ನಟ ನಿಖಿಲ್ ಕುಮಾರಸ್ವಾಮಿ ಹುಟ್ಟುಹಬ್ಬದಂದು ಹೊಸ ಸಿನಿಮಾ ಅನೌನ್ಸ್.

ಟ ನಿಖಿಲ್ ಕುಮಾರಸ್ವಾಮಿಗೆ ಇಂದು ಹುಟ್ಟುಹಬ್ಬದ ಸಂಭ್ರಮ. ಅಭಿಮಾನಿಗಳು ನೆಚ್ಚಿನ ನಟನಿಗೆ ಜನ್ಮದಿನದ ಶುಭಾಶಯಗಳನ್ನು ಕೋರುತ್ತಿದ್ದಾರೆ. ಸಿನಿಮಾ ಮತ್ತು ರಾಜಕೀಯ ಎರಡರಲ್ಲೂ ಸಕ್ರಿಯರಾಗಿದ್ದಾರೆ ನಿಖಿಲ್, ಈಗಾಗಲೇ ಜೆಡಿಎಸ್‌ ಪಕ್ಷದಲ್ಲಿ ಅವರು ಯುವ ಘಟಕದ ರಾಜ್ಯಾಧ್ಯಕ್ಷರಾಗಿದ್ದಾರೆ.

ಅದರ ಜೊತೆಗೆ ಸಿನಿಮಾರಂಗದಲ್ಲಿ ಅವರು ಈಗ ಹೊಸ ಸುದ್ದಿ ನೀಡಿದ್ದಾರೆ. ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಹೊಸ ಸಿನಿಮಾವನ್ನು ನಿಖಿಲ್ ಅನೌನ್ಸ್ ಮಾಡಿದ್ದಾರೆ.

‘ಟಗರು’ ಮತ್ತು ‘ಸಲಗ’ ಸಿನಿಮಾಗಳಿಂದ ನಿರ್ಮಾಪಕರಾಗಿ ಸಕ್ಸಸ್‌ಫುಲ್ ಆಗಿರುವವರು ಕೆ ಪಿ ಶ್ರೀಕಾಂತ್. ಇದೀಗ ಶ್ರೀಕಾಂತ್ ಮತ್ತು ಲಹರಿ ಸಂಸ್ಥೆಯ ಜಿ. ಮನೋಹರನ್ ಅವರು ನಿಖಿಲ್ ನಟನೆಯ ಈ ಹೊಸ ಸಿನಿಮಾವವನ್ನು ನಿರ್ಮಾಣ ಮಾಡಲಿದ್ದಾರೆ. ಈ ಸಿನಿಮಾಗೆ ಸಹ ನಿರ್ಮಾಪಕರಾಗಿ ನವೀನ್ ಮನೋಹರನ್‌, ಸುನಿಲ್ ಗೌಡ, ಚಂದ್ರು ಮನೋಹರನ್ ಹಣ ಹಾಕಲಿದ್ದಾರೆ. ಈ ಸಿನಿಮಾಗೆ ಕಾರ್ಯಕಾರಿ ನಿರ್ಮಾಪಕರಾಗಿ ಜಿ. ತುಳಸಿ ರಾಂ (ಲಹರಿ ವೇಲು), ಜಿ ರಮೇಶ್, ಜಿ ಆನಂದ್, ಚಂದ್ರು ಮನೋಹರನ್, ನಾಗೇಂದ್ರ ಕೆಲಸ ಮಾಡಲಿದ್ದಾರೆ. ಈಗಾಗಲೇ ಸಿನಿಮಾದ ಫಸ್ಟ್‌ ಲುಕ್ ಅನಾವರಣ ಮಾಡಲಾಗಿದೆ.

ಈ ಸಿನಿಮಾವನ್ನು ಹೊಸ ಪ್ರತಿಭೆ ಮನೋಹರ ಎಂಬುವವರು ನಿರ್ದೇಶನ ಮಾಡುತ್ತಿದ್ದಾರೆ. ಫಸ್ಟ್ ಲುಕ್ ಗಮನಿಸುತ್ತಿದ್ದರೆ, ಇದೊಂದು ಸ್ಪೋರ್ಟ್ಸ್ ಕುರಿತ ಸಿನಿಮಾ ಇರಬಹುದು ಎಂಬುದು ಮೇಲ್ನೋಟಕ್ಕೆ ಗೊತ್ತಾಗುತ್ತಿದೆ. ಈ ಸಿನಿಮಾದಲ್ಲಿ ಯಾರೆಲ್ಲ ನಟಿಸುತ್ತಿದ್ದಾರೆ? ಇದರ ನಾಯಕಿ ಯಾರು? ತಾಂತ್ರಿಕ ಬಳಗದಲ್ಲಿ ಯಾರೆಲ್ಲ ಕೆಲಸ ಮಾಡಲಿದ್ದಾರೆ ಎಂಬುದು ಇನ್ನೂ ಕೂಡ ಗೊತ್ತಾಗಿಲ್ಲ. ಶೂಟಿಂಗ್ ಯಾವಾಗ ಶುರುವಾಗಲಿದೆ ಎಂಬುದು ಕೂಡ ಇನ್ನಷ್ಟೇ ಗೊತ್ತಾಗಬೇಕಿದೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಜಮ್ಮು-ಕಾಶ್ಮೀರ ಉಗ್ರರ ದಾಳಿ ಇಳಿಕೆ.

Sun Jan 22 , 2023
ಜಮ್ಮು ಕಾಶ್ಮೀರದಲ್ಲಿ ಶಾಂತಿ, ಸ್ಥಿರತೆ ತರುವ ಹಾದಿಯ ಜೊತೆಗೆ ದೇಶದಲ್ಲಿ ಶಾಂತಿ ಕಾಪಾಡುವ ನಿಟ್ಟಿನಲ್ಲಿ ’ಭದ್ರತಾ ಪಡೆಗಳ ಕಾರ್ಯ ಶ್ಲಾಘನೀಯ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ಭದ್ರತಾ ಪಡೆಗಳ ಬಿಗಿಯಾದ ಕ್ರಮಗಳಿಂದಾಗಿ ಕಣಿವೆ ಪ್ರದೇಶ ಜಮ್ಮು ಕಾಶ್ಮೀರದಲ್ಲಿ ಭಯೋತ್ಪಾದಕ ದಾಳಿ ಪ್ರಕರಣಗಳು ಇಳಿಕೆಯಾಗಿವೆ. ಜೊತೆಗೆ ದೇಶದ ವಿವಿಧ ಭಾಗಗಳನ್ನು ಕಟ್ಟೆಚ್ಚರವಹಿಸಲಾಗಿದೆ ಎಂದು ಹೇಳಿದ್ದಾರೆ ಮೂರು ದಿನಗಳ ಅಖಿಲ ಭಾರತ ಪೊಲೀಸ್ ಮಹಾನಿರ್ದೇಶಕರು ಮತ್ತು ಪೊಲೀಸ್ ಮಹಾನಿರೀಕ್ಷಕರ […]

Advertisement

Wordpress Social Share Plugin powered by Ultimatelysocial