ಭಾರತೀಯ ಸೇನೆಯ ವೈದ್ಯಕೀಯ ವಿಭಾಗದಲ್ಲಿ ಲ್ಯಾಬ್ ಟೆಕ್ನಿಷಿಯನ್ ಆಗಿ ಕೆಲಸ ಮಾಡುತ್ತಿರುವ ಯೋಧರೊಬ್ಬರ ಮೇಲೆ ಕಿರಾತಕರು ಹಲ್ಲೆ ನಡೆಸಿ ಚಿನ್ನದ ಸರ ಕಿತ್ತುಕೊಂಡು ಹೋಗಿರುವ ಘಟನೆ ಧಾರವಾಡ ತಾಲೂಕಿನ ಮರೇವಾಡ ಗ್ರಾಮದ ಮಹಾದ್ವಾರದ ಬಳಿ ನಡೆದಿದೆ.ಧಾರವಾಡ ತಾಲೂಕಿನ ಹೆಬ್ಬಳ್ಳಿ ಗ್ರಾಮದ ನಾಗರಾಜ ಹೆಬ್ಬಾಳ ಎಂಬುವವರ ಮೇಲೆಯೇ ಕಿರಾತಕರು ಹಲ್ಲೆ ನಡೆಸಿದ್ದಾರೆ. ಯೋಧ ನಾಗರಾಜ ಅವರು ತಮ್ಮ ಪತ್ನಿ ಹಾಗೂ ಮಕ್ಕಳನ್ನು ಕರೆದುಕೊಂಡು ಕಾರಿನಲ್ಲಿ ಹೊರಟಿದ್ದ ವೇಳೆ ಮುಂದೆ ಹೋಗುತ್ತಿದ್ದ ವಾಹನಕ್ಕೆ ಹಾರ್ನ್ ಹಾಕಿದ್ದಾರೆ. ಇದೇ ವಿಷಯ ಮುಂದಿಟ್ಟುಕೊಂಡು ಏಳೆಂಟು ಜನ ಅಲ್ಲಿಗೆ ಬಂದು ಹಾರ್ನ್ ಏಕೆ ಹಾಕುತ್ತಿದ್ದೀಯಾ ಎಂದು ನಾಗರಾಜ ಅವರ ಮೇಲೆ ಕೈಗೆ ಸಿಕ್ಕ ವಸ್ತುಗಳಿಂದ ಹಲ್ಲೆ ನಡೆಸಿದ್ದಾರೆ. ಅಲ್ಲದೇ ಅವರ ಕೊರಳಲ್ಲಿದ್ದ 20 ಗ್ರಾಂ ತೂಕದ ಚಿನ್ನದ ಸರ ಕಿತ್ತುಕೊಂಡು ಹೋಗಿದ್ದಾರೆ ಎಂದು ಧಾರವಾಡ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಎಫ್ಐಆರ್ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.speed.newskannada