ಬೆಂಗಳೂರು : ನಾಲ್ವರು ಆತ್ಮಹತ್ಯೆ ಮಾಡಿಕೊಂಡ ಮನೆಯಲ್ಲಿ ಬೆಳಕು ಕಂಡು ಸ್ಥಳೀಯ ನಿವಾಸಿಗಳು ಭಯಗೊಂಡ ಕಿರುಚಿದ ಘಟನೆ ಬೆಂಗಳೂರಿನ ಬ್ಯಾಡರಹಳ್ಳಿ ಯಲ್ಲಿ ನಡೆದಿದೆ.ಬ್ಯಾಡರಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ಈ ನಿವಾಸದಲ್ಲಿ ನಾಲ್ವರು ಆತ್ಮಹತ್ಯೆ ಮಾಡಿಕೊಂಡಿದ್ದರು.ಪರಿಣಾಮ ಸದ್ಯ ಮನೆ ಖಾಲಿ ಇದೆ. ಕಳೆದ ನಾಲ್ಕು ತಿಂಗಳಿನಿಂದ ಮನೆಯ ವಿದ್ಯುತ್ ಸಂಪರ್ಕ ಸಹ ಕಡಿತಗೊಳಿಸಲಾಗಿದೆ. ವಿದ್ಯುತ್ ಕಡಿತವಾಗಿದ್ದರಿಂದ ದೆವ್ವದ ಮನೆ ಎಂದೇ ಬಿಂಬಿತವಾಗಿತ್ತು. ಆದ್ರೆ ನಿನ್ನೆ ಮನೆಯಲ್ಲಿ ಬೆಳಕು ಕಂಡ ಸ್ಥಳೀಯರು ಕುಟುಂಬಸ್ಥರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕಾಗಮಿಸಿದ ಶಂಕರ್ ಎಂಬವರು ಸ್ಥಳೀಯರ ಜೊತೆ ಮನೆಯೊಳಗೆ ಹೋಗಿದ್ದಾರೆ. ಜನರು ಒಳಗೆ ಬರುತ್ತಿದ್ದಂತೆ ಕಳ್ಳ ನೊಬ್ಬ ದೆವ್ವ ಎಂದು ಕಿರುಚಿಕೊಂಡು ಹೊರಗೆ ಬಂದಿದ್ದಾನೆ. ಕೂಡಲೇ ಸ್ಥಳೀಯರು ಕಳ್ಳನನ್ನು ಹಿಡಿದು ಥಳಿಸಿ ಪೊಲೀಸರ ವಶಕ್ಕೆ ನೀಡಿದ್ದಾರೆ.ಹಲವು ದಿನಗಳಿಂದ ಮನೆಗೆ ಬೀಗ ಹಾಕಿದ್ದರಿಂದ ಕಳ್ಳನೊಬ್ಬ ನುಗ್ಗಿದ್ದನು. ಕಳ್ಳ ಟಾರ್ಚ್ ಹಿಡಿದು ಒಳಗೆ ಓಡಾಡುತ್ತಿರೋದರಿಂದ ಬೆಳಕು ಕಂಡು ಸ್ಥಳೀಯರು ಬೆಚ್ಚಿ ಬಿದ್ದಿದ್ದರು. ಜನರು ಒಳಗೆ ಹೋಗುತ್ತಿದ್ದಂತೆ ಕಳ್ಳ ದೆವ್ವ ಎಂದು ಕಿರುಚಿ ತಪ್ಪಿಸಿಕೊಳ್ಳಲು ಮುಂದಾಗಿದ್ದನು.ಕಳ್ಳನನ್ನು ಭರತ್ ಕುಮಾರ್ ಎಂದು ಗುರುತಿಸಲಾಗಿದೆ. ಜನರು ಈ ಕಳ್ಳನನ್ನೇ ದೆವ್ವ ಎಂದು ತಿಳಿದುಕೊಂಡಿದ್ದರು. ಈ ಸಂಬಂಧ ಬ್ಯಾಡರಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.speed.newskannada