ಪಿಎಸ್ ಐ ನೇಮಕಾತಿಯ ಆಯ್ಕೆ ಪಟ್ಟಿ ರದ್ಧತಿಗೆ ವಂಚಿತ ಆಕಾಂಕ್ಷಿಗಳ ಆಗ್ರಹ

 

ಕಲಬುರಗಿ: ಇತ್ತೀಚೆಗೆ ಬಿಡುಗಡೆಯಾದ 545 ಪಿಎಸ್ ಐ ಹುದ್ದೆಗಳ ತಾತ್ಕಾಲಿಕ ಆಯ್ಕೆಯಲ್ಲಿ ಕಲ್ಯಾಣ ಕರ್ನಾಟಕ ಭಾಗದ ಅಭ್ಯರ್ಥಿಗಳಿಗೆ ಅನ್ಯಾಯವನ್ನು ಖಂಡಿಸಿ ನಗರದ ಜಿಲ್ಲಾಧಿಕಾರಿ ಕಚೇರಿ ಮುಂದೆ ನೂರಾರು ಆಕಾಂಕ್ಷಿಗಳು ಬೃಹತ್ ಪ್ರತಿಭಟನೆ ನಡೆಸಿದರು.ಕಲ್ಯಾಣ ಕರ್ನಾಟಕ ಭಾಗದ ಅಭ್ಯರ್ಥಿಗಳಿಗೆ 371 (ಜೆ) ಅಡಿ 2016ರಲ್ಲಿ ಹೊರಡಿಸಿದ ಸುತ್ತೋಲೆಯಂತೆ ಮೀಸಲಾತಿ ನೀಡಬೇಕಿತ್ತು. ಪಿಎಸ್ ಐ ಹುದ್ದೆಗಳ ಆಯ್ಕೆ ಪಟ್ಟಿಯಲ್ಲಿ ಹೆಚ್ಚು ಅಂಕ ಪಡೆದ ಅಭ್ಯರ್ಥಿಗಳನ್ನು ರಾಜ್ಯ ವ್ಯಾಪ್ತಿ ಪಟ್ಟಿಯಲ್ಲಿ ಪರಿಗಣಿಸಿ, ಉಳಿದ ಅಭ್ಯರ್ಥಿಗಳನ್ನು 371(ಜೆ) ಅಡಿ ಸೀಮಿತಗೊಳಿಸಿ ಪಟ್ಟಿ ಬಿಡುಗಡೆ ಮಾಡಬೇಕಿತ್ತು. ಆದರೆ, ಅತಿ ಹೆಚ್ಚು ಅಂಕ ಪಡೆದ ಕಲ್ಯಾಣ ಕರ್ನಾಟಕದ ಅಭ್ಯರ್ಥಿಗಳನ್ನು ಮೇರಿಟ್ ಆಧರಿಸಿ ರಾಜ್ಯ ಪಟ್ಟಿಯಲ್ಲಿ ಪ್ರಕಟಿಸದೇ, ಎಲ್ಲರನ್ನೂ 371 (ಜೆ) ಅಡಿಯೇ ಸೀಮಿತಗೊಳಿಸುವ ಮೂಲಕ ಅನ್ಯಾಯ ಮಾಡಲಾಗಿದೆ ಎಂದು ಪ್ರತಿಭಟನಾ ನಿರತ ಆಕಾಂಕ್ಷಿಗಳು ಆಕ್ರೋಶ ವ್ಯಕ್ತಪಡಿಸಿದರು.ಹೀಗಾಗಿ ಈಗಿನ ತಾತ್ಕಾಲಿಕ ಆಯ್ಕೆಯನ್ನು ರದ್ದು ಪಡಿಸಿ, ನಿಯಮದಂತೆ ಹೊಸ ಪಟ್ಟಿಯನ್ನು ಬಿಡುಗಡೆ ಮಾಡಬೇಕೆಂದು ಜಿಲ್ಲಾಧಿಕಾರಿಗಳ‌ ಮೂಲಕ ಗೃಹ ಸಚಿವರಿಗೆ ಮನವಿ ಪತ್ರ ಸಲ್ಲಿಸಿದರು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಸಲ್ಮಾನ್;56ರ ವಯಸ್ಸಿನಲ್ಲೂ ಜಿಮ್​ನಲ್ಲಿ ಬೆವರು ಹರಿಸುತ್ತಿರುವ ಫೋಟೋ .

Thu Feb 3 , 2022
  ಬಾಲಿವುಡ್ ತಾರೆ ಸಲ್ಮಾನ್ ಖಾನ್ ‘ಬಿಗ್ ಬಾಸ್ 15’ನ್ನು ಯಶಸ್ವಿಯಾಗಿ ನಡೆಸಿಕೊಟ್ಟಿದ್ದಾರೆ. ಇದೀಗ ನಟ ಮತ್ತೆ ಚಿತ್ರದ ಕೆಲಸಗಳಿಗೆ ಮರಳಲು ತಯಾರಾಗುತ್ತಿದ್ದಾರೆ. ಇದಕ್ಕೆ ಅವರ ಪೋಸ್ಟ್ ಒಂದು ಸಾಕ್ಷಿ ಒದಗಿಸಿದೆ.ಇತ್ತೀಚೆಗಷ್ಟೇ ಹುಟ್ಟುಹಬ್ಬ ಆಚರಿಸಿಕೊಂಡಿದ್ದ ಬಾಲಿವುಡ್  ನಟ ಸಲ್ಮಾನ್​ ಖಾನ್​ಗೆಈಗ 56ರ ಪ್ರಾಯ.ಆದರೆ ತರುಣರೂ ಹುಬ್ಬೇರಿಸುವಂತೆ ಮೈಕಟ್ಟನ್ನು ಅವರು ಕಾಪಿಟ್ಟುಕೊಂಡಿದ್ದಾರೆ. ಹುರಿಗೊಳಿಸಿದ ದೇಹ, ಮೈನವಿರೇಳಿಸುವ ಆಕ್ಷನ್ ದೃಶ್ಯಗಳು, ಮಾಸ್ ಡೈಲಾಗ್ಸ್.. ಇವೆಲ್ಲಾ ಸಲ್ಮಾನ್ ಚಿತ್ರಗಳಲ್ಲಿ ಮಾಮೂಲು. ಆದರೆ ಅಭಿಮಾನಿಗಳಿಗೆ ಸಲ್ಮಾನ್ […]

Advertisement

Wordpress Social Share Plugin powered by Ultimatelysocial