ಕಾಂಗ್ರೆಸ್ ಪ್ರಣಾಳಿಕೆಯ ಪ್ರಮುಖ ಅಂಶಗಳು ಇಲ್ಲಿವೆ…
*ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್ ಸರ್ಕಾರ ರಚನೆಯಾದ 10 ದಿನಗಳಲ್ಲಿ ರೈತರ ಸಾಲ ಮನ್ನಾ ಮಾಡಲಾಗುವುದು.
*ಭತ್ತ ಮತ್ತು ಗೋಧಿಯನ್ನು ಕ್ವಿಂಟಲ್ಗೆ ₹ 2500 ಹಾಗೂ ಕಬ್ಬನ್ನು ₹ 400ಕ್ಕೆ ಖರೀದಿಸಲಾಗುವುದು.
*ವಿದ್ಯುತ್ ದರವನ್ನು ಅರ್ಧದಷ್ಟು ಕಡಿಮೆ ಮಾಡಲಾಗುವುದು.
*ಸಾಂಕ್ರಾಮಿಕದ ಅವಧಿಯಲ್ಲಿ ಬಾಕಿ ಇರುವ ವಿದ್ಯುತ್ ಬಿಲ್ ಅನ್ನು ಮನ್ನಾ ಮಾಡಲಾಗುವುದು.
*ಸಾಂಕ್ರಾಮಿಕ ರೋಗದಿಂದ ಹೆಚ್ಚು ಹಾನಿಗೊಳಗಾದ ಕುಟುಂಬಗಳಿಗೆ ₹ 25,000 ನೀಡಲಾಗುವುದು.
*ಪೊಲೀಸ್, ಆರೋಗ್ಯ ಮತ್ತು ಶಿಕ್ಷಣ ಇಲಾಖೆ ಸೇರಿದಂತೆ ಸಾರ್ವಜನಿಕ ವಲಯಗಳಲ್ಲಿ ಖಾಲಿ ಇರುವ 12 ಲಕ್ಷ ಹುದ್ದೆಗಳನ್ನು ಭರ್ತಿ ಮಾಡಲಾಗುವುದು. ಜೊತೆಗೆ ಎಂಟು ಲಕ್ಷ ಹೊಸ ಉದ್ಯೋಗಗಳನ್ನು ಸೃಷ್ಟಿಸಲಾಗುವುದು.
*ಶಾಲೆಗಳಲ್ಲಿ ಅಡುಗೆ ತಯಾರಿಸುವ ವ್ಯಕ್ತಿಗೆ ₹ 5,000 ವೇತನ ನೀಡಲಾಗುವುದು.
*ಮಹಿಳಾ ಪೊಲೀಸರಿಗೆ ಹತ್ತಿರದ ಸ್ಥಳದಲ್ಲಿ ಪೋಸ್ಟಿಂಗ್ ಕೊಡಲಾಗುವುದು.
*ಮೃತಪಟ್ಟ ಕೋವಿಡ್ ಯೋಧರ ಕುಟುಂಬಗಳಿಗೆ ₹ 50 ಲಕ್ಷ ಪರಿಹಾರ ನೀಡಲಾಗುವುದು.
*ಅನುಭವ ಮತ್ತು ನಿಯಮಗಳ ಆಧಾರದ ಮೇಲೆ ಶಿಕ್ಷಕರು ಹಾಗೂ ಶಿಕ್ಷಾ ಮಿತ್ರರನ್ನು ಖಾಯಂಗೊಳಿಸಲಾಗುವುದು.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.speed.newskannadas