ದೆಹಲಿಯ ದ್ವಾರಕಾ ಆಸ್ಪತ್ರೆ ಆವರಣದಲ್ಲೇ ವೈದ್ಯರ ಮೇಲೆ ದುಷ್ಕರ್ಮಿಗಳಿಂದ ಫೈರಿಂಗ್

ದೆಹಲಿ: 26 ವರ್ಷ ವಯಸ್ಸಿನ ವೈದ್ಯರ ಮೇಲೆ ಸೋಮವಾರ ರಾತ್ರಿ ಆಸ್ಪತ್ರೆಯ ಆವರಣದಲ್ಲಿಯೇ ಫೈರಿಂಗ್ ಮಾಡಲಾಗಿದೆ. ದೆಹಲಿಯ ದ್ವಾರಕಾದ ಆರ್‌ಟಿಆರ್‌ ಆಸ್ಪತ್ರೆಯ ನಿವಾಸಿ ವೈದ್ಯ ಹೇಮಂತ್‌ ಮೇಲೆ ದುಷ್ಕರ್ಮಿಗಳು ಗುಂಡು ಹಾರಿಸಿದ್ಧಾರೆ. ಪ್ರಕರಣ ಸಂಬಂಧ ಇನ್ನೂ ಯಾವುದೇ ಬಂಧನವಾಗಿಲ್ಲ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ.”ನಿವಾಸಿ ವೈದ್ಯರ ಮೇಲೆ ಗುಂಡು ಹಾರಿಸಿದ ಘಟನೆಯೊಂದು ಜೆಪಿ ಕಲನ್‌ನ ಆರ್‌ಟಿಆರ್‌ ಆಸ್ಪತ್ರೆಯಿಂದ ವರದಿಯಾಗಿದೆ. ಸಂತ್ರಸ್ತರು ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅವರ ಪರಿಸ್ಥಿತಿ ಸ್ಥಿರವಾಗಿದೆ.ಕೊಲೆಗೆ ಯತ್ನ ಮತ್ತು ಶಸ್ತ್ರ ಕಾಯಿದೆ ಅಡಿ ಪ್ರಕರಣ ದಾಖಲಿಸಲಾಗಿದ್ದು, ದುಷ್ಕರ್ಮಿಗಳನ್ನು ಸೆರೆ ಹಿಡಿಯಲು ತಂಡಗಳನ್ನು ರಚಿಸಲಾಗಿದೆ,” ಎಂದು ದೆಹಲಿ ಪೊಲೀಸರು ಟ್ವೀಟ್ ಮಾಡಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ನವದೆಹಲಿ: ಬುಧವಾರ ಬೆಳಗ್ಗೆ 8 ಗಂಟೆಗೆ ಮುಕ್ತಾಯಗೊಂಡ 24 ಗಂಟೆಗಳ ಅವಧಿಯಲ್ಲಿ ದೇಶದಲ್ಲಿ 71,365 ಹೊಸ ಸೋಂಕಿತರು ಪತ್ತೆಯಾಗಿದ್ದರೆ,

Wed Feb 9 , 2022
ನವದೆಹಲಿ: ಬುಧವಾರ ಬೆಳಗ್ಗೆ 8 ಗಂಟೆಗೆ ಮುಕ್ತಾಯಗೊಂಡ 24 ಗಂಟೆಗಳ ಅವಧಿಯಲ್ಲಿ ದೇಶದಲ್ಲಿ 71,365 ಹೊಸ ಸೋಂಕಿತರು ಪತ್ತೆಯಾಗಿದ್ದರೆ, 1,217 ಜನರು ಸೋಂಕಿಗೆ ಬಲಿಯಾಗಿದ್ದಾರೆ. ಇದರೊಂದಿಗೆ ಸತತ ಮೂರನೇ ದಿನವೂ ದೇಶದಲ್ಲಿ ಹೊಸ ಸೋಂಕಿನ ಪ್ರಮಾಣ ಲಕ್ಷಕ್ಕಿಂತ ಕೆಳಗೇ ದಾಖಲಾದಂತೆ ಆಗಿದೆ.ದೇಶದಲ್ಲಿಂದು 71,365 ಹೊಸ ಪ್ರಕರಣಗಳು ಪತ್ತೆಯಾಗುವುದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 4,24,10,976ಕ್ಕೆ ಏರಿಕೆಯಾಗಿದ್ದು, ಸಾವಿನ ಸಂಖ್ಯೆ 5,05,279ಕ್ಕೆ ತಲುಪಿದೆ.ದೇಶದಲ್ಲಿ ಸೋಂಕಿತರ ಸಂಖ್ಯೆ ಇಳಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ […]

Advertisement

Wordpress Social Share Plugin powered by Ultimatelysocial