ಪಿಂಚಣಿ ಮತ್ತಿತರ ಸೌಲಭ್ಯಗಳಿಗೆ ಸಂಬಂಧಿಸಿ 1,700 ಅರ್ಜಿಗಳು ವಿಲೇವಾರಿಯಾಗಿವೆ. ಜಿಲ್ಲಾ ಮಟ್ಟದ 85 ಅಧಿಕಾರಿಗಳು, ತಾಲ್ಲೂಕು ಮಟ್ಟದ 128 ಅಧಿಕಾರಿಗಳು, 1,500ರಷ್ಟು ಸಿಬ್ಬಂದಿ, ರಜಾ ದಿನಗಳಲ್ಲೂ ಕಾರ್ಯನಿರ್ವಹಿಸಿ, ಅಭಿಯಾನ ಯಶಸ್ಸಿಗೆ ಸಹಕರಿಸಿದ್ದಾರೆ’ ಎಂದರು.
‘ಆಡಳಿತಕ್ಕೆ ಹೊಸ ವೇಗ ನೀಡಬೇಕು, ಕೋವಿಡ್ ಸಂದರ್ಭದಲ್ಲಿ ಬಾಕಿಯಾಗಿದ್ದ ಕಡತಗಳು ಶೀಘ್ರ ವಿಲೇವಾರಿ ಆಗಬೇಕು, ಎಲ್ಲ ಕಡತಗಳ ಹಿಂದೆ ಜನರ ಜೀವನ ಇರುತ್ತದೆ. ಕಡತ ವಿಲೇವಾರಿ ವಿಳಂಬದಿಂದ ಜನರಿಗೆ ಸಮಸ್ಯೆ ಆಗಬಾರದು ಎಂದು ಈ ಅಭಿಯಾನ ನಡೆಸಲಾಗುತ್ತಿದೆ. ಫೆ.28ಕ್ಕೆ ಅಭಿಯಾನ ಕೊನೆಗೊಳ್ಳಲಿದ್ದು, ವಿಶೇಷ ಪ್ರಕರಣ ಹೊರತುಪಡಿಸಿ, ಉಳಿದ ಎಲ್ಲ ಕಡತಗಳನ್ನು ವಿಲೇವಾರಿ ಮಾಡಲು ಸೂಚಿಸಲಾಗಿದೆ’ ಎಂದು ಹೇಳಿದರು.
400 ಕೆ.ವಿ ವಿದ್ಯುತ್ ಸ್ಟೇಷನ್: ಹೆಚ್ಚುತ್ತಿರುವ ವಿದ್ಯುತ್ ಬಳಕೆ, ಸರಬರಾಜು ಮತ್ತು ಗುಣಮಟ್ಟದಲ್ಲಿ ವ್ಯತ್ಯಯ ಆಗದಂತೆ ನೋಡಿಕೊಳ್ಳುವ ಉದ್ದೇಶದಿಂ ಮಂಗಳೂರಿನಲ್ಲಿ 400 ಕೆ.ವಿ ವಿದ್ಯುತ್ ಸ್ಟೇಷನ್ ಆರಂಭಿಸಲು, ಜಾಗ ಗುರುತಿಸುವಂತೆ ಜಿಲ್ಲಾಡಳಿತಕ್ಕೆ ಸೂಚಿಸಲಾಗಿದೆ ಎಂದು ಇಂಧನ ಸಚಿವರೂ ಆಗಿರುವ ಸುನೀಲ್ ಕುಮಾರ್ ತಿಳಿಸಿದರು.
ರಾಣಿ ಅಬ್ಬಕ್ಕ ಹೆಸರು ಪ್ರಸ್ತಾವ: ನಗರದ ಲೇಡಿಗೋಶನ್ ಸರ್ಕಾರಿ ಆಸ್ಪತ್ರೆಗೆ ರಾಣಿ ಅಬ್ಬಕ್ಕ ಹೆಸರಿಡುವಂತೆ ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಲಾಗುವುದು. ಸ್ವಾತಂತ್ರ ಅಮೃತ ಮಹೋತ್ಸವದ ಸಂದರ್ಭದಲ್ಲಿ ಈ ಮರುನಾಮಕರಣ ಪ್ರಸ್ತುತವಾಗಿದೆ. ಅಲ್ಲದೇ, ಸ್ವಾತಂತ್ರ್ಯ ಹೋರಾಟಗಾರ್ತಿಯಾಗಿರುವ ರಾಣಿ ಅಬ್ಬಕ್ಕನ ಬಗ್ಗೆ ಹೊಸ ತಲೆಮಾರಿನ ಮಕ್ಕಳಿಗೆ ಪ್ರಜ್ಞೆ ಮೂಡಿಸಿದಂತಾಗುತ್ತದೆ ಎಂದು ಹೇಳಿದರು.
ಸಂಸದ ನಳಿನ್ಕುಮಾರ್ ಕಟೀಲ್, ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಇದ್ದರು.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://plಇay.google.com/store/apps/details?id=com.speed.newskannada