ಬೆಂಗಳೂರು: ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಮೊಹಮ್ಮದ್ ನಲಪಾಡ್ ಅಧಿಕಾರ ವಹಿಸಿಕೊಂಡಿದ್ದು, ಯುವ ಕಾರ್ಯಕರ್ತರಿಗೆ ಎಚ್ಚರಿಕೆಯ ಸಂದೇಶವನ್ನು ರವಾನೆ ಮಾಡಿದ್ದಾರೆ. ಭಾರತೀಯ ಯುವ ಕಾಂಗ್ರೆಸ್ನ ಅಧ್ಯಕ್ಷ ಬಿ.ವಿ. ಶ್ರೀನಿವಾಸ್ ವಿರುದ್ಧ ಗಂಭೀರ ಆರೋಪ ಮಾಡಿ ಹೈಕಮಾಂಡ್ಗೆ ದೂರು ಕೊಟ್ಟಿರುವ ಕುರಿತಂತೆ ಪ್ರತಿಕ್ರಿಯೆ ನೀಡಿರೋ ಅವರು, ಕಂಪ್ಲೆಂಟ್ ಕೊಟ್ಟವರ ಪತ್ತೆಗೆ ತನಿಖಾ ತಂಡ ರಚನೆ ಮಾಡಿ ತನಿಖೆ ಮಾಡ್ತೀವಿ.ಬಿ.ವಿ ಶ್ರೀನಿವಾಸ್ ವಿರುದ್ಧ ಯಾರೇ ದೂರು ನೀಡಿದ್ದರೂ ಅವರ ವಿರುದ್ಧ ಕಠಿಣ ಕ್ರಮ ಖಂಡಿತ ಎಂದು ತಿಳಿಸಿದ್ದಾರೆ.ನಮ್ಮ ಪಕ್ಷದಲ್ಲಿ ಹೈಕಮಾಂಡ್ ನಿರ್ಧಾರವೇ ಅಂತಿಮ. ನಮಗೂ ರಕ್ಷಾ ರಾಮಯ್ಯ ಅವರಿಗೂ ಇಂತಹದ್ದೇ ನಿರ್ಧಾರ ಮಾಡಿದ್ದರು. ಅವರ ನಿರ್ಧಾರದ ಪರ ನಾವಿದ್ದೇವೆ. ಅವರು ಯಾಕೆ ಈ ನಿರ್ಧಾರ ಮಾಡಿದ್ದಾರೆ ಎಂದು ಮುಂದೇ ಅರ್ಥ ಆಗುತ್ತೆ. ಆದ್ದರಿಂದ ನಾವು ತಾಳ್ಮೆ ವಹಿಸುವುದು ಮುಖ್ಯವಾಗುತ್ತದೆ ಎಂದು ನಲಪಾಡ್ ಹೇಳಿಕೆ ನೀಡಿದ್ದಾರೆ.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.speed.newskannada