ಹುಣಸೂರು: ಕಾಡಾನೆ ದಾಳಿಗೆ ರೈತ ಬಲಿ

ಹುಣಸೂರು: ನಾಗರಹೊಳೆ ರಾಷ್ಟ್ರೀಯ ಉದ್ಯಾನದಂಚಿನ ಗ್ರಾಮದಲ್ಲಿ ಕಾಡಾನೆ ದಾಳಿಗೆ ಸಿಲುಕಿ ರೈತರೊಬ್ಬರು ಸಾವನ್ನಪ್ಪಿರುವ ಘಟನೆ ತಾಲೂಕಿನ ಕೊಳವಿಗೆ ಗ್ರಾಮದಲ್ಲಿ ಬುಧವಾರ ರಾತ್ರಿ ನಡೆದಿದೆ.ಹುಣಸೂರು ತಾಲೂಕಿನ ಹನಗೋಡು ಹೋಬಳಿಯ ರಾಜೇಶ್ (50) ಸಾವನ್ನಪ್ಪಿದ ದು ರ್ದೈವಿ.ರಾಜೇಶ್ ಬುಧವಾರ ರಾತ್ರಿ ರಾಸುಗಳಿಗೆ ಮೇವು ಹಾಕಲು ಹುಲ್ಲು ತರಲು ಮನೆಯಿಂದ ಹೊರಬಂದು ಹುಲ್ಲಿನ ಮೆದೆಯತ್ತ ತೆರಳಿದ ವೇಳೆ ರಾಗಿ ಮೆದೆಬಳಿಯಲ್ಲಿ ಹುಲ್ಲು ಮೇಯುತ್ತಿದ್ದ ಸಲಗವನ್ನು ಕತ್ತಲಿನಲ್ಲಿ ಕಾಣಿಸದೆ ಹುಲ್ಲು ತಲೆ ಮೇಲೆ ಹೊತ್ತು ತರುತ್ತಿದ್ದ ರಾಜೇಶನನ್ನು ಕಂಡು ಒಮ್ಮೆಲೆ ಘೀಳಿಟ್ಟಿದೆ.ಹೆದರಿದ ರಾಜೇಶ ಅವರು ಹುಲ್ಲು ಬಿಸಾಡಿ ಹತ್ತಿರದ ಮರ ಹತ್ತಿ ಜೀವ ವುಳಿಸಿಕೊಳ್ಳಲು ಓಡಿ ಹೋಗಿ ಮರ ಹತ್ತುವ ವೇಳೆ ಸೊಂಡಿನಲಿನಿಂದ ಎಳೆದು ಬಿಸಾಡಿದ ರಭಸಕ್ಕೆ ತೀವ್ರಪೆಟ್ಟು ಬಿದ್ದು ರಾಜೇಶ್ ಸಾವನ್ನಪ್ಪಿದ್ದಾರೆ.ರಾಜೇಶನ ಚಿಕ್ಕಮ್ಮನ ತಿಥಿ ಕಾರ್ಯ ಗುರುವಾರ ನಡೆಯಬೇಕಿತ್ತು.ಮನೆ ಮಂದಿಯೆಲ್ಲಾ ತಯಾರಿಯಲ್ಲಿದ್ದರು. ಹೀಗಾಗಿ ರಾತ್ರಿ 9 ರ ವೇಳೆಗೆ ತಡವಾಗಿ ರಾಸುಗಳಿಗೆ ಹುಲ್ಲು ತರಲು ಹೋದ ವೇಳೆ ಘಟನೆ ನಡೆದಿದ್ದು. ಚಿಕ್ಕಮ್ಮನ ತಿಥಿಯಂದೇ ರಾಜೇಶ್ ಸಾವನ್ನಪ್ಪಿರುವುದು ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿದೆ. ವಿಷಯ ತಿಳಿದ ಅರಣ್ಯ ಇಲಾಖೆ ಸಿಬ್ಬಂದಿಗಳು ಪೊಲೀಸರು, ಸ್ಥಳಕ್ಕೆ ದೌಡಾಯಿಸಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ʻಮೊಟ್ಟೆʼ ತಿನ್ನೋದ್ರಿಂದ ಆರೋಗ್ಯಕರ ಲಾಭಕ್ಕಿಂತ ತೊಂದರೆಗಳೇ ಹೆಚ್ಚು!

Thu Feb 3 , 2022
ಕೆಎನ್‌ಎನ್‌ ಡಿಜಿಟಲ್‌ ಡೆಸ್ಕ್‌ : ಪ್ರತಿದಿನ ಮೊಟ್ಟೆಯನ್ನು ತಿನ್ನುವುದರಿಂದ ಅನೇಕ ಆರೋಗ್ಯಕರ ಪ್ರಯೋಜನಗಳಿವೆ ಎಂಬುದು ಎಲ್ಲರಿಗೂ ತಿಳಿದಿರುವ ವಿಚಾರ. ಮೊಟ್ಟೆ ತಿನ್ನುವುದರಿಂದ ದೇಹಕ್ಕೆ ಬೇಕಾದ ಪೋಷಕಾಂಶಗಳು ಸಿಗುತ್ತವೆ.ಮೊಟ್ಟೆ ತಿಂದರೆ ಮೂಳೆಗಳು ಗಟ್ಟಿಯಾಗುತ್ತವೆ ಎಂಬುದು ಗೊತ್ತಿರುವ ಸಂಗತಿ.ಆದರೆ, ಮೊಟ್ಟೆಗಳನ್ನು ಹೆಚ್ಚಿನ ಪ್ರಮಾಣದಲ್ಲಿ ತೆಗೆದುಕೊಂಡರೆ ಸಮಸ್ಯೆ ತಪ್ಪಿದ್ದಲ್ಲ.ಹೆಚ್ಚು ಮೊಟ್ಟೆಗಳನ್ನು ತಿನ್ನುವವರ ದೇಹದಲ್ಲಿ ಕೊಲೆಸ್ಟ್ರಾಲ್ ಮಟ್ಟವನ್ನು ಹೆಚ್ಚಿಸುವ ಸಾಧ್ಯತೆಯಿದೆ. ಹೆಚ್ಚು ಮೊಟ್ಟೆಗಳನ್ನು ತೆಗೆದುಕೊಳ್ಳುವವರು ಕಡಿಮೆ ದೈಹಿಕ ಚಟುವಟಿಕೆಯನ್ನು ಹೊಂದಿರುತ್ತಾರೆ ಎಂದು ವಿಜ್ಞಾನಿಗಳು ಕಂಡುಕೊಂಡಿದ್ದಾರೆ. ಕೆಲವು […]

Advertisement

Wordpress Social Share Plugin powered by Ultimatelysocial