ಹೋರಾಡುತ್ತಾ ಸತ್ತರೆ ನನಗೇನೂ ಬೇಸರವಿಲ್ಲ.

ಮ್ಮ ವಿರುದ್ಧ ಬಾಯಿಗೆ ಬಂದಂತೆ ಮಾತನಾಡುತ್ತಿರುವ ಜನರಿಗೆ ಯಶ್ ಖಡಕ್ಕೆ ಉತ್ತರವನ್ನೇ ಕೊಟ್ಟಿದ್ದಾರೆ. ಸಂದರ್ಶನವೊಂದರಲ್ಲಿ ಮಾತನಾಡಿರುವ ಅವರು ಕೆಲವರು ನನ್ನ ವಿರುದ್ಧ ತಮಗೆ ತೋಚಿದಂತೆ ಮಾತನಾಡುತ್ತಿದ್ದಾರೆ. ಆ ಕುರಿತು ನನಗೇನೂ ಬೇಸರವಿಲ್ಲ. ಗೆಲುವನ್ನು ನಿಭಾಯಿಸುವುದಕ್ಕಿಂತ, ಹೊಸ ಹೊಸ ಗೆಲುವನ್ನು ಕಾಣುವುದು ನನಗಿಷ್ಟ.

ಹೋರಾಡುತ್ತ ಮೃತಪಟ್ಟರೆ ನನಗೇನೂ ಬೇಸರವಿಲ್ಲ, ನಾನು ಹೋರಾಟದಲ್ಲೇ ಇದ್ದೀನಲ್ಲ ಅದು ಮುಖ್ಯವಾಗಬೇಕು’ ಎಂದು ತಿಳಿಸಿದ್ದಾರೆ.

ಕೆಜಿಎಫ್ 2 ಸಿನಿಮಾದ ಬಳಿಕ ಅವರ ಮುಂದೆ ಹಲವಾರು ಪ್ರಶ್ನೆಗಳು ಎದುರಾದವಂತೆ. ಆ ಕುರಿತು ಅವರು ಮಾತನಾಡಿದ್ದಾರೆ. ಕೆಜಿಎಫ್ ಗೆಲುವಿನ ನಂತರ ಯಾಕೆ ನೀವು ಮತ್ತೆ ಸಿನಿಮಾ ಮಾಡುತ್ತಿಲ್ಲ. ಆ ಗೆಲುವನ್ನು ಸರಿಯಾದ ರೀತಿಯಲ್ಲಿ ಉಪಯೋಗಿಸಿಕೊಳ್ಳಬೇಕಿತ್ತು ಅಲ್ಲವಾ? ಕೆಜಿಎಫ್ 3 ಮಾಡದೇ ನಿಮಗೆ ವಿಧಿಯಿಲ್ಲ ಈ ರೀತಿಯ ಮಾತುಗಳನ್ನು ಆಡಿದ್ದಾರಂತೆ. ಆದರೆ, ಈ ಎಲ್ಲ ಪ್ರಶ್ನೆಗಳಿಗೂ ಮುಂದಿನ ದಿನಗಳಲ್ಲಿ ಉತ್ತರ ಸಿಗುವಂತೆ ಮಾಡುವೆ ಎಂದು ಯಶ್ ಹೇಳಿಕೊಂಡಿದ್ದಾರೆ.

ಯಶ್ ಮುಂದಿನ ಸಿನಿಮಾ ಯಾವುದು ಎನ್ನುವುದರ ಕುರಿತು ಹಲವು ತಿಂಗಳಿಂದ ಚರ್ಚೆ ಮಾಡಲಾಗುತ್ತಿದೆ. ಆದರೆ, ಈ ಕುರಿತು ಅವರು ಯಾವುದೇ ರೀತಿಯ ಕ್ಲ್ಯಾರಿಟಿ ನೀಡಿಲ್ಲ. ಇತ್ತೀಚೆಗೆ ಬರುತ್ತಿರುವ ಸುದ್ದಿಗಳ ಪ್ರಕಾರ ಕೆವಿಎನ್ ಪ್ರೊಡಕ್ಷನ್ ನಿರ್ಮಾಣದ ಸಿನಿಮಾದಲ್ಲಿ ಯಶ್ ನಟಿಸಲಿದ್ದಾರಂತೆ. ಇದೊಂದು ಭಾರೀ ಬಜೆಟ್ ಸಿನಿಮಾವಾಗಿದ್ದು, ನಾಲ್ಕು ನೂರು ಕೋಟಿ ರೂಪಾಯಿ ವೆಚ್ಚದಲ್ಲಿ ಚಿತ್ರ ನಿರ್ಮಾಣವಾಗಲಿದೆ ಎಂಬ ಸುದ್ದಿ ಹರಿದಾಡುತ್ತಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಅಪಘಾತದಿಂದ ಗಾಯಗೊಂಡವರ ರೀತಿ ನಟಿಸಿ ದಾರಿಹೋಕರನ್ನ ದೋಚ್ತಿದ್ದ ಗ್ಯಾಂಗ್ ಅರೆಸ್ಟ್.

Thu Jan 12 , 2023
ಮುಬಾರಕ್,ಸುನಿಲ್ ಹಾಗೂ ಇಸ್ಮಾಯಿಲ್ ಬಂಧಿತ ಆರೋಪಿಗಳು. ಸಂಪಿಗೆಹಳ್ಳಿ ಪೊಲೀಸರಿಂದ ಆರೋಪಿಗಳ ಕೈಗೆ ಕೈಕೋಳ. ಬೈಕನ್ನ ರಸ್ತೆಬದಿಯಲ್ಲಿ ತಳ್ಳಿ ಅಪಘಾತದ ಸೀನನ್ನ ಕ್ರಿಯೇಟ್ ಮಾಡ್ತಿದ್ದ ಗ್ಯಾಂಗ್. ಅಯ್ಯೋ ಪಾಪಾ ಅಂತ ಸಹಾಯಕ್ಕೆ ಹೋದ್ರೆ ಅಲ್ಲೇ ಮೊಬೈಲ್,ಚೈನ್,ಬೈಕ್ ಕಿತ್ತುಕೊಂಡು ಪರಾರಿಯಾಗ್ತಿದ್ರು. ಈ ಬಗ್ಗೆ ಈಶಾನ್ಯ ವಿಭಾಗದಲ್ಲಿ 12 ಪ್ರಕರಣ ದಾಖಲಾಗಿತ್ತು. ಪ್ರಕರಣದ ಜಾಡು ಹಿಡಿದ ಪೊಲೀಸರಿಂದ ಮೂವರು ಆರೋಪಿಗಳ ಬಂಧನ. ಬಂಧಿತರಿಂದ 5 ಲಕ್ಷ ರೂ ಬೆಲೆಬಾಳುವ ಬೈಕ್ ಗಳು ವಶ.   […]

Advertisement

Wordpress Social Share Plugin powered by Ultimatelysocial