಾಯ ಮಾಡಿವೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

PKL:ಪ್ರೊ ಕಬಡ್ಡಿ ಲೀಗ್‌ ಪಂದ್ಯದಲ್ಲಿ ಬೆಂಗಳೂರು ಬುಲ್ಸ್‌ ಜಯ ಜಯಿಸಿತು

Wed Feb 2 , 2022
ಬೆಂಗಳೂರು: ವೈಟ್‌ಫೀಲ್ಡ್‌ನಲ್ಲಿರುವ ಗ್ರ್ಯಾಂಡ್ ಶೆರಟಾನ್ ಹೋಟೆಲ್‌ನಲ್ಲಿ ನಡೆಯುತ್ತಿರುವ ಪ್ರೊ ಕಬಡ್ಡಿ ಟೂರ್ನಿಯಲ್ಲಿ ಮಂಗಳವಾರ ನಡೆದ ಪಂದ್ಯದಲ್ಲಿ ಬೆಂಗಳೂರು ತಂಡವು 31-26 ರಿಂದ ಯುಪಿ ಯೋಧಾ ವಿರುದ್ಧ ಜಯಿಸಿತು. ಪವನ್ ಶೆರಾವತ್ (9) ಮತ್ತು ಭರತ್ (6) ರೇಡಿಂಗ್‌ನಲ್ಲಿ ಮಿಂಚಿದರು. ಅಮನ್ (7) ರಕ್ಷಣಾ ವಿಭಾಗದಲ್ಲಿ ಅಮೋಘ ಸಾಧನೆ ಮೆರೆದರು. ಯೋಧಾ ತಂಡದ ನಿತೀಶ್ ಕುಮಾರ್ ಮತ್ತು ಶ್ರೀಕಾಂತ್ ಜಾಧವ್ ತಲಾ ಆರು ಅಂಕ ಗಳಿಸಿದರು. ಇನ್ನೊಂದು ಪಂದ್ಯದಲ್ಲಿ ಗುಜರಾತ್ ಜೈಂಟ್ಸ್‌ 34-25ರಿಂದ […]

Advertisement

Wordpress Social Share Plugin powered by Ultimatelysocial