‘ಇದು ಬರೀ ಸಿನಿಮಾ ಅಲ್ಲ, ಮ್ಯಾಜಿಕ್​’: ‘ಗಂಗೂಬಾಯಿ ಕಾಠಿಯಾವಾಡಿ’ ನೋಡಿದ ಸೆಲೆಬ್ರಿಟಿಗಳ ವಿಮರ್ಶೆ

ಬಾಲಿವುಡ್​ ಸೆಲೆಬ್ರಿಟಿಗಳಾದ ರಿತೇಶ್​ ದೇಶಮುಖ್​, ವಿಕ್ಕಿ ಕೌಶಲ್​, ಶಶಾಂತ್​ ಕೈತಾನ್​, ರಿದ್ಧಿಮಾ ಕಪೂರ್​ ಮುಂತಾದವರು ‘ಗಂಗೂಬಾಯಿ ಕಾಠಿಯಾವಾಡಿ’ ಸಿನಿಮಾ ವೀಕ್ಷಿಸಿದ್ದಾರೆ. ಎಲ್ಲರಿಗೂ ಈ ಚಿತ್ರ ಇಷ್ಟ ಆಗಿದೆ.ಖ್ಯಾತ ನಟಿ ಆಲಿಯಾ ಭಟ್​ ಅಭಿನಯದ ‘ಗಂಗೂಬಾಯಿ ಕಾಠಿಯಾವಾಡಿ’ (Gangubai Kathiawadi) ಸಿನಿಮಾ ಬಿಡುಗಡೆ ಆಗಿದೆ.ಫೆ.25ರಂದು ಅದ್ದೂರಿಯಾಗಿ ತೆರೆಕಂಡಿರುವ ಈ ಚಿತ್ರವನ್ನು ಬಾಲಿವುಡ್​ ಸೆಲೆಬ್ರಿಟಿಗಳು ಎರಡು ದಿನ ಮೊದಲೇ ಕಣ್ತುಂಬಿಕೊಂಡಿದ್ದಾರೆ. ಈ ಚಿತ್ರಕ್ಕೆ ಸಂಜಯ್​ ಲೀಲಾ ಬನ್ಸಾಲಿ ನಿರ್ದೇಶನ ಮಾಡಿದ್ದು, ಆಲಿಯಾ ಭಟ್​ (Alia Bhatt) ಅವರು ಮುಖ್ಯ ಭೂಮಿಕೆಯಲ್ಲಿ ಕಾಣಿಸಿಕೊಂಡಿದ್ದಾರೆ. ಹುಮಾ ಖುರೇಶಿ, ಅಜಯ್​ ದೇವಗನ್​, ವಿಜಯ್​ ರಾಝ್​ ಕೂಡ ಅಭಿನಯಿಸಿದ್ದಾರೆ. ಟ್ರೇಲರ್​ ಮತ್ತು ಹಾಡುಗಳ ಮೂಲಕ ಸದ್ದು ಮಾಡಿದ್ದ ‘ಗಂಗೂಬಾಯಿ ಕಾಠಿಯಾವಾಡಿ’ ಸಿನಿಮಾಗೆ ಚಿತ್ರಮಂದಿರದಲ್ಲಿ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ. ಈ ಸಿನಿಮಾ ಬಿಡುಗಡೆ ಆಗುವುದಕ್ಕೂ ಮುನ್ನವೇ ಸೆಲೆಬ್ರಿಟಿಗಳಿಗಾಗಿ ವಿಶೇಷ ಪ್ರದರ್ಶನ ಏರ್ಪಡಿಸಲಾಗಿತ್ತು. ಸಿನಿಮಾ ಕಣ್ತುಂಬಿಕೊಂಡ ಬಾಲಿವುಡ್​ ಸೆಲೆಬ್ರಿಟಿಗಳು ಮನಸಾರೆ ಹೊಗಳಿದ್ದಾರೆ. ಇದರಿಂದ ಚಿತ್ರತಂಡಕ್ಕೆ ದೊಡ್ಡ ಬಲ ಸಿಕ್ಕಂತಾಗಿದೆ. ಆಲಿಯಾ ನಟನೆ ಹೇಗಿದೆ? ನಿರ್ದೇಶಕ ಸಂಜಯ್​ ಲೀಲಾ ಬನ್ಸಾಲಿ (Sanjay Leela Bhansali) ಅವರು ಈ ಬಾರಿ ಏನು ಮೋಡಿ ಮಾಡಿದ್ದಾರೆ? ಈ ಕುರಿತು ಬಾಲಿವುಡ್​ ಸೆಲೆಬ್ರಿಟಿಗಳು ಮಾತನಾಡಿದ್ದಾರೆ. ರಿಲೀಸ್​ಗೂ ಮುನ್ನ ಹಲವು ವಿವಾದಗಳಿಗೆ ಕಾರಣವಾಗಿದ್ದ ಈ ಚಿತ್ರಕ್ಕೆ ಈಗ ಉತ್ತಮ ವಿಮರ್ಶೆ ಸಿಕ್ಕಿದೆ.ಬಾಲಿವುಡ್​ ಸೆಲೆಬ್ರಿಟಿಗಳಾದ ರಿತೇಶ್​ ದೇಶಮುಖ್​, ವಿಕ್ಕಿ ಕೌಶಲ್​, ಶಶಾಂತ್​ ಕೈತಾನ್​, ರಿದ್ಧಿಮಾ ಕಪೂರ್​ ಮುಂತಾದವರು ‘ಗಂಗೂಬಾಯಿ ಕಾಠಿಯಾವಾಡಿ’ ಸಿನಿಮಾ ವೀಕ್ಷಿಸಿದ್ದಾರೆ. ಎಲ್ಲರಿಗೂ ಈ ಚಿತ್ರ ಇಷ್ಟ ಆಗಿದೆ. ‘ಈ ಸಿನಿಮಾವನ್ನು ಕಟ್ಟಿಕೊಡುವಲ್ಲಿ ತೋರಿದ ಬುದ್ಧಿವಂತಿಕೆ ಕಂಡು ನಾನು ಬೆರಗಾದೆ. ಸಂಜಯ್​ ಲೀನಾ ಬನ್ಸಾಲಿ ಸರ್​.. ನೀವು ಮಾಸ್ಟರ್​! ಆಲಿಯಾ ಭಟ್​ ಬಗ್ಗೆ ಏನು ಹೇಳಬೇಕು ಎಂಬುದೇ ತಿಳಿಯುತ್ತಿಲ್ಲ. ಗಂಗೂಬಾಯಿ ಪಾತ್ರದಲ್ಲಿ ಆಲಿಯಾ ನಟನೆ ಅಮೇಜಿಂಗ್​. ನಿಮಗೆ ಹ್ಯಾಟ್ಸ್​ಆಫ್​. ದೊಡ್ಡ ಪರದೆಯ ಮ್ಯಾಜಿಕ್​ ಇದು. ಈ ಸಿನಿಮಾವನ್ನು ಯಾರೂ ಮಿಸ್​ ಮಾಡಿಕೊಳ್ಳಬೇಡಿ’ ಎಂದು ವಿಕ್ಕಿ ಕೌಶಲ್​ ಅವರು ತಮ್ಮ ವಿಮರ್ಶೆ ಹಂಚಿಕೊಂಡಿದ್ದಾರೆ.ಈ ಸಿನಿಮಾದ ವಿಶೇಷ ಪ್ರದರ್ಶನಕ್ಕೆ ಆಲಿಯಾ ಭಟ್​ ಪ್ರಿಯಕರ ರಣಬೀರ್​ ಕಪೂರ್​ ಬಂದಿರಲಿಲ್ಲ. ರಣಬೀರ್​ ಕಪೂರ್ ಅವರ ಸಹೋದರಿ ರಿದ್ಧಿಮಾ ಕಪೂರ್​ ಅವರು ಸಿನಿಮಾ ನೋಡಿ ಖುಷಿಪಟ್ಟಿದ್ದಾರೆ. ‘ಆಲಿಯಾ ಭಟ್​ ಮತ್ತು ಸಂಜಯ್​ ಲೀಲಾ ಬನ್ಸಾಲಿ ಅವರು ಇಬ್ಬರು ಲೆಜೆಂಡ್​ಗಳು. ಅವರಿಬ್ಬರು ಜೊತೆಯಾಗಿ ಈ ಮ್ಯಾಜಿಕ್​ ಅನ್ನು ಕಟ್ಟಿಕೊಟ್ಟಿದ್ದಾರೆ. ಎಂಥಾ ಫೆಂಟಾಸ್ಟಿಕ್​ ಸಿನಿಮಾ! ಆಲಿಯಾ ನಟನೆ ಅತ್ಯುತ್ಯಮವಾಗಿದೆ’ ಎಂದು ರಿದ್ಧಿಮಾ ಕಪೂರ್​ ಹೇಳಿದ್ದಾರೆ.ಖ್ಯಾತ ನಿರ್ದೇಶಕ ಶಶಾಂಕ್​ ಕೈತಾನ್​ ಅವರು ಆಲಿಯಾ ಭಟ್​ ಅಭಿನಯವನ್ನು ಕೊಂಡಾಡಿದ್ದಾರೆ. ಈ ಸಿನಿಮಾದಲ್ಲಿ ಬರುವ ಒಂದು ಫೇಮಸ್​ ಡೈಲಾಗ್​ ರೀತಿಯೇ ಅವರು ಆಲಿಯಾರನ್ನು ಹೊಗಳಿದ್ದಾರೆ. ‘ಶಕ್ತಿ, ಸಂಪತ್ತು, ಸದ್ಬುದ್ಧಿ ಮತ್ತು ಪ್ರತಿಭೆ ಈ ಹುಡುಗಿಯ ಬಳಿ ಇದೆ’ ಎಂದು ಅವರು ಹೇಳಿದ್ದಾರೆ.ನಟ ರಿತೇಶ್​ ದೇಶಮುಖ್​ ಅವರಿಗೂ ‘ಗಂಗೂಬಾಯಿ ಕಾಠಿಯಾವಾಡಿ’ ಸಿನಿಮಾ ತುಂಬ ಇಷ್ಟ ಆಗಿದೆ. ‘ಕಳೆದ ರಾತ್ರಿ ಈ ಸಿನಿಮಾವನ್ನು ನೋಡಿದೆ. ಇದೊಂದು ಮ್ಯಾಜಿಕಲ್​ ಅನುಭವ. ಸಿನಿಮಾ ಕಟ್ಟಿಕೊಡುವುದರಲ್ಲಿ ಸಂಜಯ್​ ಲೀಲಾ ಬನ್ಸಾಲಿ ಅವರು ನಿಜವಾದ ಮಾಸ್ಟರ್​. ಸಿನಿಮಾದ ಪ್ರತಿ ಫ್ರೇಮ್​ ಕೂಡ ಪರ್ಫೆಕ್ಟ್​ ಆಗಿದೆ. ಆಲಿಯಾ ಭಟ್​ ನೀವು ಬಂಗಾರ. ಗಂಗೂಬಾಯಿ ಪಾತ್ರದಲ್ಲಿ ನಿಮ್ಮ ನಟನೆ ಅದ್ಭುತ’ ಎಂದು ರಿತೇಶ್​ ದೇಶಮುಖ್​ ಟ್ವೀಟ್​ ಮಾಡಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ರಷ್ಯಾ ಉಕ್ರೇನ್ ಯುದ್ಧ ಭಾರತದ ಮೇಲೆ ಪರಿಣಾಮ ಬೀರಲಿದೆಯೇ?

Fri Feb 25 , 2022
ಭಾರತದ ಮೇಲೆ ರಷ್ಯಾ ಉಕ್ರೇನ್ ಯುದ್ಧದ ಪ್ರಭಾವ: ಫೆಬ್ರವರಿ 24, 2022 ರಂದು ರಷ್ಯಾ ನೆರೆಯ ದೇಶದಲ್ಲಿ ಮಿಲಿಟರಿ ಕಾರ್ಯಾಚರಣೆಯ ಘೋಷಣೆಯೊಂದಿಗೆ ಉಕ್ರೇನ್ ವಿರುದ್ಧ ಯುದ್ಧ ಘೋಷಿಸಿತು. ಜಗತ್ತು ಮಾರಣಾಂತಿಕ ಸಾಂಕ್ರಾಮಿಕ ರೋಗದೊಂದಿಗೆ ಹೋರಾಡುತ್ತಿರುವಾಗ, ರಷ್ಯಾದ ಇತ್ತೀಚಿನ ಕ್ರಮವು ಭಾರತ ಸೇರಿದಂತೆ ಪ್ರಪಂಚದಾದ್ಯಂತದ ವಿವಿಧ ದೇಶಗಳ ಚೇತರಿಸಿಕೊಳ್ಳುವ ಆರ್ಥಿಕತೆಗೆ ಹೆಚ್ಚಿನ ತೊಂದರೆಗಳನ್ನು ಸೇರಿಸುತ್ತದೆ. ಒಂದು ದಿನದಲ್ಲಿ ರಷ್ಯಾ ಉಕ್ರೇನ್ ಯುದ್ಧವು ಷೇರು ಮಾರುಕಟ್ಟೆಯಲ್ಲಿ ದೊಡ್ಡ ನಷ್ಟಕ್ಕೆ ಕಾರಣವಾಯಿತು, ಇದು ಫೆಬ್ರವರಿ […]

Advertisement

Wordpress Social Share Plugin powered by Ultimatelysocial