ನವದೆಹಲಿ: ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಬೆಂಗಾವಲು ಕಾರಿನ ಮೇಲೆ ಗುಂಡಿನ ದಾಳಿ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇಬ್ಬರು ಆರೋಪಿಗಳನ್ನು ಶುಕ್ರವಾರ ಬಂಧನಕ್ಕೊಳಪಡಿಸಿದ್ದಾರೆಂದು ತಿಳಿದುಬಂದಿದೆ.ಉತ್ತರ ಪ್ರದೇಶದ ಕಿಥೌರ್ನಲ್ಲಿ ಚುನಾವಣಾ ಪ್ರಚಾರ ಕಾರ್ಯಕ್ರಮದಲ್ಲಿ ಭಾಗಿಯಾಗಿ ದೆಹಲಿಗೆ ತೆರಳುತ್ತಿದ್ದ ವೇಳೆ ಓವೈಸಿ ಅವರ ಬೆಂಗಾವಲು ಕಾರಿನ ಮೇಲೆ ಗುಂಡಿನ ದಾಳಿ ನಡೆದಿತ್ತು.ಮೀರತ್ನಿಂದ ದೆಹಲಿಗೆ ತೆರಳುತ್ತಿದ್ದಾಗ ಛಜರ್ಸಿ ಟೋಲ್ ಪ್ಲಾಜಾ ಬಳಿ ಓವೈಸಿ ಕಾರಿನ ಮೇಲೆ 3-4 ಸುತ್ತು ಗುಂಡು ಹಾರಿಸಲಾಗಿತ್ತು. ಈ ವೇಳೆ ಕಾರಿನ ಟೈರ್ಗಳು ಪಂಕ್ಚರ್ ಆಗಿದ್ದವು.ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ತನಿಖೆ ಆರಂಭಿಸಿದ್ದು, ಘಟನೆ ಸಂಬಂಧ ಈಗಾಗಲೇ ಇಬ್ಬರು ಆರೋಪಿಯನ್ನ ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದು, ಉಳಿದವರ ಬಂಧನಕ್ಕೆ ಬಲೆ ಬೀಸಿದ್ದಾರೆ.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://plಇay.google.com/store/apps/details?id=com.speed.newskannada