ಸಹೋದರನ ಕೌಟುಂಬಿಕ ಕಲಹದ ಕಾರಣಕ್ಕೆ ಮನನೊಂದ ಮಹಿಳೆಯೊಬ್ಬರು ಮಗನನ್ನು ನೇಣು ಹಾಕಿ ಕೊಂದು ನಂತರ ತಾವೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಹೊಸಗುಡ್ಡದಹಳ್ಳಿಯಲ್ಲಿ ನಡೆದಿದೆ.ಹೊಸಗುಡ್ಡದಹಳ್ಳಿ ನಿವಾಸಿ ಶಿವಲಿಂಗೇಗೌಡ ಎಂಬುವರ ಪತ್ನಿ ಲಕ್ಷ್ಮಮ್ಮ (48) ಮತ್ತು ಮಗ ಮದನ್ (13) ಮೃತಪಟ್ಟವರು. ಶಿವಲಿಂಗೇಗೌಡ, ಹೋಟೆಲ್ ಇಟ್ಟುಕೊಂಡಿದ್ದಾರೆ. ಲಕ್ಷ್ಮಮ್ಮ ಗೃಹಿಣಿಯಾಗಿದ್ದರು. ಮದನ್, ವಿಜಯನಗರದ ಖಾಸಗಿ ಶಾಲೆಯಲ್ಲಿ 6ನೇ ತರಗತಿ ಓದುತ್ತಿದ್ದಲಕ್ಷ್ಮಮ್ಮ ಅವರ ತಮ್ಮ ಸಿದ್ದೇಗೌಡ ಮೂರ್ನಾಲ್ಕು ವರ್ಷಗಳ ಹಿಂದೆ ರಂಜಿತಾ ಎಂಬ ಯುವತಿಯನ್ನು ವಿವಾಹವಾಗಿದ್ದರು. ಶಿವಲಿಂಗೇಗೌಡ ದಂಪತಿಯೇ ಮುಂದೆ ನಿಂತು ಮದುವೆ ಮಾಡಿಸಿದ್ದರು. ಆದರೆ, ಸಿದ್ದೇಗೌಡ ಮತ್ತು ರಂಜಿತಾ ನಡುವೆ ಆಗಾಗ್ಗೆ ಜಗಳವಾಗುತ್ತಿತ್ತು. ಕೌಟುಂಬಿಕ ಕಲಹದ ಕಾರಣಕ್ಕೆ ಪತಿಯ ಮನೆ ತೊರೆದಿದ್ದ ರಂಜಿತಾ, ತವರು ಮನೆಗೆ ಹೋಗಿ ನೆಲೆಸಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ ಲಕ್ಷ್ಮಮ್ಮ ದಂಪತಿಯ ಕುಟುಂಬದಲ್ಲಿ ಯಾವುದೇ ಸಮಸ್ಯೆ ಇರಲಿಲ್ಲ. ರಂಜಿತಾ, ಪತಿ ಸಿದ್ದೇಗೌಡ ಹಾಗೂ ಲಕ್ಷ್ಮಮ್ಮ ದಂಪತಿಯ ವಿರುದ್ಧ ವರದಕ್ಷಿಣೆ ಕಿರುಕುಳದ ಆರೋಪ ಹೊರಿಸಿ ಮಂಡ್ಯ ಜಿಲ್ಲೆಯ ಕೆರಗೋಡು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಇದರಿಂದ ಮನನೊಂದಿದ್ದ ಲಕ್ಷ್ಮಮ್ಮ ಮಗನನ್ನು ಕೊಂದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಘಟನಾ ಸಂದರ್ಭದಲ್ಲಿ ಶಿವಲಿಂಗೇಗೌಡ ಅವರು ಮನೆಯಲ್ಲಿ ಇರಲಿಲ್ಲ ಎಂದು ಪೊಲೀಸರು ಹೇಳಿದ್ದಾರೆ.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.speed.newskannada