ಪಂಜಾಬ್ ಮುಂದಿನ ಸಿಎಂ ಅಭ್ಯರ್ಥಿ ಘೋಷಿಸಲಿರುವ ಕಾಂಗ್ರೆಸ್, ರಾಹುಲ್ ಗಾಂಧಿಯವರ ನಿರ್ಧಾರಕ್ಕೆ ಬದ್ಧ: ನವಜೋತ್ ಸಿಂಗ್

ಚಂಡೀಗಢ: ಪಂಜಾಬ್ ರಾಜ್ಯದ ಮುಖ್ಯಮಂತ್ರಿ ಅಭ್ಯರ್ಥಿ ಘೋಷಣೆಯ ವಿಚಾರದಲ್ಲಿ ಪ್ರತಿಯೊಬ್ಬರೂ ರಾಹುಲ್ ಗಾಂಧಿಯವರ ತೀರ್ಮಾನವನ್ನು ಬೆಂಬಲಿಸುತ್ತಾರೆ ಎಂದು ಪಕ್ಷದ ರಾಜ್ಯಾಧ್ಯಕ್ಷ ನವಜೋತ್ ಸಿಂಗ್ ಸಿಧು ಹೇಳಿದ್ದಾರೆ.ಮುಖ್ಯಮಂತ್ರಿ ಅಭ್ಯರ್ಥಿಯನ್ನು ಘೋಷಣೆ ಮಾಡದೆ ವಿಧಾನಸಭೆ ಚುನಾವಣೆಯಲ್ಲಿ ಸಾಧಿಸಿ ತೋರಿಸಲು ಸಾಧ್ಯವಿಲ್ಲ.ನಮ್ಮನ್ನು ಮುನ್ನಡೆಸುವ ರಾಹುಲ್ ಗಾಂಧಿಯವರಿಗೆ ಸ್ವಾಗತ, ಅವರು ಪಂಜಾಬ್ ಗೆ ಸ್ಪಷ್ಟತೆ ಕೊಡಲು ಬರುತ್ತಿದ್ದಾರೆ. ಅವರ ನಿರ್ಧಾರವನ್ನು ನಾವೆಲ್ಲರೂ ಸ್ವಾಗತಿಸುತ್ತೇವೆ ಎಂದು ಸಿಧು ಟ್ವೀಟ್ ಮಾಡಿದ್ದಾರೆ.ಇನ್ನು ನಿನ್ನೆ ಪ್ರತಿಕ್ರಿಯೆ ನೀಡಿದ್ದ ಸಿಧು, ಪಂಜಾಬ್ ನಲ್ಲಿ ದುರ್ಬಲ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಕಾಂಗ್ರೆಸ್ ನಾಯಕತ್ವ ಘೋಷಣೆ ಮಾಡುವ ಯೋಚನೆಯಲ್ಲಿದೆ ಎನಿಸುತ್ತಿದೆ, ಅವರ ತಾಳಕ್ಕೆ ತಕ್ಕಂತೆ ಕುಣಿಯುವ ಮುಖ್ಯಮಂತ್ರಿ ಅವರಿಗೆ ಬೇಕಾಗಿದೆ ಅನಿಸುತ್ತದೆ ಎಂದು ಹೇಳಿದ್ದರು.ಇಂದು ಲುಧಿಯಾನದಲ್ಲಿ ವರ್ಚುವಲ್ ರ್ಯಾಲಿಯಲ್ಲಿ ಪಂಜಾಬ್ ನ ಮುಂದಿನ ಮುಖ್ಯಮಂತ್ರಿ ಅಭ್ಯರ್ಥಿಯನ್ನು ರಾಹುಲ್ ಗಾಂಧಿಯವರು ಘೋಷಿಸಲಿದ್ದಾರೆ ಎಂದು ಕಾಂಗ್ರೆಸ್ ಪಂಜಾಬ್ ಮುಖ್ಯಸ್ಥ ಹರೀಶ್ ಚೌಧರಿ ಹೇಳಿದ್ದರು.ಪಂಜಾಬ್ ವಿಧಾನಸಭೆ ಚುನಾವಣೆ ಫೆಬ್ರವರಿ 20ರಂದು ನಡೆಯಲಿದ್ದು, ಮತ ಎಣಿಕೆ ಮಾರ್ಚ್ 10ರಂದು ನಡೆಯಲಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

`ಮರದ ಮೇಲೆ ತಮ್ಮ ವ್ಯಾಯಾಮದ ಒಂದು ನೋಟವನ್ನು ಹಂಚಿಕೊಂಡಿದ;ಸಿದ್ಧಾರ್ಥ್ ಮಲ್ಹೋತ್ರಾ

Sun Feb 6 , 2022
ನಟ ಸಿದ್ಧಾರ್ಥ್ ಮಲ್ಹೋತ್ರಾ ಎಲ್ಲಿ ಬೇಕಾದರೂ ವರ್ಕೌಟ್ ಮಾಡಬಹುದು ಮತ್ತು ಅವರ ಇತ್ತೀಚಿನ Instagram ಪೋಸ್ಟ್ ಸತ್ಯಕ್ಕೆ ಪುರಾವೆಯಾಗಿದೆ. ಶನಿವಾರ, ಸಿದ್ದಾರ್ಥ್ ಅವರು ಸಾಮಾಜಿಕ ಮಾಧ್ಯಮಕ್ಕೆ ಕರೆದೊಯ್ದರು ಮತ್ತು ಭೋಪಾಲ್‌ನ ಯೋಧಾ ಸೆಟ್‌ನಲ್ಲಿ ಮರದ ಮೇಲೆ ವರ್ಕೌಟ್ ಮಾಡುತ್ತಿರುವ ವೀಡಿಯೊವನ್ನು ಹಂಚಿಕೊಂಡಿದ್ದಾರೆ. ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ: https://play.google.com/store/apps/details?id=com.speed.newskannada Please follow and like us:

Advertisement

Wordpress Social Share Plugin powered by Ultimatelysocial