ಪಾಕಿಸ್ಥಾನದ ಸಿಂಧ್ ಪ್ರಾಂತ್ಯದಲ್ಲಿ ಹಿಂದೂ ಉದ್ಯಮಿಯನ್ನು ಗುಂಡಿಕ್ಕಿ ಹತ್ಯೆ!

ಇಸ್ಲಮಾಬಾದ್: ಹಿಂದೂ ಉದ್ಯಮಿಯೊಬ್ಬರನ್ನು ಅಪರಿಚಿತ ದುಷ್ಕರ್ಮಿಗಳು ಗುಂಡಿಕ್ಕಿ ಕೊಂದ ಘಟನೆ ಸೋಮವಾರ ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ ನಡೆದಿದೆ.ಸಿಂಧ್‌ ನ ಘೋಟ್ಕಿ ಜಿಲ್ಲೆಯ ದಹರ್ಕಿ ಟೌನ್‌ನಲ್ಲಿ ಸೋಮವಾರ ರಾತ್ರಿ ಈ ಘಟನೆ ನಡೆದಿದೆ.ಮೃತಪಟ್ಟವರನ್ನು ಸತಾನ್ ಲಾಲ್ ಎಂದು ಗುರುತಿಸಲಾಗಿದೆ.ಪಾಕಿಸ್ತಾನದಲ್ಲಿ ಅಲ್ಪಸಂಖ್ಯಾತ ಸಮುದಾಯಗಳ ಮೇಲಿನ ದೌರ್ಜನ್ಯದ ಮುಂದುವರಿದ ಘಟನೆ ಇದಾಗಿದೆ. ಜನವರಿ 4 ರಂದು, ಸಿಂಧ್ ಪ್ರಾಂತ್ಯದ ಅನಾಜ್ ಮಂಡಿಯಲ್ಲಿ ಹಿಂದೂ ಉದ್ಯಮಿ ಸುನೀಲ್ ಕುಮಾರ್ ಅವರನ್ನು ಅಪರಿಚಿತ ಜನರು ಗುಂಡಿಕ್ಕಿ ಕೊಂದಿದ್ದರು.ಜನವರಿ 30 ರಂದು, ಪಾಕಿಸ್ತಾನದ ವಾಯುವ್ಯ ಪೇಶಾವರ್ ನಗರದಲ್ಲಿ ಅಪರಿಚಿತ ಬಂದೂಕುಧಾರಿಗಳಿಂದ ಒಬ್ಬ ಕ್ರಿಶ್ಚಿಯನ್ ಪಾದ್ರಿಯನ್ನು ಗುಂಡಿಕ್ಕಿ ಕೊಂದಿದ್ದರು ಘಟನೆಯಲ್ಲಿ ಇನ್ನೊಬ್ಬರು ಗಾಯಗೊಂಡಿದ್ದರು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಸಾರಿಗೆ ನಿಗಮ ಸ್ವಾವಲಂಬನೆ: ಎರಡು ತಿಂಗಳಲ್ಲಿ ವರದಿ ನಿರೀಕ್ಷೆ

Thu Feb 3 , 2022
ಬೆಂಗಳೂರು: ರಾಜ್ಯ ರಸ್ತೆ ಸಾರಿಗೆ ನಿಗಮಗಳ ಆರ್ಥಿಕ ಸ್ವಾವಲಂಬನೆ ಮತ್ತು ಸಂಪನ್ಮೂಲ ಕ್ರೋಡೀಕರಣಕ್ಕೆ ಸಂಬಂಧಿಸಿ ಇನ್ನೆರಡು ತಿಂಗಳಲ್ಲಿ ವರದಿ ಸಲ್ಲಿಕೆ ಆಗಲಿದೆ.ಗೃಹ ಕಚೇರಿ “ಕೃಷ್ಣಾ’ದಲ್ಲಿ ಬುಧವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಜರಗಿದ ಸಭೆಯಲ್ಲಿ ಸಾರಿಗೆ ನಿಗಮಗಳ ಆರ್ಥಿಕ ಸ್ವಾವಲಂಬನೆಗೆ ನಿಯೋಜಿಸಿದ ಎಂ.ಆರ್‌. ಶ್ರೀನಿವಾಸ ಮೂರ್ತಿ ಸಮಿತಿಯು ಈ ವಿಷಯ ತಿಳಿಸಿದೆ.ನಿಗಮಗಳ ಆರ್ಥಿಕ ಸ್ಥಿತಿಗತಿ, ಬಸ್‌ಗಳ ಕಾರ್ಯಾಚರಣೆ ಸಹಿತ ಹಲವು ಪ್ರಕಾರದ ಮಾಹಿತಿ ಕ್ರೋಡೀಕರಿಸುವ ಕಾರ್ಯ ನಡೆದಿದೆ. ಅಲ್ಲದೆ, ಸಾರಿಗೆ […]

Advertisement

Wordpress Social Share Plugin powered by Ultimatelysocial