ಗ್ರಾಮೀಣ ಭಾಗದಲ್ಲಿ ಬಹಳಷ್ಟು ಯುವಕ ಯುವತಿಯರಿಗೆ ಕ್ರೀಡೆಗಳ ಮೇಲೆ ಆಸೆಯಿದ್ದು ಕೆಲವೊಂದಿಷ್ಟು ಸಮಸ್ಯೆಗಳಿಂದ ತಮ್ಮ ಪ್ರತಿಭೆಗಳನ್ನು ಗುರುತಿಸಿಕೊಳ್ಳಲಾಗಿರುವುದಿಲ್ಲ ಅಂತಹ ಗ್ರಾಮೀಣ ಭಾಗದ ಕ್ರೀಡಾಪಟುಗಳನ್ನು ಗುರುತಿಸುವ ಹಾಗೂ ಕ್ರೀಡೆಗಳಲ್ಲಿ ಗ್ರಾಮೀಣ ಭಾಗದ ಯುವಕರನ್ನು ಕ್ರೀಡೆಗಳಲ್ಲಿ ಭಾಗವಹಿಸಲು ಪ್ರೇರೇಪಿಸುವ ನಿಟ್ಟಿನಲ್ಲಿ ಸರ್ಕಾರದಿಂದ ಗ್ರಾಮೀಣ ಕ್ರೀಡಾಕೂಟ ಆಯೋಜನೆ ಮಾಡಲು ಗ್ರಾಮ ಪಂಚಾಯತಿಗಳಿಗೆ ಸೂಚನೆ ನೀಡಲಾಗಿದ್ದು ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲ್ಲೂಕಿನ ಜೆ ತಿಮ್ಮಸಂದ್ರ ಗ್ರಾಮ ಪಂಚಾಯತಿ ವ್ಯಾಪ್ತಿಯ ಆಲವಟ್ಟ ಗ್ರಾಮದ ಸರ್ಕಾರಿ ಶಾಲಾ ಆವರಣದಲ್ಲಿ ಗ್ರಾಮೀಣ ಕ್ರೀಡಾಕೂಟವನ್ನು ಆಯೋಜನೆ ಮಾಡಲಾಗಿದ್ದು ಗ್ರಾಮ ಪಂಚಾಯತಿ ವ್ಯಾಪ್ತಿಯ ಎಲ್ಲಾ ಗ್ರಾಮಗಳ ಕ್ರೀಡಾಪಟುಗಳು ಭಾಗವಹಿಸಿ ಕ್ರೀಡೆಗಳಲ್ಲಿ ಪಾಲ್ಗೊಳ್ಳುತ್ತಿದ್ದಾರೆ ಕ್ರೀಡಾಕೂಟಕ್ಕೆ ಸಂಬಂಧಿಸಿದಂತೆ ಮಾತನಾಡಿದಂತಹ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ವಿನೋಧ್ ರೆಡ್ಡಿ ಗ್ರಾಮೀಣ ಭಾಗದ ಯುವಕರಿಗೆ ಹಾಗೂ ಕ್ರೀಡಾಪಟುಗಳಿಗೆ ಸ್ಪೂರ್ತಿಯಾಗುವಂತೆ ಈ ಯೋಜನೆಯನ್ನು ಸರ್ಕಾರ ಜಾರಿಗೆ ತಂದಿದ್ದು ಗ್ರಾಮೀಣ ಭಾಗದ ಕ್ರೀಡಾಪಟುಗಳು ಭಾಗವಹಿಸಿ ಸದುಪಯೋಗಪಡಿಸಿಕೊಳ್ಳಬೇಕು ಮುಂದಿನ ದಿನಗಳಲ್ಲಿ ತಾಲ್ಲೂಕು ಮಟ್ಟದಲ್ಲಿಯೂ ಸಹ ಕ್ರೀಡೆಗಳು ನಡೆಯಲಿವೆ ಗ್ರಾಮೀಣ ಭಾಗದಿಂದ ಆಯ್ಕೆ ಮಾಡಿ ತಾಲೂಕು ಮಟ್ಟಕ್ಕೆ ಆಯ್ಕೆ ಮಾಡುತ್ತೇವೆ ಕ್ರೀಡೆಗಳಲ್ಲಿ ಭಾಗವಹಿಸುವುದರಿಂದ ಆರೋಗ್ಯಕ್ಕೂ ಒಳ್ಳೆಯದೆಂದು ತಿಳಿಸಿದರು.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/de….