ಮಾರ್ಚ್ 4 ರಿಂದ ಬಜೆಟ್ ಅಧಿವೇಶನ (Budget Session 2022) ಆರಂಭವಾಗುತ್ತಿರುವ ಹಿನ್ನೆಲೆ ವಿಧಾನಸೌಧದ (Vidhanasoudha) ಸುತ್ತಲಿನ 2 ಕಿ.ಮೀ. ವ್ಯಾಪ್ತಿಯಲ್ಲಿನ ಪ್ರದೇಶದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ (Kama Pant) ಆದೇಶಿಸಿದ್ದಾರೆ.
ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಕಮಲ್ ಪಂತ್ ಆದೇಶ ಹೊರಡಿಸಿದ್ದಾರೆ. ಬಜೆಟ್ ಅಧಿವೇಶನದ ಸಮಯದಲ್ಲಿ ವಿಪಕ್ಷಗಳು, ವಿವಿಧ ಸಂಘಟನೆಗಳು, ರಾಜಕೀಯ ಪಕ್ಷಗಳು ಪ್ರತಿಭಟನೆ (Protest) ಕೈಗೊಳ್ಳುವ ಸಾಧ್ಯತೆಗೊಳಿರುತ್ತವೆ.ಆದ್ದರಿಂದ ಅಧಿವೇಶನದ ಕಾರ್ಯಕಲಾಪಗಳಿಗೆ ತೊಂದರೆ ಆಗದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ. ಅಧಿವೇಶನ ಆರಂಭವಾಗುವ ದಿನ ಬೆಳಗ್ಗೆ 6 ರಿಂದ ಮಧ್ಯರಾತ್ರಿ12 ಗಂಟೆವರೆಗೆ ಈ ನಿಷೇಧಾಜ್ಞೆ ಇರಲಿದೆ.
ನಿಷೇಧಾಜ್ಞೆ ಜಾರಿಯಾಗುವ ಪ್ರದೇಶದಲ್ಲಿ ಐದು ಅಥವಾ ಐದಕ್ಕಿಂತ ಹೆಚ್ಚಿನ ಜನರು ಗುಂಪು ಸೇರುವಂತಿಲ್ಲ. ಈ ಭಾಗದಲ್ಲಿ ಯಾವುದೇ ಸಭೆ, ಸಮಾರಂಭ, ಪ್ರತಿಭಟನೆ ನಡೆಸುವಂತಿಲ್ಲ ಎಂದು ಕಮಲ್ ಪಂತ್ ಹೇಳಿದ್ದಾರೆ.
ಮಾರ್ಚ್ 4ರಂದು ಕಾಂಗ್ರೆಸ್ ಶಾಸಕಾಂಗ ಸಭೆ
ಇನ್ನೂ ಬಜೆಟ್ ಅಧಿವೇಶನ ಹಿನ್ನೆಲೆ ಮಾರ್ಚ್ 4ರಂದು ಕಾಂಗ್ರೆಸ್ ಶಾಸಕಾಂಗ ಸಭೆಯನ್ನು ವಿಪಕ್ಷ ನಾಯಕ ಸಿದ್ದರಾಮಯ್ಯ ಕರೆದಿದ್ದಾರೆ. ಈ ಸಭೆ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ನಡೆಯಲಿದೆ.
ಕಳೆದ ವಾರ ಸಚಿವ ಕೆ.ಎಸ್.ಈಶ್ವರಪ್ಪ ಅವರ ವಿವಾದಾತ್ಮಕ ಹೇಳಿಕೆ ಖಂಡಿಸಿ ಕಾಂಗ್ರೆಸ್ ಅಹೋರಾತ್ರಿ ಧರಣಿ ನಡೆಸಿತ್ತು. ಈ ಹಿನ್ನೆಲೆ ಕಲಾಪವನ್ನು ಅನಿರ್ಧಿಷ್ಟಾವಧಿವರೆಗೆ ಮುಂದೂಡಲಾಗಿತ್ತು. ಈಶ್ವರಪ್ಪ ಅವರನ್ನು ಸಂಪುಟದಿಂದ ಕೈ ಬಿಡಬೇಕೇಂದು ಎಂದು ಕಾಂಗ್ರೆಸ್ ನಾಯಕರು ಒತ್ತಾಯಿಸಿದ್ದರು. ಆದ್ರೆ ಸಿಎಂ ಬಸವರಾಜ್ ಬೊಮ್ಮಾಯಿ ಸೇರಿದಂತೆ ಬಿಜೆಪಿ ನಾಯಕರು ಈಶ್ವರಪ್ಪ ಅವರ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದರು.
ಮತ್ತೆ ಪ್ರತಿಭಟನೆ ನಡೆಸುತ್ತಾ ಕಾಂಗ್ರೆಸ್?
ಈಗ ಬಜೆಟ್ ಅಧಿವೇಶನದಲ್ಲಿ ಕಾಂಗ್ರೆಸ್ ಮತ್ತೆ ಪ್ರತಿಭಟನೆ ನಡೆಸುತ್ತಾ ಅಥವಾ ಚರ್ಚೆಗೆ ಅವಕಾಶ ನೀಡುತ್ತಾ ಎಂಬುದರ ಬಗ್ಗೆ ಕುತೂಹಲ ಮೂಡಿದೆ. ಅಧಿವೇಶನದಲ್ಲಿ ಯಾವ ರೀತಿ ಪ್ರತಿಭಟಿಸಬೇಕು ಎಂಬುದರ ಬಗ್ಗೆ ಮಾರ್ಚ್ 4 ರಂದು ನಡೆಯುವ ಸಭೆಯಲ್ಲಿ ಕಾಂಗ್ರೆಸ್ ತೀರ್ಮಾನಿಸಲಿದೆ
ಮಾರ್ಚ್ 4ರಂದು ಕಾಂಗ್ರೆಸ್ ಶಾಸಕಾಂಗ ಸಭೆ
ಇನ್ನೂ ಬಜೆಟ್ ಅಧಿವೇಶನ ಹಿನ್ನೆಲೆ ಮಾರ್ಚ್ 4ರಂದು ಕಾಂಗ್ರೆಸ್ ಶಾಸಕಾಂಗ ಸಭೆಯನ್ನು ವಿಪಕ್ಷ ನಾಯಕ ಸಿದ್ದರಾಮಯ್ಯ ಕರೆದಿದ್ದಾರೆ. ಈ ಸಭೆ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ನಡೆಯಲಿದೆ.
ಕಳೆದ ವಾರ ಸಚಿವ ಕೆ.ಎಸ್.ಈಶ್ವರಪ್ಪ ಅವರ ವಿವಾದಾತ್ಮಕ ಹೇಳಿಕೆ ಖಂಡಿಸಿ ಕಾಂಗ್ರೆಸ್ ಅಹೋರಾತ್ರಿ ಧರಣಿ ನಡೆಸಿತ್ತು. ಈ ಹಿನ್ನೆಲೆ ಕಲಾಪವನ್ನು ಅನಿರ್ಧಿಷ್ಟಾವಧಿವರೆಗೆ ಮುಂದೂಡಲಾಗಿತ್ತು. ಈಶ್ವರಪ್ಪ ಅವರನ್ನು ಸಂಪುಟದಿಂದ ಕೈ ಬಿಡಬೇಕೇಂದು ಎಂದು ಕಾಂಗ್ರೆಸ್ ನಾಯಕರು ಒತ್ತಾಯಿಸಿದ್ದರು. ಆದ್ರೆ ಸಿಎಂ ಬಸವರಾಜ್ ಬೊಮ್ಮಾಯಿ ಸೇರಿದಂತೆ ಬಿಜೆಪಿ ನಾಯಕರು ಈಶ್ವರಪ್ಪ ಅವರ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದರು.
ಮತ್ತೆ ಪ್ರತಿಭಟನೆ ನಡೆಸುತ್ತಾ ಕಾಂಗ್ರೆಸ್?
ಈಗ ಬಜೆಟ್ ಅಧಿವೇಶನದಲ್ಲಿ ಕಾಂಗ್ರೆಸ್ ಮತ್ತೆ ಪ್ರತಿಭಟನೆ ನಡೆಸುತ್ತಾ ಅಥವಾ ಚರ್ಚೆಗೆ ಅವಕಾಶ ನೀಡುತ್ತಾ ಎಂಬುದರ ಬಗ್ಗೆ ಕುತೂಹಲ ಮೂಡಿದೆ. ಅಧಿವೇಶನದಲ್ಲಿ ಯಾವ ರೀತಿ ಪ್ರತಿಭಟಿಸಬೇಕು ಎಂಬುದರ ಬಗ್ಗೆ ಮಾರ್ಚ್ 4 ರಂದು ನಡೆಯುವ ಸಭೆಯಲ್ಲಿ ಕಾಂಗ್ರೆಸ್ ತೀರ್ಮಾನಿಸಲಿದೆ
JDSಗೆ ಮಾಜಿ ಶಾಸಕ ಪಿಳ್ಳ ಮುನಿಶಾಮಪ್ಪ ಗುಡ್ ಬೈ
ಮಾಜಿ ಶಾಸಕ ಪಿಳ್ಳ ಮುನಿಶಾಮಪ್ಪ ಜೆಡಿಎಸ್ ತೊರೆದು ಬಿಜೆಪಿ ಸೇರ್ಪಡೆಗೊಂಡಿದ್ದಾರೆ. ಸಿಎಂ ಬಸವರಾಜ್ ಬೊಮ್ಮಾಯಿ, ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹಾಗೂ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಸಮ್ಮುಖದಲ್ಲಿ ಪಿಳ್ಳಮುನಿಶಾಮಪ್ಪ ಪಕ್ಷ ಸೇರ್ಪಡೆಗೊಂಡಿದ್ದಾರೆ.ರಾಜ್ಯ ಬಿಜೆಪಿ ಕಚೇರಿಯಲ್ಲಿ ಪಿಳ್ಳ ಮುನಿಶಾಮಪ್ಪ ಸೇರಿದಂತೆ ಅವರ ಬೆಂಬಲಿಗರು ಸಹ ಕಮಲ ಬಾವುಟ ಹಿಡಿದರು. ಪಿಳ್ಳ ಮುನಿಶಾಮಪ್ಪ ಅವರಿಗೆ ಪಕ್ಷದ ಧ್ವಜ ನೀಡಿ ಪಕ್ಷಕ್ಕೆ ಬರಮಾಡಿಕೊಳ್ಳಲಾಯ್ತು. ಕಳೆದ ಚುನಾವಣೆಯಲ್ಲಿ ದೇವನಹಳ್ಳಿ ವಿಧಾನಸಭಾ ಕ್ಷೇತ್ರದಿಂದ ಜೆಡಿಎಸ್ ನಿಂದ ಆಯ್ಕೆಯಾಗಿದ್ದರು.
ಕಾಂಗ್ರೆಸ್ ಮೇಕೆದಾಟು ಪಾದಯಾತ್ರೆಯಲ್ಲಿ JDS ಶಾಸಕ ಪ್ರತ್ಯಕ್ಷ
ಎರಡನೇ ಹಂತದ ಕಾಂಗ್ರೆಸ್ ಮೇಕೆದಾಟು ಪಾದಯಾತ್ರೆ (Congress Mekedatu Padayatra) ಸ್ಥಳದಲ್ಲಿ ಜೆಡಿಎಸ್ ಶಾಸಕ ಗುಬ್ಬಿ ಶ್ರೀನಿವಾಸ್ (JDS MLA Gubbi Srinivas) ಪ್ರತ್ಯಕ್ಷವಾಗಿದ್ದರು. ಡಿ.ಕೆ.ಶಿವಕುಮಾರ್ ಜತೆಗೆ ಕಾಣಿಸಿಕೊಂಡಿದ್ದರು.
ಈ ಬಗ್ಗೆ ಪ್ರಶ್ನೆ ಮಾಡಿದಾಗ ಶ್ರೀನಿವಾಸ್ ಜತೆಗಿದ್ದ ಮಾಗಡಿ ಮಾಜಿ ಶಾಸಕ ಬಾಲಕೃಷ್ಣ ಮಾತನಾಡಿ ಇವತ್ತು ನನ್ನ ಹುಟ್ಟುಹಬ್ಬದ ಪ್ರಯುಕ್ತ ಶುಭಕೋರಲು ಬಂದಿದ್ದಾರೆ. ಕುಮಾರಣ್ಣನನ್ನ ನೋಡಲು ಬಿಡದಿ ತೋಟದ ಮನೆಗೆ ಹೋಗ್ತಿದ್ದರಂತೆ. ಹಾಗೇ ನನಗೆ ಶುಭಕೋರಲು ಬಂದಿದ್ದಾರೆ. ಕಾಂಗ್ರೆಸ್ ಸೇರ್ತಾರೆ ಎಂಬ ವಿಚಾರಕ್ಕೆ ಆ ರೀತಿ ಇಲ್ಲ ಎಂದರು ಬಾಲಕೃಷ್ಣ.
ಮಾಜಿ ಶಾಸಕ ಪಿಳ್ಳ ಮುನಿಶಾಮಪ್ಪ ಜೆಡಿಎಸ್ ತೊರೆದು ಬಿಜೆಪಿ ಸೇರ್ಪಡೆಗೊಂಡಿದ್ದಾರೆ. ಸಿಎಂ ಬಸವರಾಜ್ ಬೊಮ್ಮಾಯಿ, ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹಾಗೂ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಸಮ್ಮುಖದಲ್ಲಿ ಪಿಳ್ಳಮುನಿಶಾಮಪ್ಪ ಪಕ್ಷ ಸೇರ್ಪಡೆಗೊಂಡಿದ್ದಾರೆ.ರಾಜ್ಯ ಬಿಜೆಪಿ ಕಚೇರಿಯಲ್ಲಿ ಪಿಳ್ಳ ಮುನಿಶಾಮಪ್ಪ ಸೇರಿದಂತೆ ಅವರ ಬೆಂಬಲಿಗರು ಸಹ ಕಮಲ ಬಾವುಟ ಹಿಡಿದರು. ಪಿಳ್ಳ ಮುನಿಶಾಮಪ್ಪ ಅವರಿಗೆ ಪಕ್ಷದ ಧ್ವಜ ನೀಡಿ ಪಕ್ಷಕ್ಕೆ ಬರಮಾಡಿಕೊಳ್ಳಲಾಯ್ತು. ಕಳೆದ ಚುನಾವಣೆಯಲ್ಲಿ ದೇವನಹಳ್ಳಿ ವಿಧಾನಸಭಾ ಕ್ಷೇತ್ರದಿಂದ ಜೆಡಿಎಸ್ ನಿಂದ ಆಯ್ಕೆಯಾಗಿದ್ದರು.
ಕಾಂಗ್ರೆಸ್ ಮೇಕೆದಾಟು ಪಾದಯಾತ್ರೆಯಲ್ಲಿ JDS ಶಾಸಕ ಪ್ರತ್ಯಕ್ಷ
ಎರಡನೇ ಹಂತದ ಕಾಂಗ್ರೆಸ್ ಮೇಕೆದಾಟು ಪಾದಯಾತ್ರೆ (Congress Mekedatu Padayatra) ಸ್ಥಳದಲ್ಲಿ ಜೆಡಿಎಸ್ ಶಾಸಕ ಗುಬ್ಬಿ ಶ್ರೀನಿವಾಸ್ (JDS MLA Gubbi Srinivas) ಪ್ರತ್ಯಕ್ಷವಾಗಿದ್ದರು. ಡಿ.ಕೆ.ಶಿವಕುಮಾರ್ ಜತೆಗೆ ಕಾಣಿಸಿಕೊಂಡಿದ್ದರು.
ಈ ಬಗ್ಗೆ ಪ್ರಶ್ನೆ ಮಾಡಿದಾಗ ಶ್ರೀನಿವಾಸ್ ಜತೆಗಿದ್ದ ಮಾಗಡಿ ಮಾಜಿ ಶಾಸಕ ಬಾಲಕೃಷ್ಣ ಮಾತನಾಡಿ ಇವತ್ತು ನನ್ನ ಹುಟ್ಟುಹಬ್ಬದ ಪ್ರಯುಕ್ತ ಶುಭಕೋರಲು ಬಂದಿದ್ದಾರೆ. ಕುಮಾರಣ್ಣನನ್ನ ನೋಡಲು ಬಿಡದಿ ತೋಟದ ಮನೆಗೆ ಹೋಗ್ತಿದ್ದರಂತೆ. ಹಾಗೇ ನನಗೆ ಶುಭಕೋರಲು ಬಂದಿದ್ದಾರೆ. ಕಾಂಗ್ರೆಸ್ ಸೇರ್ತಾರೆ ಎಂಬ ವಿಚಾರಕ್ಕೆ ಆ ರೀತಿ ಇಲ್ಲ ಎಂದರು ಬಾಲಕೃಷ್ಣ.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://plಇay.google.com/store/apps/details?id=com.speed.newskannada
Please follow and like us: