ತಮ್ಮ ವಿರುದ್ಧ ಬಾಯಿಗೆ ಬಂದಂತೆ ಮಾತನಾಡುತ್ತಿರುವ ಜನರಿಗೆ ಯಶ್ ಖಡಕ್ಕೆ ಉತ್ತರವನ್ನೇ ಕೊಟ್ಟಿದ್ದಾರೆ. ಸಂದರ್ಶನವೊಂದರಲ್ಲಿ ಮಾತನಾಡಿರುವ ಅವರು ಕೆಲವರು ನನ್ನ ವಿರುದ್ಧ ತಮಗೆ ತೋಚಿದಂತೆ ಮಾತನಾಡುತ್ತಿದ್ದಾರೆ. ಆ ಕುರಿತು ನನಗೇನೂ ಬೇಸರವಿಲ್ಲ. ಗೆಲುವನ್ನು ನಿಭಾಯಿಸುವುದಕ್ಕಿಂತ, ಹೊಸ ಹೊಸ ಗೆಲುವನ್ನು ಕಾಣುವುದು ನನಗಿಷ್ಟ.
ಹೋರಾಡುತ್ತ ಮೃತಪಟ್ಟರೆ ನನಗೇನೂ ಬೇಸರವಿಲ್ಲ, ನಾನು ಹೋರಾಟದಲ್ಲೇ ಇದ್ದೀನಲ್ಲ ಅದು ಮುಖ್ಯವಾಗಬೇಕು’ ಎಂದು ತಿಳಿಸಿದ್ದಾರೆ.
ಕೆಜಿಎಫ್ 2 ಸಿನಿಮಾದ ಬಳಿಕ ಅವರ ಮುಂದೆ ಹಲವಾರು ಪ್ರಶ್ನೆಗಳು ಎದುರಾದವಂತೆ. ಆ ಕುರಿತು ಅವರು ಮಾತನಾಡಿದ್ದಾರೆ. ಕೆಜಿಎಫ್ ಗೆಲುವಿನ ನಂತರ ಯಾಕೆ ನೀವು ಮತ್ತೆ ಸಿನಿಮಾ ಮಾಡುತ್ತಿಲ್ಲ. ಆ ಗೆಲುವನ್ನು ಸರಿಯಾದ ರೀತಿಯಲ್ಲಿ ಉಪಯೋಗಿಸಿಕೊಳ್ಳಬೇಕಿತ್ತು ಅಲ್ಲವಾ? ಕೆಜಿಎಫ್ 3 ಮಾಡದೇ ನಿಮಗೆ ವಿಧಿಯಿಲ್ಲ ಈ ರೀತಿಯ ಮಾತುಗಳನ್ನು ಆಡಿದ್ದಾರಂತೆ. ಆದರೆ, ಈ ಎಲ್ಲ ಪ್ರಶ್ನೆಗಳಿಗೂ ಮುಂದಿನ ದಿನಗಳಲ್ಲಿ ಉತ್ತರ ಸಿಗುವಂತೆ ಮಾಡುವೆ ಎಂದು ಯಶ್ ಹೇಳಿಕೊಂಡಿದ್ದಾರೆ.
ಯಶ್ ಮುಂದಿನ ಸಿನಿಮಾ ಯಾವುದು ಎನ್ನುವುದರ ಕುರಿತು ಹಲವು ತಿಂಗಳಿಂದ ಚರ್ಚೆ ಮಾಡಲಾಗುತ್ತಿದೆ. ಆದರೆ, ಈ ಕುರಿತು ಅವರು ಯಾವುದೇ ರೀತಿಯ ಕ್ಲ್ಯಾರಿಟಿ ನೀಡಿಲ್ಲ. ಇತ್ತೀಚೆಗೆ ಬರುತ್ತಿರುವ ಸುದ್ದಿಗಳ ಪ್ರಕಾರ ಕೆವಿಎನ್ ಪ್ರೊಡಕ್ಷನ್ ನಿರ್ಮಾಣದ ಸಿನಿಮಾದಲ್ಲಿ ಯಶ್ ನಟಿಸಲಿದ್ದಾರಂತೆ. ಇದೊಂದು ಭಾರೀ ಬಜೆಟ್ ಸಿನಿಮಾವಾಗಿದ್ದು, ನಾಲ್ಕು ನೂರು ಕೋಟಿ ರೂಪಾಯಿ ವೆಚ್ಚದಲ್ಲಿ ಚಿತ್ರ ನಿರ್ಮಾಣವಾಗಲಿದೆ ಎಂಬ ಸುದ್ದಿ ಹರಿದಾಡುತ್ತಿದೆ.
https://play.google.com/store/apps/details?id=com.speed.newskannada