ಮಾಜಿ ಸಂಸದ ಎಚ್​.ಬಿ.ಪಾಟೀಲ ನಿಧನ: ಸ್ವಗ್ರಾಮದಲ್ಲಿ ಇಂದು ಅಂತ್ಯಕ್ರಿಯೆ

ಬಾಗಲಕೋಟೆ: ಮಾಜಿ ಸಂಸದ ಎಚ್​.ಬಿ. ಪಾಟೀಲ ಅವರು ನಿಧನರಾದರು. ಇವರಿಗೆ 80 ವರ್ಷ ವಯಸ್ಸಾಗಿತ್ತು. ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಪಾಟೀಲ ಅವರನ್ನ ಬಾಗಲಕೋಟೆ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಚಿಕಿತ್ಸೆ ಫಲಿಸದೆ ಮಂಗಳವಾರ ಕೊನೆಯುಸಿರೆಳೆದರು.ಇಂದು(ಬುಧವಾರ) ಮಧ್ಯಾಹ್ನ 12 ಗಂಟೆಗೆ ಸ್ವಗ್ರಾಮ ಬಾದಾಮಿ ತಾಲೂಕಿನ ರಡ್ಡೇರ ತಿಮ್ಮಾಪುರದಲ್ಲಿ ಅಂತ್ಯ ಸಂಸ್ಕಾರ ನೆರವೇರಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ. ಪಾಟೀಲ ಅವರಿಗೆ ಪತ್ನಿ, ಐವರು ಪುತ್ರಿಯರು, ಪುತ್ರ ಇದ್ದಾರೆ.1942ರ ಮಾರ್ಚ್​ 29ರಂದು ಜನಿಸಿದ ಎಚ್​.ಬಿ. ಪಾಟೀಲ ಅವರು ಸ್ವಗ್ರಾಮದಲ್ಲಿ ಪ್ರಾಥಮಿಕ, ರಾಮದುರ್ಗದಲ್ಲಿ ಮಾಧ್ಯಮಿಕ ಶಿಕ್ಷಣ ಪಡೆದು, ಧಾರವಾಡದ ಕರ್ನಾಟಕ ಕಾಲೇಜಿನಲ್ಲಿ ಬಿಎ, ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ರಾಜ್ಯಶಾಸ್ತ್ರ ಸ್ನಾತಕೋತ್ತರ(ಎಂಎ) ಪದವಿ ಪಡೆದಿದ್ದರು. ಶಿಕ್ಷಣ ನಂತರ ಕೃಷಿ ಕಾಯಕದಲ್ಲಿ ತೊಡಗಿಸಿಕೊಂಡಿದ್ದರು. ನಂತರ ಸ್ನೇಹಿತರ ಒತ್ತಾಯಕ್ಕೆ ಮಣಿದು ಬಾದಾಮಿ ತಾಲೂಕು ಬೋರ್ಡ್​ ಚುನಾವಣೆಗೆ ಸ್ಪರ್ಧಿಸಿ ಗೆಲುವು ಸಾಧಿಸುವ ಮೂಲಕ ರಾಜಕೀಯ ಪ್ರವೇಶಿಸಿದರು.ವಿವಿಧ ಸಂಘ ಸಂಸ್ಥೆಗಳ ಅಧ್ಯಕ್ಷ, ಸದಸ್ಯರಾಗಿ ಸೇವೆ ಸಲ್ಲಿಸಿದ್ದರು. 1984ರ ಡಿಸೆಂಬರ್​ನಲ್ಲಿ ನಡೆದ ಸಾರ್ವತ್ರಿಕ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್​ ಅಭ್ಯಥಿರ್ಯಾಗಿ ಸ್ಪರ್ಧಿಸಿದ್ದ ಗೆಲುವು ಸಾಧಿಸಿದ್ದರು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಕೇಂದ್ರ ಸರ್ಕಾರದ ಬಜೆಟ್ ನಲ್ಲಿ ರೈತರಿಗೆ ಸಿಕ್ಕಿದ್ದೇನು?

Wed Feb 2 , 2022
ನವದೆಹಲಿ : ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ಇಂ ದು 2022-23 ನೇ ಸಾಲಿನ ಬಜೆಟ್  ಮಂಡಿಸಿದ್ದಾರೆ. ಬಜೆಟ್ ನಲ್ಲಿ ಈ ಬಾರಿ ಕೃಷಿ ವಲಯಕ್ಕೂ ಹೆಚ್ಚಿನ ಆದ್ಯತೆ ನೀಡಲಾಗಿದೆ.ಕೇಂದ್ರ ಬಜೆಟ್ ನಲ್ಲಿ ಕೃಷಿ ವಲಯಕ್ಕೆ ಸಿಕ್ಕಿದ್ದೇನು?ಕೃಷಿ ವಲಯಕ್ಕೆ ಡ್ರೋನ್​ಗಳ ಬಳಕೆಗೆ ಅನುಮತಿ  ಬೆಳೆ ದಾಖಲು, ಭೂ ದಾಖಲೆಗಳು, ಕೀಟನಾಶಕಗಳ ಸಿಂಪಡಣೆಗೆ ಕಿಸಾನ್ ಡ್ರೋನ್‌ಬೆಳೆ ದಾಖಲು, ಭೂ ದಾಖಲೆಗಳು, ಕೀಟನಾಶಕಗಳ ಸಿಂಪಡಣೆಗೆ ಕಿಸಾನ್ ಡ್ರೋನ್‌ಗೋಧಿ ಮತ್ತು ಖಾರೀಫ್​ ಉತ್ಪನ್ನ ಹೆಚ್ಚಳಕ್ಕೆ […]

Advertisement

Wordpress Social Share Plugin powered by Ultimatelysocial