ಮೈಸೂರು: ಇಲ್ಲಿನ ಕರ್ನಾಟಕ ಪೊಲೀಸ್ ಅಕಾಡೆಮಿಯಲ್ಲಿ 45ನೇ ತಂಡದ ಪೊಲೀಸ್ ಸಬ್ ಇನ್ ಸ್ಪೆಕ್ಟರ್ ಪ್ರಶಿಕ್ಷಣಾರ್ಥಿಗಳ ನಿರ್ಗಮನ ಪಥ ಸಂಚಲನ ಬುಧವಾರ ನಡೆಯಿತು.ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ವಿವಿಧ ತುಕಡಿಗಳಿಂದ ಗೌರವ ವಂದನೆ ಸ್ವೀಕರಿಸಿದರು.ಒಟ್ಟು 228 ಮಂದಿ ಪ್ರಶಿಕ್ಷಣಾರ್ಥಿಗಳು ಒಂದು ವರ್ಷದ ತರಬೇತಿಯನ್ನು ಪಡೆದಿದ್ದಾರೆ. ಇವರಲ್ಲಿ 183 ಮಂದಿ ಪುರುಷರು, 45 ಮಹಿಳೆಯರು ಇದ್ದಾರೆ.ಶಾಸಕ ಎಲ್.ನಾಗೇಂದ್ರ, ಎಡಿಜಿಪಿ ಹರಿಶೇಖರನ್, ಅಕಾಡೆಮಿ ನಿರ್ದೇಶಕ ವಿಫುಲ್ ಕುಮಾರ್, ಉಪನಿರ್ದೇಶಕಿ ಧರಣೀದೇವಿ ಮಾಲಗತ್ತಿ ಇದ್ದರು.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.speed.newskannada