ಗುಂಡಿಕ್ಕಿ ಉಗ್ರನ ಹತ್ಯೆ.

 

ಪುಲ್ವಾಮಾದಲ್ಲಿ ಉಗ್ರರು ದಾಳಿ ನಡೆಸಿ ಕಾಶ್ಮೀರಿ ಪಂಡಿತರೊಬ್ಬರನ್ನು ಹತ್ಯೆ ಮಾಡಿದ ಬೆನ್ನಲ್ಲೇ ಕಾರ್ಯಾಚರಣೆ ಕೈಗೊಂಡ ಭಾರತೀಯ ಸೇನೆಯ ಭದ್ರತಾ ಪಡೆಗಳು ಇಂದು ಮುಂಜಾನೆ ಅವಂತಿಪೋರಾ ಪ್ರದೇಶದಲ್ಲಿ ನಡೆಸಿದ ಎನ್‌ಕೌಂಟರ್‌ನಲ್ಲಿ ಓರ್ವ ಭಯೋತ್ಪಾದಕನನ್ನು ಎನ್ ಕೌಂಟರ್ ಮಾಡಿದ್ದಾರೆ.ಪುಲ್ವಾಮಾದ ಪಡ್ಗಂಪುರ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆಯಲ್ಲಿ ಗುಂಡಿನ ಚಕಮಕಿ ನಡೆದಿದ್ದು, ಇಬ್ಬರು ಭದ್ರತಾ ಪಡೆ ಸಿಬ್ಬಂದಿ ಗಾಯಗೊಂಡಿದ್ದಾರೆ. ಓರ್ವ ಭಯೋತ್ಪಾದಕನನ್ನು ಭಾರತೀಯ ಸೇನೆ ಇಂದು ಬೆಳಿಗ್ಗೆ ಎನ್?ಕೌಂಟರ್ ಮಾಡಿದೆ.ಆದರೆ ಉಗ್ರನ , ಮೃತದೇಹ ಇನ್ನೂ ಪತ್ತೆಯಾಗಿಲ್ಲ. ಕಾಶ್ಮೀರ ಪೊಲೀಸರು ಹಾಗೂ ಭದ್ರತಾ ಪಡೆಗಳು ನಡೆಸಿದ ಜಂಟಿ ಕಾರ್ಯಾಚರಣೆ ಇದಾಗಿದೆ. ಇದೇ ಸ್ಥಳದಲ್ಲಿ ಕಾರ್ಯಾಚರಣೆಯನ್ನು ಮುಂದುವರೆಸಲಾಗಿದೆ ಎಂದು ಅಧಿಕಾರಿಯೊಬ್ಬರು ಮಾಹಿತಿ ಕೊಟ್ಟಿದ್ದಾರೆ. ಕಳೆದ ಫೆ.೨೬ ಮುಂಜಾನೆ ಕಾಶ್ಮೀರಿ ಪಂಡಿತ್ (ಸಂಜಯ್ ಶರ್ಮಾ) ಪುಲ್ವಾಮಾ ಜಿಲ್ಲೆಯ ಸ್ಥಳೀಯ ಮಾರುಕಟ್ಟೆಗೆ ಹೋಗುತ್ತಿದ್ದಾಗ ಅವರ ಮೇಲೆ ಗುಂಡಿನ ದಾಳಿ ನಡೆಸಲಾಗಿತ್ತು, ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದರು.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ದೇಹದ ತೂಕ ಹೆಚ್ಚಿರುವುದಕ್ಕೆ ಆಸ್ಕರ್ ವೇದಿಕೆಯಲ್ಲಿ ಹಾಡುವ ಆಫರ್ ಕಳೆದುಕೊಂಡ್ರಾ ಕೀರವಾಣಿ?

Wed Mar 1 , 2023
ಮಾರ್ಚ್​ 12ರಂದು ಲಾಸ್​ ಏಂಜಲೀಸ್​ನಲ್ಲಿ ಆಸ್ಕರ್​ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ. ಹಾಲಿವುಡ್​ನ ಅನೇಕ ದಿಗ್ಗಜರು ಈ ಕಾರ್ಯಕ್ರಮದಲ್ಲಿ ಭಾಗಿ ಆಗಲಿದ್ದಾರೆ. ಎಂ.ಎಂ. ಕೀರವಾಣಿಅವರು ‘ಆರ್​ಆರ್​ಆರ್​’ ಸಿನಿಮಾಗೆ ಸಂಗೀತ ಸಂಯೋಜನೆ ಮಾಡಿ ದೊಡ್ಡ ಮಟ್ಟದ ಜನಪ್ರಿಯತೆ ಪಡೆದಿದ್ದಾರೆ. ಈ ಚಿತ್ರದ ‘ನಾಟು ನಾಟು..’ ಹಾಡು  ಆಸ್ಕರ್ ರೇಸ್​ನಲ್ಲಿ ಇರುವುದರಿಂದ ಅವರ ಖ್ಯಾತಿ ವಿಶ್ವ ಮಟ್ಟಕ್ಕೆ ಹಬ್ಬಿದೆ. ಈಗಅವರು ಆಸ್ಕರ್ ವೇದಿಕೆ ಮೇಲೆ ಹಾಡುವ ಆಫರ್ ಕಳೆದುಕೊಂಡಿದ್ದಾರೆ. ಇದಕ್ಕೆ ಅವರ ದೇಹದ ತೂಕ […]

Advertisement

Wordpress Social Share Plugin powered by Ultimatelysocial