2ನೇ ಮದುವೆಗೆ ಪ್ರೇಮಾ ರೆಡಿ, ಕೊರಗಜ್ಜನ ಮೊರೆ ಹೋದ ನಟಿಗೆ ಸಿಕ್ತು ಗ್ರೀನ್ ಸಿಗ್ನಲ್.

ಹಲವು ವರ್ಷಗಳ ಹಿಂದೆ ವಿಚ್ಛೇದನ ಪಡೆದು ಒಂಟಿಯಾಗಿ ಜೀವನ ಸಾಗಿಸುತ್ತಿರುವ ನಟಿ ಪ್ರೇಮಾ ಇದೀಗ 2ನೇ ಮದುವೆ ಮಾಡಿಕೊಳ್ಳಲು ನಿರ್ಧರಿಸಿದ್ದಾರೆ. ಕಂಕಣ ಭಾಗ್ಯ ಕರುಣಿಸುವಂತೆ ದೈವದ ಮೋರೆ ಹೋಗಿದ್ದಾರೆ. ಕಾಪು ಕೊರಗಜ್ಜ ಸನ್ನಿಧಿಯಲ್ಲಿ ಮದುವೆಗಾಗಿ ಪ್ರಾರ್ಥನೆ ಮಾಡಿದ್ದಾರೆ. ಖಾಸಗಿ ಕಾರ್ಯಕ್ರಮಕ್ಕೆ ಭೇಟಿ ನೀಡಿದ ನಟಿ ಪ್ರೇಮಾ ಕೊರಗಜ್ಜನ ಸನ್ನಿಧಿಗೂ ಭೇಟಿ ನೀಡಿದ್ರು. ಉಡುಪಿ ಜಿಲ್ಲೆಯ ಕಾಪು ಕೊರಗಜ್ಜ ಸನ್ನಿಧಿ ಇದಾಗಿದ್ದು, ನಟಿ ಪ್ರೇಮಾ ಜೊತೆ ತಮ್ಮ ಅಯ್ಯಪ್ಪ ಪತ್ನಿ ನಟಿ ಅನು ಅಯ್ಯಪ್ಪ ಕೂಡ ದೇವಸ್ಥಾನಕ್ಕೆ ಭೇಟಿ ನೀಡಿದ್ರು. 2016 ರಲ್ಲಿ ತಮ್ಮ 10 ವರ್ಷದ ದಾಂಪತ್ಯಕ್ಕೆ ವಿದಾಯ ಹೇಳಿದ್ರು. ಪರಸ್ಪರ ಒಪ್ಪಿಗೆ ಮೇರೆಗೆ ಪ್ರೇಮಾ ದಂಪತಿ ಬೆಂಗಳೂರಿನ ಕೌಟಂಬಿಕ ನ್ಯಾಯಾಲಯದಲ್ಲಿ ವಿಚ್ಚೇದನ ಪಡೆದ್ರು. 1995 ರಲ್ಲಿ ಶಿವರಾಜಕುಮಾರ್ ರವರ `ಸವ್ಯಸಾಚಿ’ ಮತ್ತು ರಾಘವೇಂದ್ರ ರಾಜಕುಮಾರ್ ರವರ `ಆಟ ಹುಡುಗಾಟ’ ಚಿತ್ರದಿಂದ ಸಿನಿಪಯಣ ಆರಂಭಿಸಿದರು. ನಂತರ ಶಿವಣ್ಣರವರ `ಓಂ’ ಚಿತ್ರದಲ್ಲಿನ ನಟನೆಗೆ ರಾಜ್ಯ ಪ್ರಶಸ್ತಿ ಪಡೆದರು. 1996 ರಲ್ಲಿ ತೆರೆಕಂಡ `ನಮ್ಮೂರ ಮಂದಾರ ಹೂವೇ’ ಚಿತ್ರದಲ್ಲಿ ಅದ್ಭುತ ನಟನೆ ನೀಡಿದರು. ನಂತರ ತೆಲುಗು ಮತ್ತು ಮಲಯಾಳಂ ಚಿತ್ರದಲ್ಲಿ ನಟಿಸಿದ ಪ್ರೇಮ, ನಾನು ನನ್ನ ಹೆಂಡ್ತೀರು, ಯಜಮಾನ ,ಕನಸುಗಾರ,ಆಪ್ತಮಿತ್ರ ಮುಂತಾದ ಹಿಟ್ ಚಿತ್ರಗಳನ್ನು ನೀಡಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಸಂಸದರ ಮಾಜಿ ಕಾರು ಚಾಲಕನ ಭೀಕರ ಹತ್ಯೆ.

Thu Jan 19 , 2023
ವಿಜಯಪುರ ಸಂಸದ ರಮೇಶ್ ಜಿಗಜಿಣಗಿ ಮಾಜಿ ಕಾರು ಚಾಲಕ. ನಗರದ ಜಾಡರ್ ಓಣಿ ನಿವಾಸಿ ಮಲ್ಲಿಕಾರ್ಜುನ್ ದೊಡಮನಿ (43ವರ್ಷ) ಹತ್ಯೆಯಾಗಿರುವ ದುರ್ದೈವಿ. ಕಳೆದ ಮೂರು ವರ್ಷಗಳಿಂದ ಸಂಸದ ರಮೇಶ್ ಜಿಗಜಿಣಗಿ ಹತ್ತಿರ ಕಾರು ಚಾಲನೆ ಮಾಡಿ ಬಿಟ್ಟಿದ ನಗರದಲ್ಲಿ ಅಟೋ ಓಡಿಸಿಕೊಂಡು ಜೀವನ ಸಾಗಿಸುತ್ತಿದ್ದ ನಿನ್ನೆ ದಿನ ಬುಧವಾರ ತಡ ರಾತ್ರಿ ತನ್ನ ಅಕ್ಕ ಶಾಂತವ್ವ ಳನ್ನು ಆಕೆಯ ಮನೆಗೆ ಬಿಟ್ಟು ಬರಲು ಹೋಗಿದ್ದ ಹಿಂತುರುಗಿ ಬರುವಾಗ ಈ ಹತ್ಯೆ […]

Advertisement

Wordpress Social Share Plugin powered by Ultimatelysocial