ಯೋಧನ ಮೇಲೆ ಹಲ್ಲೆಗೈದು ಚಿನ್ನದ ಸರ ಕಿತ್ತುಕೊಂಡು ಹೋದ ಪುಂಡರು ದೂರು ದಾಖಲು.

 

ಭಾರತೀಯ ಸೇನೆಯ ವೈದ್ಯಕೀಯ ವಿಭಾಗದಲ್ಲಿ ಲ್ಯಾಬ್ ಟೆಕ್ನಿಷಿಯನ್ ಆಗಿ ಕೆಲಸ ಮಾಡುತ್ತಿರುವ ಯೋಧರೊಬ್ಬರ ಮೇಲೆ ಕಿರಾತಕರು ಹಲ್ಲೆ ನಡೆಸಿ ಚಿನ್ನದ ಸರ ಕಿತ್ತುಕೊಂಡು ಹೋಗಿರುವ ಘಟನೆ ಧಾರವಾಡ ತಾಲೂಕಿನ ಮರೇವಾಡ ಗ್ರಾಮದ ಮಹಾದ್ವಾರದ ಬಳಿ ನಡೆದಿದೆ.ಧಾರವಾಡ ತಾಲೂಕಿನ ಹೆಬ್ಬಳ್ಳಿ ಗ್ರಾಮದ ನಾಗರಾಜ ಹೆಬ್ಬಾಳ ಎಂಬುವವರ ಮೇಲೆಯೇ ಕಿರಾತಕರು ಹಲ್ಲೆ ನಡೆಸಿದ್ದಾರೆ. ಯೋಧ ನಾಗರಾಜ ಅವರು ತಮ್ಮ ಪತ್ನಿ ಹಾಗೂ ಮಕ್ಕಳನ್ನು ಕರೆದುಕೊಂಡು ಕಾರಿನಲ್ಲಿ ಹೊರಟಿದ್ದ ವೇಳೆ ಮುಂದೆ ಹೋಗುತ್ತಿದ್ದ ವಾಹನಕ್ಕೆ ಹಾರ್ನ್ ಹಾಕಿದ್ದಾರೆ. ಇದೇ ವಿಷಯ ಮುಂದಿಟ್ಟುಕೊಂಡು ಏಳೆಂಟು ಜನ ಅಲ್ಲಿಗೆ ಬಂದು ಹಾರ್ನ್ ಏಕೆ ಹಾಕುತ್ತಿದ್ದೀಯಾ ಎಂದು ನಾಗರಾಜ ಅವರ ಮೇಲೆ ಕೈಗೆ ಸಿಕ್ಕ ವಸ್ತುಗಳಿಂದ ಹಲ್ಲೆ ನಡೆಸಿದ್ದಾರೆ. ಅಲ್ಲದೇ ಅವರ ಕೊರಳಲ್ಲಿದ್ದ 20 ಗ್ರಾಂ ತೂಕದ ಚಿನ್ನದ ಸರ ಕಿತ್ತುಕೊಂಡು ಹೋಗಿದ್ದಾರೆ ಎಂದು ಧಾರವಾಡ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಎಫ್‌ಐಆರ್ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

 

 

Please follow and like us:

Leave a Reply

Your email address will not be published. Required fields are marked *

Next Post

ಶಾಸಕ ಎಂ. ಚಂದ್ರಪ್ಪಗೆ ಸೋಲಿನ ಭೀತಿ ಹಿನ್ನೆಲೆ ಕಾರ್ಯಕರ್ತರ ಸಭೆ.

Tue Feb 28 , 2023
  ಹೊಳಲ್ಕೆರೆ ಬಿಜೆಪಿ ಶಾಸಕ ಎಂ.ಚಂದ್ರಪ್ಪಗೆ ಈ ಬಾರಿಯ ಬಿಜೆಪಿ ಟಿಕೆಟ್ ಸಿಗುವ ಸಾಧ್ಯತೆ ಕಡಿಮೆ ಎನ್ನಲಾಗುತ್ತಿದ್ದು, ಈ ಬಾರಿ ಚುನಾವಣೆಗೆ ಸ್ಪರ್ಧೆ ಮಾಡಬೇಕಾ ಬೇಡವಾ ಎನ್ನುವ ಕುರಿತು ತಮ್ಮ ಬೆಂಬಲಿಗರೊಂದಿಗೆ ಸಭೆ ನಡೆಸಿದ್ದಾರೆ. ಚಿತ್ರದುರ್ಗದ ತಮ್ಮ ನಿವಾಸದ ಬಳಿ ಸಭೆ ನಡೆಸಿದ ಎಂ.ಚಂದ್ರಪ್ಪ, ಸಭೆಯಲ್ಲಿ ಕೇಕ್ ಕತ್ತರಿಸಿ ಬಿಎಸ್ ಯಡಯೂರಪ್ಪ ಬರ್ತಡೇ ಆಚರಣೆ ಮಾಡಿದ್ದಾರೆ. ಬಿಎಸ್ ವೈ ಬರ್ತಡೇ ನೆಪದಲ್ಲಿ ಈ ಸಭೆ ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ. ಕೆಲ […]

Advertisement

Wordpress Social Share Plugin powered by Ultimatelysocial